ಗೋವಾದಲ್ಲಿ ಕನ್ನಡ ಸಿನಿಮಾ ನಟ-ನಟಿಯರಿಗೆ ಅವಮಾನ

Suresh Kondeti: ಗೋವಾದಲ್ಲಿ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆಂದು ತೆರಳಿದ್ದ ಕನ್ನಡದ ನಟ-ನಟಿಯರಿಗೆ ಅಪಮಾನ ಮಾಡಿದ್ದಾರೆ ಎನ್ನಲಾಗಿದೆ.

ಗೋವಾದಲ್ಲಿ ಕನ್ನಡ ಸಿನಿಮಾ ನಟ-ನಟಿಯರಿಗೆ ಅವಮಾನ
ಸ್ಯಾಂಡಲ್​ವುಡ್
Follow us
|

Updated on: Dec 03, 2023 | 6:47 PM

ಪ್ರಶಸ್ತಿ ಕಾರ್ಯಕ್ರಮಕ್ಕೆಂದು ಕನ್ನಡದ ಕೆಲವು ಸಿನಿಮಾ ನಟ-ನಟಿಯರನ್ನು ಗೋವಾಕ್ಕೆ (Goa) ಆಹ್ವಾನಿಸಿ ಅವಮಾನ ಮಾಡಿರುವ ಘಟನೆ ನಡೆದಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಮಾಧ್ಯಮ ಸಲಹೆಗಾರ ಎಂದು ಹೇಳಲಾಗುತ್ತಿರುವ ತೆಲುಗು ಚಿತ್ರರಂಗದ ‘ಕುಖ್ಯಾತ’ ಸಿನಿಮಾ ಪತ್ರಕರ್ತ ಸುರೇಶ್ ಕೊಂಡೇಟಿ ಸಂತೋಷಂ ಸಿನಿಮಾ ಅವಾರ್ಡ್ಸ್ ಕಾರ್ಯಕ್ರಮ ಆಯೋಜಿಸಿ ಅದಕ್ಕೆ ಕೆಲವು ಕನ್ನಡ ಸಿನಿಮಾ ನಟರನ್ನು ಆಹ್ವಾನಿಸಿದ್ದರು. ಆದರೆ ಅಲ್ಲಿಗೆ ಹೋದ ನಟರಿಗೆ ಅಪಮಾನ ಮಾಡಲಾಗಿದೆ.

ಸಂತೋಷಂ ಅವಾರ್ಡ್ಸ್ ಸಮಾರಂಭಕ್ಕೆ ಕನ್ನಡದ ಹಲವು ನಟ-ನಟಿಯರು ಕನ್ನಡ ಚಿತ್ರರಂಗದಿಂದ ತೆರಳಿದ್ದರು. ಆದರೆ ಅಲ್ಲಿಗೆ ಹೋದಾಗ ನಟ-ನಟಿಯರಿಗೆ ಸರಿಯಾದ ವ್ಯವಸ್ಥೆ ಮಾಡಿರಲಿಲ್ಲ. ಹೋಟೆಲ್ ಬುಕಿಂಗ್​ ಆಗಿರಲಿಲ್ಲ, ಕನ್ನಡ ಚಿತ್ರರಂಗದವರನ್ನು ಸ್ವಾಗತಿಸುವವರೂ ಸಹ ಇರಲಿಲ್ಲ. ಈ ಅವ್ಯವಸ್ಥೆಗಳಿಂದ ಬೇಸತ್ತ ಕನ್ನಡ ಚಿತ್ರರಂಗದ ತಾರೆಯರು ಕಾರ್ಯಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಮೇಶ್ ಅರವಿಂದ್, ಸಪ್ತಮಿ ಗೌಡ, ರಾಜವರ್ಧನ್, ಬಿ ಸುರೇಶ್, ಶೈಲಜಾ ನಾಗ್ ಮುಂತಾದವರು , ಸುಮಾರು 30ರಿಂದ 35 ಮಂದಿ ಕನ್ನಡದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ಅವರನ್ನು ಸೂಕ್ತವಾಗಿ ನಡೆಸಿಕೊಳ್ಳಲಾಗಿಲ್ಲ. ಭರವಸೆ ನೀಡಿದಂತೆ ವ್ಯವಸ್ಥೆ ಮಾಡಲಾಗಿರಲಿಲ್ಲ. ‘ಕ್ರಾಂತಿ’ ಸಿನಿಮಾಕ್ಕೆ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ವೇದಿಕೆ ಮೇಲೆ ಪವರ್ ಕಟ್ ಆದ ಘಟನೆಯೂ ಸಹ ನಡೆಯಿತು. ಕೊನೆಗೆ ಕನ್ನಡದ ನಟ-ನಟಿಯರು ಕಾರ್ಯಕ್ರಮವನ್ನು ಬಾಯ್​ಕಾಟ್ ಮಾಡಿ ಅರ್ಧಕ್ಕೆ ಬಿಟ್ಟು ಹೊರನಡೆದರು. ಇಂದು (ಡಿಸೆಂಬರ್ 03) ಸಂಜೆ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್​ವುಡ್ ಕ್ವೀನ್ ರಮ್ಯಾ

ಕನ್ನಡದ ನಟರು ಮಾತ್ರವೇ ಅಲ್ಲದೆ ತಮಿಳಿನ ನಟ-ನಟಿಯರು ಸಹ ಕಾರ್ಯಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಕೆಲವು ತಮಿಳಿನ ನಟರು ಕಾರ್ಯಕ್ರಮದ ಅವ್ಯವಸ್ಥೆ ಬಗ್ಗೆ ಟೀಕೆ ಮಾಡಿದ್ದಾರೆ.

ಸಂತೋಷಂ ಅವಾರ್ಡ್ಸ್ ಕಾರ್ಯಕ್ರಮವನ್ನು ಸುರೇಶ್ ಕೊಂಡೇಟಿ ಆಯೋಜನೆ ಮಾಡಿದ್ದರು. ಈ ಹಿಂದೆ ಕೆಲವು ಸಿನಿಮಾಗಳನ್ನು ನಿರ್ದೇಶನವೂ ಮಾಡಿದ್ದ ಸುರೇಶ್ ಕೊಂಡೇಟಿ ಕಳೆದ ಕೆಲ ವರ್ಷಗಳಿಂದ ಸಿನಿಮಾ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದಾರೆ. ದೊಡ್ಡ ಸಿನಿಮಾಗಳ ಪ್ರೆಸ್​ಮೀಟ್​ಗೆ ಹೋಗಿ ವೇದಿಕೆ ಮೇಲಿರುವವರಿಗೆ ಕೆಟ್ಟ ಪ್ರಶ್ನೆಗಳನ್ನು, ಒಮ್ಮೊಮ್ಮೆ ನಟ-ನಟಿಯರ ಖಾಸಗಿ ಪ್ರಶ್ನೆಗಳನ್ನು ಕೇಳುವ ಮೂಲಕ ವೈರಲ್ ಆಗಿದ್ದಾರೆ ಸುರೇಶ್ ಕೊಂಡೇಟಿ. ಹಲವು ಸಿನಿಮಾಗಳ ನಟ, ನಿರ್ಮಾಪಕ, ನಿರ್ದೇಶಕರು ಸುರೇಶ್ ಕೊಂಡೇಟಿ ಕೇಳಿರುವ ಖಾಸಗಿ ಪ್ರಶ್ನೆಗಳಿಗೆ ಸಿಟ್ಟಾಗಿ ಜಗಳ ಮಾಡಿದ್ದೂ ಸಹ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ