AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಯಶ್​ ಮುಂದಿನ ಚಿತ್ರದ ಪಾತ್ರ ರಿವೀಲ್​; ಫ್ಯಾನ್ಸ್​ ಫುಲ್​ ಫಿದಾ

Rocking Star Yash: ಕೆಜಿಎಫ್​ 2 ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಈಗಾಗಲೆ ಸಲಾರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಹೀಗಿರುವಾಗಲೇ ಯಶ್​ಹೊಸ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ.

Yash: ಯಶ್​ ಮುಂದಿನ ಚಿತ್ರದ ಪಾತ್ರ ರಿವೀಲ್​; ಫ್ಯಾನ್ಸ್​ ಫುಲ್​ ಫಿದಾ
ಅಭಿಮಾನಿಗಳು ಸಿದ್ಧಪಡಿಸಿದ ಫೋಟೋ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Jun 17, 2021 | 8:13 PM

Share

‘ಕೆಜಿಎಫ್​ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈಗ ಯಶ್​ ಮುಂದಿನ ಸಿನಿಮಾ ಬಗ್ಗೆ ಅಚ್ಚರಿಯ ಅಪ್​ಡೇಟ್​ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಕಂಡ ನಂತರದಲ್ಲಿ ಯಶ್​ ನಿರ್ದೇಶಕ ನರ್ತನ್ ​ಜತೆ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದ್ದು, ಈಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ. ಮೂಲಗಳ ಪ್ರಕಾರ ನರ್ತನ್​ ಸಿನಿಮಾದಲ್ಲಿ ಯಶ್​ ನೇವಿ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ.

ಯಶ್​ ಈರೆಗೆ ಈ ರೀತಿಯ ಪಾತ್ರ ನಿರ್ವಹಿಸಿಲ್ಲ. ಈಗ ಅವರು ಭಿನ್ನ ಪಾತ್ರ ಮಾಡುತ್ತಿರುವ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ. ಅಂದಹಾಗೆ, ನೌಕಾ ನೆಲೆಯ ಅಧಿಕಾರಿ ಎಂದರೆ, ಸಮುದ್ರ ದೃಶ್ಯಗಳು ಇರಲಿವೆಯೇ? ಹೌದು ಎಂದಾದರೆ ಶೂಟಿಂಗ್​ ಎಲ್ಲಿ ನಡೆಯಲಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕೆಜಿಎಫ್​ ಜುಲೈ ತಿಂಗಳಲ್ಲಿ ತೆರೆಗೆ ಬರುವ ಬಗ್ಗೆ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ, ಕೊವಿಡ್​ ಕಾರಣದಿಂದ ಇನ್ನೂ ಚಿತ್ರರಂಗ ಓಪನ್​ ಆಗಿಲ್ಲ. ಹೀಗಾಗಿ, ಸಿನಿಮಾ ರಿಲೀಸ್​ ಸದ್ಯಕ್ಕೆ ಸಾಧ್ಯವಾಗೋದು ಅನುಮಾನವೇ. ಪ್ಯಾನ್​ ಇಂಡಿಯಾ ಚಿತ್ರವಾದ್ದರಿಂದ ಸಾಕಷ್ಟು ಸಮಯ ತೆಗೆದುಕೊಂಡು ಚಿತ್ರ ರಿಲೀಸ್​ ಮಾಡಬಹುದು.

ಕೆಜಿಎಫ್​ 2 ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಈಗಾಗಲೆ ಸಲಾರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಹೀಗಿರುವಾಗಲೇ ಯಶ್​ ಹೊಸ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ.

ನರ್ತನ್​ ನಿರ್ದೇಶನದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಶಿವರಾಜ್​ಕುಮಾರ್​ ಹಾಗೂ ಶ್ರೀಮುರಳಿ ಕಾಂಬಿನೇಷನ್​ನಲ್ಲಿ ತೆರೆಗೆ ತಂದ ಮಫ್ತಿ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಕಾರಣಕ್ಕ ಯಶ್​-ನರ್ತನ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರದ ಮೇಲೆ ನಿರೀಕ್ಷೆ ಇದೆ.

ಇದನ್ನೂ ಓದಿ: ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

Published On - 7:20 pm, Thu, 17 June 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ