AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಚುರುಕಾಯ್ತು ಸಿನಿಮಾ ಕೆಲಸಗಳು

ಕೊವಿಡ್​ ಕಾರಣಕ್ಕೆ ಹೇರಿದ್ದ ಲಾಕ್​ಡೌನ್​​ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಶೂಟಿಂಗ್​ಗೆ ಅನುಮತಿ ಸಿಕ್ಕಿರುವುದರಿಂದ ಮತ್ತೆ ಸಿನಿಮಾ ಕೆಲಸಗಳು ಆರಂಭಗೊಂಡಿವೆ.

ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಚುರುಕಾಯ್ತು ಸಿನಿಮಾ ಕೆಲಸಗಳು
ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಚುರುಕಾಯ್ತು ಸಿನಿಮಾ ಕೆಲಸಗಳು
TV9 Web
| Edited By: |

Updated on: Jun 30, 2021 | 4:20 PM

Share

ಕೊವಿಡ್​ ಕಾರಣಕ್ಕೆ ಹೇರಿದ್ದ ಲಾಕ್​ಡೌನ್​​ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಶೂಟಿಂಗ್​ಗೆ ಅನುಮತಿ ಸಿಕ್ಕಿರುವುದರಿಂದ ಮತ್ತೆ ಸಿನಿಮಾ ಕೆಲಸಗಳು ಆರಂಭಗೊಂಡಿವೆ. ಸಾಕಷ್ಟು ಚಿತ್ರತಂಡಗಳು ಈಗಾಗಲೇ ಶೂಟಿಂಗ್​ ಆರಂಭಿಸಿವೆ. ಇನ್ನು, ಅನೇಕ ಚಿತ್ರತಂಡಗಳು ಸುದ್ದಿಗೋಷ್ಠಿ ನಡೆಸಿ, ಸಿನಿಮಾ ಪ್ರಚಾರ ಕಾರ್ಯ ಆರಂಭಿಸಿವೆ.

‘ಹೆದರದಿರು ಓ ಮನಸೇ’ ಆಲ್ಬಮ್​ ಸಾಂಗ್ ಬಿಡುಗಡೆ ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅದೇ ರೀತಿಯಲ್ಲಿ. ನಟ, ನಿರ್ಮಾಪಕ, ಉದ್ಯಮಿ ಮಹೇಂದ್ರ ಮುನ್ನೋತ್ ಕೊವಿಡ್​ ಬಗ್ಗೆ ಜಾಗೃತಿ ಮೂಡಿಸುವ ಹಾಡನ್ನು ಸಿದ್ಧಪಡಿಸಿದ್ದು, ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಇದು ರಿಲೀಸ್​ ಆಗಿದೆ.

ಕೊರೊನಾ ಸಂಕಷ್ಟಕ್ಕೆ ಸಿಲುಕಿದ ಮಾನವ ಸಂಕುಲಕ್ಕೆ ಧೈರ್ಯ ಹೇಳುವ ‘ಹೆದರದಿರು ಓ ಮನಸೇ’ ಎನ್ನುವ ಹಾಡು ಇತ್ತೀಚೆಗೆ ರಿಲೀಸ್​ ಆಗಿದೆ. ಈ ಆಲ್ಬಮ್​ಗೆ ನಿರ್ದೇಶಕ ಹರಿಹರನ್ ಆಕ್ಷನ್ ಕಟ್ ಹೇಳಿದರೆ ಎ.ಟಿ. ರವೀಶ್ ಸಂಗೀತ, ರೇವಣ್ಣ ನಾಯಕ್ ಸಾಹಿತ್ಯ ಬರೆದಿದ್ದಾರೆ. ಮಹೇಂದ್ರ ಅವರು ಇದನ್ನು ನಿರ್ಮಿಸಿ, ನಟಿಸಿದ್ದಾರೆ. ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷರಾದ ಜಯರಾಜ್ ಹಾಗೂ ಮಾಜೀ ಕಾರ್ಯದರ್ಶಿ ಭಾಮಾ ಹರೀಶ್ ಜೊತೆಗೂಡಿ ಈ ಹಾಡು ಲೋಕಾರ್ಪಣೆ ಮಾಡಿದರು. ಹಾಗೇ ಇದೇ ಸಂದರ್ಭದಲ್ಲಿ ಆತ್ಮ ನಿರ್ಭರ ಗೀತೆಯನ್ನು ಬಿಡುಗಡೆ ಗೊಳಿಸಲಾಗಿದೆ.

‘ಅನಿರೀಕ್ಷಿತ’ ಟ್ರೇಲರ್ ರಿಲೀಸ್​ ಮಿಮಿಕ್ರಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ದಯಾನಂದ್ ಈಗ ಅವರು ನಿರ್ದೇಶನಕ್ಕೆ ಇಳಿದಿದ್ದಾರೆ. ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ, ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತದೆ. ಇಂತಹ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ‘ಅನಿರೀಕ್ಷಿತ’ ಚಿತ್ರ ನಿರ್ದೇಶನ ಮಾಡಲಾಗಿದೆ. ಈ ಚಿತ್ರದ ಟ್ರೇಲರ್​ ರಿಲೀಸ್​ ಆಗಿದೆ.

ಲಾಕ್ ಡೌನ್ ತೆರವು ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದೆ. ಸಿನಿಮಾ ಮಂದಿರ ಓಪನ್​ ಮಾಡಲು ಅನುಮತಿ ದೊರಕಿದ ಕೂಡಲೆ ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಜೊತೆಯಾಗಿ ಏನು ಮಾಡ್ತಿದ್ದಾರೆ ತಮನ್ನಾ-ವಿಜಯ್​ ಸೇತುಪತಿ? ಇದು ಸಿನಿಮಾ ಸಮಾಚಾರ ಅಲ್ಲವೇ ಅಲ್ಲ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು