AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

ಸುರೇಖಾ ಅವರಿಗೆ 66 ವರ್ಷ ವಯಸ್ಸಾಗಿತ್ತು. ಹೃದಯಾಘಾತವಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.

Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ
ಹಿರಿಯ ನಟಿ ಸುರೇಖಾ
ಮದನ್​ ಕುಮಾರ್​
|

Updated on: Jun 06, 2021 | 12:06 PM

Share

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಜಯಾ ಅವರು ನಿಧನರಾದ ಸುದ್ದಿ ಕೇಳಿಬಂದ ಬೆನ್ನಲ್ಲೇ ಮತ್ತೋರ್ವ ಹಿರಿಯ ನಟಿ ಸುರೇಖಾ ಮೃತರಾಗಿದ್ದಾರೆ. ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ಸ್ಟಾರ್​ ನಟರ ಜೊತೆ ನಟಿಸುವ ಮೂಲಕ ಜನಪ್ರಿಯರಾಗಿದ್ದ ಅವರು ಹಲವು ವರ್ಷಗಳ ಕಾಲ ಚಂದನವನದಲ್ಲಿ ಸಕ್ರಿಯರಾಗಿದ್ದರು. ಶನಿವಾರ (ಜೂ.5) ರಾತ್ರಿ 9.30ರ ಸುಮಾರಿಗೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಸುರೇಖಾ ಅವರಿಗೆ 66 ವರ್ಷ ವಯಸ್ಸಾಗಿತ್ತು. ಹೃದಯಾಘಾತವಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಸುರೇಖಾ ಬದುಕುಳಿಯಲಿಲ್ಲ. ಬನಶಂಕರಿ ಚಿತಾಗಾರದಲ್ಲಿ ಇಂದು (ಜೂ.6) ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಸುರೇಖಾ ಭರತನಾಟ್ಯ ಮತ್ತು ಕೂಚುಪುಡಿ ನೃತ್ಯ ಕಲಾವಿದೆ ಆಗಿದ್ದರು. ಹಲವು ದೇಶಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಅವರಿಗೆ ಅಪಾರ ಅಭಿಮಾನಿಗಳಿದ್ದರು. ಡಾ. ರಾಜ್​ಕುಮಾರ್​ ಅವರ ಹಲವಾರು ಸಿನಿಮಾಗಳಲ್ಲಿ ಸುರೇಖಾ ನಟಿಸಿದ್ದರು. 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸುರೇಖಾ ಅಭಿನಯಿಸಿದ್ದರು. ಮಾಯಾ ಮನುಷ್ಯ, ನಾನು ಬಾಳಬೇಕು, ನಾನು ಅವನಿಲ್ಲೈ ಮುಂತಾದ ಸಿನಿಮಾಗಳಲ್ಲಿ ಅವರು ನಾಯಕಿ ಆಗಿದ್ದರು.

ಆಪರೇಷನ್ ಜಾಕ್ ಪಾಟ್​ನಲ್ಲಿ ಸಿಐಡಿ 999, ತ್ರಿಮೂರ್ತಿ, ಒಲವು ಗೆಲುವು, ಗಿರಿ ಕನ್ಯೆ, ಸಾಕ್ಷಾತ್ಕಾರ, ಕಸ್ತೂರಿ ನಿವಾಸ, ಹುಲಿಯ ಹಾಲಿನ ಮೇವು ಮುಂತಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಶಿವಕನ್ಯೆ, ಕಾವೇರಿ, ಕೆಸರಿನ ಕಮಲ, ಬ್ಯಾಂಕರ್ ಮಾರ್ಗಯ್ಯ, ಆಲೆಮನೆ, ನಾಗರಹೊಳೆ, ತಾಯಿ ದೇವರು, ಭಕ್ತ ಸಿರಿಯಾಳ ಮುಂತಾದ ಚಿತ್ರಗಳಲ್ಲಿ ಸುರೇಖಾ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಇದನ್ನೂ ಓದಿ:

ನಟಿ ಬಿ. ಜಯಾ ಮೃತದೇಹ ರಸ್ತೆ ಪಕ್ಕದಲ್ಲಿ ಯಾಕಿತ್ತು? ಕುಟುಂಬದವರಿಂದಲೇ ಸಿಕ್ತು ಸ್ಪಷ್ಟನೆ

Koti Ramu: ಕೋಟಿ ರಾಮು ನಿಧನದ ಬಳಿಕ ಮೊದಲ ಬಾರಿ ಮೌನ ಮುರಿದ ಪತ್ನಿ ಮಾಲಾಶ್ರೀ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್