Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಕನ್ನಡ ಸಿನಿಮಾ ನಟ-ನಟಿಯರಿಗೆ ಅವಮಾನ

Suresh Kondeti: ಗೋವಾದಲ್ಲಿ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆಂದು ತೆರಳಿದ್ದ ಕನ್ನಡದ ನಟ-ನಟಿಯರಿಗೆ ಅಪಮಾನ ಮಾಡಿದ್ದಾರೆ ಎನ್ನಲಾಗಿದೆ.

ಗೋವಾದಲ್ಲಿ ಕನ್ನಡ ಸಿನಿಮಾ ನಟ-ನಟಿಯರಿಗೆ ಅವಮಾನ
ಸ್ಯಾಂಡಲ್​ವುಡ್
Follow us
ಮಂಜುನಾಥ ಸಿ.
|

Updated on: Dec 03, 2023 | 6:47 PM

ಪ್ರಶಸ್ತಿ ಕಾರ್ಯಕ್ರಮಕ್ಕೆಂದು ಕನ್ನಡದ ಕೆಲವು ಸಿನಿಮಾ ನಟ-ನಟಿಯರನ್ನು ಗೋವಾಕ್ಕೆ (Goa) ಆಹ್ವಾನಿಸಿ ಅವಮಾನ ಮಾಡಿರುವ ಘಟನೆ ನಡೆದಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಮಾಧ್ಯಮ ಸಲಹೆಗಾರ ಎಂದು ಹೇಳಲಾಗುತ್ತಿರುವ ತೆಲುಗು ಚಿತ್ರರಂಗದ ‘ಕುಖ್ಯಾತ’ ಸಿನಿಮಾ ಪತ್ರಕರ್ತ ಸುರೇಶ್ ಕೊಂಡೇಟಿ ಸಂತೋಷಂ ಸಿನಿಮಾ ಅವಾರ್ಡ್ಸ್ ಕಾರ್ಯಕ್ರಮ ಆಯೋಜಿಸಿ ಅದಕ್ಕೆ ಕೆಲವು ಕನ್ನಡ ಸಿನಿಮಾ ನಟರನ್ನು ಆಹ್ವಾನಿಸಿದ್ದರು. ಆದರೆ ಅಲ್ಲಿಗೆ ಹೋದ ನಟರಿಗೆ ಅಪಮಾನ ಮಾಡಲಾಗಿದೆ.

ಸಂತೋಷಂ ಅವಾರ್ಡ್ಸ್ ಸಮಾರಂಭಕ್ಕೆ ಕನ್ನಡದ ಹಲವು ನಟ-ನಟಿಯರು ಕನ್ನಡ ಚಿತ್ರರಂಗದಿಂದ ತೆರಳಿದ್ದರು. ಆದರೆ ಅಲ್ಲಿಗೆ ಹೋದಾಗ ನಟ-ನಟಿಯರಿಗೆ ಸರಿಯಾದ ವ್ಯವಸ್ಥೆ ಮಾಡಿರಲಿಲ್ಲ. ಹೋಟೆಲ್ ಬುಕಿಂಗ್​ ಆಗಿರಲಿಲ್ಲ, ಕನ್ನಡ ಚಿತ್ರರಂಗದವರನ್ನು ಸ್ವಾಗತಿಸುವವರೂ ಸಹ ಇರಲಿಲ್ಲ. ಈ ಅವ್ಯವಸ್ಥೆಗಳಿಂದ ಬೇಸತ್ತ ಕನ್ನಡ ಚಿತ್ರರಂಗದ ತಾರೆಯರು ಕಾರ್ಯಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಮೇಶ್ ಅರವಿಂದ್, ಸಪ್ತಮಿ ಗೌಡ, ರಾಜವರ್ಧನ್, ಬಿ ಸುರೇಶ್, ಶೈಲಜಾ ನಾಗ್ ಮುಂತಾದವರು , ಸುಮಾರು 30ರಿಂದ 35 ಮಂದಿ ಕನ್ನಡದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ಅವರನ್ನು ಸೂಕ್ತವಾಗಿ ನಡೆಸಿಕೊಳ್ಳಲಾಗಿಲ್ಲ. ಭರವಸೆ ನೀಡಿದಂತೆ ವ್ಯವಸ್ಥೆ ಮಾಡಲಾಗಿರಲಿಲ್ಲ. ‘ಕ್ರಾಂತಿ’ ಸಿನಿಮಾಕ್ಕೆ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ವೇದಿಕೆ ಮೇಲೆ ಪವರ್ ಕಟ್ ಆದ ಘಟನೆಯೂ ಸಹ ನಡೆಯಿತು. ಕೊನೆಗೆ ಕನ್ನಡದ ನಟ-ನಟಿಯರು ಕಾರ್ಯಕ್ರಮವನ್ನು ಬಾಯ್​ಕಾಟ್ ಮಾಡಿ ಅರ್ಧಕ್ಕೆ ಬಿಟ್ಟು ಹೊರನಡೆದರು. ಇಂದು (ಡಿಸೆಂಬರ್ 03) ಸಂಜೆ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್​ವುಡ್ ಕ್ವೀನ್ ರಮ್ಯಾ

ಕನ್ನಡದ ನಟರು ಮಾತ್ರವೇ ಅಲ್ಲದೆ ತಮಿಳಿನ ನಟ-ನಟಿಯರು ಸಹ ಕಾರ್ಯಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಕೆಲವು ತಮಿಳಿನ ನಟರು ಕಾರ್ಯಕ್ರಮದ ಅವ್ಯವಸ್ಥೆ ಬಗ್ಗೆ ಟೀಕೆ ಮಾಡಿದ್ದಾರೆ.

ಸಂತೋಷಂ ಅವಾರ್ಡ್ಸ್ ಕಾರ್ಯಕ್ರಮವನ್ನು ಸುರೇಶ್ ಕೊಂಡೇಟಿ ಆಯೋಜನೆ ಮಾಡಿದ್ದರು. ಈ ಹಿಂದೆ ಕೆಲವು ಸಿನಿಮಾಗಳನ್ನು ನಿರ್ದೇಶನವೂ ಮಾಡಿದ್ದ ಸುರೇಶ್ ಕೊಂಡೇಟಿ ಕಳೆದ ಕೆಲ ವರ್ಷಗಳಿಂದ ಸಿನಿಮಾ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದಾರೆ. ದೊಡ್ಡ ಸಿನಿಮಾಗಳ ಪ್ರೆಸ್​ಮೀಟ್​ಗೆ ಹೋಗಿ ವೇದಿಕೆ ಮೇಲಿರುವವರಿಗೆ ಕೆಟ್ಟ ಪ್ರಶ್ನೆಗಳನ್ನು, ಒಮ್ಮೊಮ್ಮೆ ನಟ-ನಟಿಯರ ಖಾಸಗಿ ಪ್ರಶ್ನೆಗಳನ್ನು ಕೇಳುವ ಮೂಲಕ ವೈರಲ್ ಆಗಿದ್ದಾರೆ ಸುರೇಶ್ ಕೊಂಡೇಟಿ. ಹಲವು ಸಿನಿಮಾಗಳ ನಟ, ನಿರ್ಮಾಪಕ, ನಿರ್ದೇಶಕರು ಸುರೇಶ್ ಕೊಂಡೇಟಿ ಕೇಳಿರುವ ಖಾಸಗಿ ಪ್ರಶ್ನೆಗಳಿಗೆ ಸಿಟ್ಟಾಗಿ ಜಗಳ ಮಾಡಿದ್ದೂ ಸಹ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ