AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಮದುವೆ ಸಂಭ್ರಮ, ನಡೆಯಲಿದೆ ಸಾಲು-ಸಾಲು ಶುಭ ಕಾರ್ಯ

Sandalwood wedding in February Month: 2025 ರ ಆರಂಭದಲ್ಲಿ ಚಂದನವನದಲ್ಲಿ ಸಾಲು-ಸಾಲು ಶುಭ ಕಾರ್ಯಗಳು ನಡೆಯುತ್ತಿವೆ. ಹಲವು ಸೆಲೆಬ್ರಿಟಿಗಳು ಒಬ್ಬರ ಹಿಂದೊಬ್ಬರಂತೆ ವಿವಾಹ ಆಗುತ್ತಿದ್ದಾರೆ. ಡಾಲಿ ಧನಂಜಯ್ ಸೇರಿದಂತೆ ಇನ್ನೂ ಕೆಲವು ಸೆಲೆಬ್ರಿಟಿಗಳ ಮದುವೆ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಇಲ್ಲಿದೆ ನೋಡಿ ಪಟ್ಟಿ.

ಸ್ಯಾಂಡಲ್​ವುಡ್​ನಲ್ಲಿ ಮದುವೆ ಸಂಭ್ರಮ, ನಡೆಯಲಿದೆ ಸಾಲು-ಸಾಲು ಶುಭ ಕಾರ್ಯ
Sandalwood Wedding
ಮಂಜುನಾಥ ಸಿ.
|

Updated on:Jan 19, 2025 | 1:22 PM

Share

2025ರ ಆರಂಭದಲ್ಲಿ ಚಂದನವನದಲ್ಲಿ ಸಾಲು-ಸಾಲು ಕಾರ್ಯಗಳು ನಡೆಯುತ್ತಿವೆ. ಒಂದರ ಹಿಂದೊಂದರಂತೆ ಸೆಲೆಬ್ರಿಟಿಗಳ ವಿವಾಹ ಮಹೋತ್ಸವಗಳು ನಡೆಯುತ್ತಿವೆ. ಈ ವರ್ಷದ ಆರಂಭದಲ್ಲಿ ಕೆಲವು ಸೆಲೆಬ್ರಿಟಿಗಳು ಪೋಷಕರಾಗಿದ್ದಾರೆ. ಶ್ರುತಿ ಸೇರಿದಂತೆ ಇನ್ನೂ ಕೆಲವರು ಹೊಸ ಮನೆಗಳನ್ನು ಖರೀದಿ ಮಾಡಿದ್ದಾರೆ ಅಥವಾ ಕಟ್ಟಿಸಿದ್ದಾರೆ. ಇದೀಗ ಡಾಲಿ ಧನಂಜಯ್ ಸೇರಿದಂತೆ ಇನ್ನೂ ಕೆಲವರು ಮದುವೆ ಆಗುತ್ತಿದ್ದಾರೆ. ಒಟ್ಟಿನಲ್ಲಿ ಸ್ಯಾಂಡಲ್​ವುಡ್​ನಲ್ಲಿ ಸಾಲು-ಸಾಲು ಶುಭ ಕಾರ್ಯ ನಡೆಯುತ್ತಿದೆ.

ಡಾಲಿ ಧನಂಜಯ್ ಮದುವೆ

ನಟರಾಕ್ಷಸ ಎಂದೇ ಹೆಸರುವಾಸಿ ಆಗಿರುವ ಡಾಲಿ ಧನಂಜಯ್ ಅವರ ಮದುವೆ ಕೆಲವೇ ದಿನಗಳಲ್ಲಿ ನಡೆಯಲಿದೆ. ಡಾಲಿ ಧನಂಜಯ್ ಅವರು ವೈದ್ಯೆ ಧನ್ಯತಾ ಅವರನ್ನು ವಿವಾಹವಾಗಲಿದ್ದು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ರಾಜ್ಯದ ಪ್ರಮುಖ ಮಠಗಳ ಸ್ವಾಮೀಜಿಗಳು ಸಿನಿಮಾ, ರಾಜಕೀಯ ಗಣ್ಯರುಗಳಿಗೆ ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿದ್ದಾರೆ. ಇವರ ವಿವಾಹ ಫೆಬ್ರವರಿ ಹದಿನಾರರಂದು ಮೈಸೂರಿನಲ್ಲಿ ಬಲು ಅದ್ಧೂರಿಯಾಗಿ ನಡೆಯಲಿದೆ.

ನಟ ರಾಣಾ ವಿವಾಹ

ರಕ್ಷಿತಾ ಅವರ ಸಹೋದರ, ‘ಏಕ್ ಲವ್ ಯಾ’ ಸಿನಿಮಾದ ನಾಯಕ ರಾಣಾ ಅವರ ವಿವಾಹವೂ ಫೆಬ್ರವರಿಯಲ್ಲಿಯೇ ನಡೆಯಲಿದೆ. ನಿರ್ದೇಶಕ ಪ್ರೇಮ್ ಮತ್ತು ರಕ್ಷಿತಾ ಅವರುಗಳು ಮುಂದೆ ನಿಂತು ರಾಣಾ ಮದುವೆ ಮಾಡುತ್ತಿದ್ದಾರೆ. ಇವರೇ ಮುಂದೆ ನಿಂತು ಸಿನಿಮಾ ಮತ್ತು ರಾಜಕೀಯ ಗಣ್ಯರಿಗೆ ವಿವಾಹ ಆಮಂತ್ರಣ ಪತ್ರಿಕೆ ವಿತರಣೆ ಮಾಡುತ್ತಿದ್ದಾರೆ. ರಾಣಾ ವಿವಾಹ ಫೆಬ್ರವರಿ 7 ರಂದು ನಡೆಯಲಿದೆ.

ಜಯಮಾಲಾ ಪುತ್ರಿ ಸೌಂದರ್ಯ ವಿವಾಹ

ಕನ್ನಡ ಚಿತ್ರರಂಗದ ಹಿರಿಯ ನಟಿ, ರಾಜಕಾರಣಿಯೂ ಆಗಿರುವ ಜಯಮಾಲಾ ಅವರ ಪುತ್ರಿ ಸೌಂದರ್ಯ ಅವರ ವಿವಾಹ ಸಹ ಫೆಬ್ರವರಿ 7 ರಂದೇ ನಡೆಯಲಿದೆ. ಜಯಮಾಲಾ ಅವರು ಸಹ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆಯನ್ನು ನೀಡುತ್ತಿದ್ದಾರೆ. ಹಿರಿಯ ಐಎಎಸ್ ಅಧಿಕಾರಿ ರಾಮಚಂದ್ರ ರಾವ್ ಪುತ್ರ ರುಷಬ್ ಅನ್ನು ಸೌಂದರ್ಯ ಮದುವೆ ಆಗಲಿದ್ದಾರೆ. ಇಬ್ಬರ ವಿವಾಹ ಪ್ಯಾಲೆಸ್ ಗ್ರೌಂಡ್​ನಲ್ಲಿ ನಡೆಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Sun, 19 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ