AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಚುರುಕಾಯ್ತು ಸಿನಿಮಾ ಕೆಲಸಗಳು

ಕೊವಿಡ್​ ಕಾರಣಕ್ಕೆ ಹೇರಿದ್ದ ಲಾಕ್​ಡೌನ್​​ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಶೂಟಿಂಗ್​ಗೆ ಅನುಮತಿ ಸಿಕ್ಕಿರುವುದರಿಂದ ಮತ್ತೆ ಸಿನಿಮಾ ಕೆಲಸಗಳು ಆರಂಭಗೊಂಡಿವೆ.

ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಚುರುಕಾಯ್ತು ಸಿನಿಮಾ ಕೆಲಸಗಳು
ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಚುರುಕಾಯ್ತು ಸಿನಿಮಾ ಕೆಲಸಗಳು
TV9 Web
| Edited By: |

Updated on: Jun 30, 2021 | 4:20 PM

Share

ಕೊವಿಡ್​ ಕಾರಣಕ್ಕೆ ಹೇರಿದ್ದ ಲಾಕ್​ಡೌನ್​​ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಶೂಟಿಂಗ್​ಗೆ ಅನುಮತಿ ಸಿಕ್ಕಿರುವುದರಿಂದ ಮತ್ತೆ ಸಿನಿಮಾ ಕೆಲಸಗಳು ಆರಂಭಗೊಂಡಿವೆ. ಸಾಕಷ್ಟು ಚಿತ್ರತಂಡಗಳು ಈಗಾಗಲೇ ಶೂಟಿಂಗ್​ ಆರಂಭಿಸಿವೆ. ಇನ್ನು, ಅನೇಕ ಚಿತ್ರತಂಡಗಳು ಸುದ್ದಿಗೋಷ್ಠಿ ನಡೆಸಿ, ಸಿನಿಮಾ ಪ್ರಚಾರ ಕಾರ್ಯ ಆರಂಭಿಸಿವೆ.

‘ಹೆದರದಿರು ಓ ಮನಸೇ’ ಆಲ್ಬಮ್​ ಸಾಂಗ್ ಬಿಡುಗಡೆ ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅದೇ ರೀತಿಯಲ್ಲಿ. ನಟ, ನಿರ್ಮಾಪಕ, ಉದ್ಯಮಿ ಮಹೇಂದ್ರ ಮುನ್ನೋತ್ ಕೊವಿಡ್​ ಬಗ್ಗೆ ಜಾಗೃತಿ ಮೂಡಿಸುವ ಹಾಡನ್ನು ಸಿದ್ಧಪಡಿಸಿದ್ದು, ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಇದು ರಿಲೀಸ್​ ಆಗಿದೆ.

ಕೊರೊನಾ ಸಂಕಷ್ಟಕ್ಕೆ ಸಿಲುಕಿದ ಮಾನವ ಸಂಕುಲಕ್ಕೆ ಧೈರ್ಯ ಹೇಳುವ ‘ಹೆದರದಿರು ಓ ಮನಸೇ’ ಎನ್ನುವ ಹಾಡು ಇತ್ತೀಚೆಗೆ ರಿಲೀಸ್​ ಆಗಿದೆ. ಈ ಆಲ್ಬಮ್​ಗೆ ನಿರ್ದೇಶಕ ಹರಿಹರನ್ ಆಕ್ಷನ್ ಕಟ್ ಹೇಳಿದರೆ ಎ.ಟಿ. ರವೀಶ್ ಸಂಗೀತ, ರೇವಣ್ಣ ನಾಯಕ್ ಸಾಹಿತ್ಯ ಬರೆದಿದ್ದಾರೆ. ಮಹೇಂದ್ರ ಅವರು ಇದನ್ನು ನಿರ್ಮಿಸಿ, ನಟಿಸಿದ್ದಾರೆ. ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷರಾದ ಜಯರಾಜ್ ಹಾಗೂ ಮಾಜೀ ಕಾರ್ಯದರ್ಶಿ ಭಾಮಾ ಹರೀಶ್ ಜೊತೆಗೂಡಿ ಈ ಹಾಡು ಲೋಕಾರ್ಪಣೆ ಮಾಡಿದರು. ಹಾಗೇ ಇದೇ ಸಂದರ್ಭದಲ್ಲಿ ಆತ್ಮ ನಿರ್ಭರ ಗೀತೆಯನ್ನು ಬಿಡುಗಡೆ ಗೊಳಿಸಲಾಗಿದೆ.

‘ಅನಿರೀಕ್ಷಿತ’ ಟ್ರೇಲರ್ ರಿಲೀಸ್​ ಮಿಮಿಕ್ರಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ದಯಾನಂದ್ ಈಗ ಅವರು ನಿರ್ದೇಶನಕ್ಕೆ ಇಳಿದಿದ್ದಾರೆ. ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ, ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತದೆ. ಇಂತಹ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ‘ಅನಿರೀಕ್ಷಿತ’ ಚಿತ್ರ ನಿರ್ದೇಶನ ಮಾಡಲಾಗಿದೆ. ಈ ಚಿತ್ರದ ಟ್ರೇಲರ್​ ರಿಲೀಸ್​ ಆಗಿದೆ.

ಲಾಕ್ ಡೌನ್ ತೆರವು ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದೆ. ಸಿನಿಮಾ ಮಂದಿರ ಓಪನ್​ ಮಾಡಲು ಅನುಮತಿ ದೊರಕಿದ ಕೂಡಲೆ ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಜೊತೆಯಾಗಿ ಏನು ಮಾಡ್ತಿದ್ದಾರೆ ತಮನ್ನಾ-ವಿಜಯ್​ ಸೇತುಪತಿ? ಇದು ಸಿನಿಮಾ ಸಮಾಚಾರ ಅಲ್ಲವೇ ಅಲ್ಲ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ