AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಯಶ್​ ಮುಂದಿನ ಚಿತ್ರದ ಪಾತ್ರ ರಿವೀಲ್​; ಫ್ಯಾನ್ಸ್​ ಫುಲ್​ ಫಿದಾ

Rocking Star Yash: ಕೆಜಿಎಫ್​ 2 ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಈಗಾಗಲೆ ಸಲಾರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಹೀಗಿರುವಾಗಲೇ ಯಶ್​ಹೊಸ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ.

Yash: ಯಶ್​ ಮುಂದಿನ ಚಿತ್ರದ ಪಾತ್ರ ರಿವೀಲ್​; ಫ್ಯಾನ್ಸ್​ ಫುಲ್​ ಫಿದಾ
ಅಭಿಮಾನಿಗಳು ಸಿದ್ಧಪಡಿಸಿದ ಫೋಟೋ
ರಾಜೇಶ್ ದುಗ್ಗುಮನೆ
| Edited By: |

Updated on:Jun 17, 2021 | 8:13 PM

Share

‘ಕೆಜಿಎಫ್​ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈಗ ಯಶ್​ ಮುಂದಿನ ಸಿನಿಮಾ ಬಗ್ಗೆ ಅಚ್ಚರಿಯ ಅಪ್​ಡೇಟ್​ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಕಂಡ ನಂತರದಲ್ಲಿ ಯಶ್​ ನಿರ್ದೇಶಕ ನರ್ತನ್ ​ಜತೆ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದ್ದು, ಈಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ. ಮೂಲಗಳ ಪ್ರಕಾರ ನರ್ತನ್​ ಸಿನಿಮಾದಲ್ಲಿ ಯಶ್​ ನೇವಿ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ.

ಯಶ್​ ಈರೆಗೆ ಈ ರೀತಿಯ ಪಾತ್ರ ನಿರ್ವಹಿಸಿಲ್ಲ. ಈಗ ಅವರು ಭಿನ್ನ ಪಾತ್ರ ಮಾಡುತ್ತಿರುವ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ. ಅಂದಹಾಗೆ, ನೌಕಾ ನೆಲೆಯ ಅಧಿಕಾರಿ ಎಂದರೆ, ಸಮುದ್ರ ದೃಶ್ಯಗಳು ಇರಲಿವೆಯೇ? ಹೌದು ಎಂದಾದರೆ ಶೂಟಿಂಗ್​ ಎಲ್ಲಿ ನಡೆಯಲಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕೆಜಿಎಫ್​ ಜುಲೈ ತಿಂಗಳಲ್ಲಿ ತೆರೆಗೆ ಬರುವ ಬಗ್ಗೆ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ, ಕೊವಿಡ್​ ಕಾರಣದಿಂದ ಇನ್ನೂ ಚಿತ್ರರಂಗ ಓಪನ್​ ಆಗಿಲ್ಲ. ಹೀಗಾಗಿ, ಸಿನಿಮಾ ರಿಲೀಸ್​ ಸದ್ಯಕ್ಕೆ ಸಾಧ್ಯವಾಗೋದು ಅನುಮಾನವೇ. ಪ್ಯಾನ್​ ಇಂಡಿಯಾ ಚಿತ್ರವಾದ್ದರಿಂದ ಸಾಕಷ್ಟು ಸಮಯ ತೆಗೆದುಕೊಂಡು ಚಿತ್ರ ರಿಲೀಸ್​ ಮಾಡಬಹುದು.

ಕೆಜಿಎಫ್​ 2 ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಈಗಾಗಲೆ ಸಲಾರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಹೀಗಿರುವಾಗಲೇ ಯಶ್​ ಹೊಸ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ.

ನರ್ತನ್​ ನಿರ್ದೇಶನದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಶಿವರಾಜ್​ಕುಮಾರ್​ ಹಾಗೂ ಶ್ರೀಮುರಳಿ ಕಾಂಬಿನೇಷನ್​ನಲ್ಲಿ ತೆರೆಗೆ ತಂದ ಮಫ್ತಿ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಕಾರಣಕ್ಕ ಯಶ್​-ನರ್ತನ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರದ ಮೇಲೆ ನಿರೀಕ್ಷೆ ಇದೆ.

ಇದನ್ನೂ ಓದಿ: ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

Published On - 7:20 pm, Thu, 17 June 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ