AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shankanada Aravind: ಕನ್ನಡದ ಹಿರಿಯ ನಟ ಶಂಖನಾದ ಅರವಿಂದ್​​ ಕೊವಿಡ್​ಗೆ ಬಲಿ

Shankanada Aravind Death News: ಅರವಿಂದ್​ ಅವರಿಗೆ ಕೊವಿಡ್​ ಸೋಂಕು ತಗುಲಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾದ್ದರಿಂದ 13 ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Shankanada Aravind: ಕನ್ನಡದ ಹಿರಿಯ ನಟ ಶಂಖನಾದ ಅರವಿಂದ್​​ ಕೊವಿಡ್​ಗೆ ಬಲಿ
ಶಂಕನಾದ್ ಅರವಿಂದ್
ರಾಜೇಶ್ ದುಗ್ಗುಮನೆ
|

Updated on:May 07, 2021 | 3:31 PM

Share

ಕೊರೊನಾ ವೈರಸ್​ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊವಿಡ್​ ಎರಡನೇ ಅಲೆಗೆ ಚಿತ್ರರಂಗದ ಸಾಕಷ್ಟು ಮಂದಿ ನಿಧನ ಹೊಂದಿದ್ದಾರೆ. ಈಗ ಕನ್ನಡದ ಹಿರಿಯ ನಟ, ನಿರ್ಮಾಪಕ ಶಂಖನಾದ ಅರವಿಂದ್ ಕೊವಿಡ್​ಗೆ ಬಲಿಯಾಗಿದ್ದಾರೆ. ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಮಂದಿ ಸಂತಾಪ ಸೂಚಿಸಿದ್ದಾರೆ. ಅರವಿಂದ್​ ಅವರಿಗೆ ಕೊವಿಡ್​ ಸೋಂಕು ತಗುಲಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾದ್ದರಿಂದ 13 ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ (ಮೇ 7) ಮಧ್ಯಾಹ್ನ ನಿಧನ ಹೊಂದಿದ್ದಾರೆ.

250 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಶಂಕನಾದ ಅರವಿಂದ್ ನಟಿಸಿದ್ದಾರೆ. ಸಾಕಷ್ಟು ಪೋಷಕ ಪಾತ್ರಗಳಿಗೆ ಶಂಕನಾದ ಅರವಿಂದ್ ಜೀವ ತುಂಬಿದ್ದಾರೆ. ಕಾಶೀನಾಥ್‌ಗೆ ಅವರು ಆಪ್ತರಾಗಿದ್ದರು. ಶಂಕನಾದ ಅರವಿಂದ್ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನನ್ನು ಅಗಲಿದ್ದಾರೆ. ಮೂರು ತಿಂಗಳ ಹಿಂದೆ ಅರವಿಂದ್​ ಮಡದಿ ರಮಾ ಅರವಿಂದ್ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾದರು. ತಮಿಳು ನಟ ಪಾಂಡು ಅವರು ಮೇ 6ರಂದು ನಿಧನರಾದರು. ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಕಾಶಿನಾಥ್‌, ಜಗ್ಗೇಶ್ ಸಿನಿಮಾಗಳಲ್ಲಿ ಶಂಕನಾದ್​ ಅರವಿಂದ್​ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಅರವಿಂದ್​ ಹೆಸರಿನ ಹಿಂದೆ ಶಂಖನಾದ ಸೇರಿಕೊಳ್ಳಲೂ ಒಂದು ಕಾರಣ ಇದೆ. 1986ರಲ್ಲಿ ‘ಶಂಖನಾದ’ ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾದಲ್ಲಿ ಅರವಿಂದ್ ಪ್ರಧಾನ ಪಾತ್ರ ನಿರ್ವಹಿಸಿದ್ದರು. ಆ ಸಿನಿಮಾಕ್ಕೆ ಭಾರಿ ಮೆಚ್ಚುಗೆ ಸಿಕ್ಕಿದ್ದಲ್ಲದೆ, ರಾಷ್ಟ್ರ ಪ್ರಶಸ್ತಿಯೂ ದೊರಕಿತ್ತು. ಅಂದಿನಿಂದ ಅರವಿಂದ್  ಅವರನ್ನು ಶಂಕನಾದ ಅರವಿಂದ್​ ಎಂದು ಕರೆಯಲು ಆರಂಭಿಸಿದರು.

ಇದನ್ನೂ ಓದಿ: ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

ಕೊವಿಡ್​ ಸಂಕಷ್ಟಕ್ಕೆ ಅನುಷ್ಕಾ-ವಿರಾಟ್​ 2 ಕೋಟಿ ರೂ. ದೇಣಿಗೆ; ನಿಧಿ ಸಂಗ್ರಹಕ್ಕೆ ಮುಂದಾದ ದಂಪತಿ

Published On - 2:42 pm, Fri, 7 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ