AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​​ವುಡ್​ನಲ್ಲಿ ನವ ಹೀರೋಗಳ ದರ್ಬಾರ್; ಚಿತ್ರರಂಗಕ್ಕೆ ಹೊಸ ಚೈತನ್ಯ

ಸ್ಯಾಂಡಲ್​ವುಡ್​ನಲ್ಲಿ ಕಳೆದ ಆರು ತಿಂಗಳಿಂದ ಕಾರ್ಮೋಡ ಕವಿದಿತ್ತು. 'ಎಕ್ಕ' ಮತ್ತು 'ಜೂನಿಯರ್' ಚಿತ್ರಗಳು ಯಶಸ್ವಿಯಾಗಿ ಬಾಕ್ಸ್ ಆಫೀಸ್​ ಅನ್ನು ಪುಟಿದೆಬ್ಬಿಸಿದೆ. ಹೊಸ ನಟರಾದ ಯುವರಾಜ್ ಕುಮಾರ್ ಮತ್ತು ಕಿರೀಟಿ ಅವರ ಅಭಿನಯ, ಚಿತ್ರದ ಕಥೆ ಹಾಗೂ ಪ್ರಚಾರ ಕಾರ್ಯಗಳು ಈ ಯಶಸ್ಸಿಗೆ ಕಾರಣ. ಈ ಚಿತ್ರಗಳು ಗಳಿಸಿದ ಲಾಭ ಕನ್ನಡ ಚಿತ್ರರಂಗಕ್ಕೆ ಹೊಸ ಉತ್ಸಾಹ ತುಂಬಿದೆ.

ಸ್ಯಾಂಡಲ್​​ವುಡ್​ನಲ್ಲಿ ನವ ಹೀರೋಗಳ ದರ್ಬಾರ್; ಚಿತ್ರರಂಗಕ್ಕೆ  ಹೊಸ ಚೈತನ್ಯ
ಎಕ್ಕ-ಜೂನಿಯರ್
ರಾಜೇಶ್ ದುಗ್ಗುಮನೆ
|

Updated on: Jul 21, 2025 | 3:13 PM

Share

ಸ್ಯಾಂಡಲ್​ವುಡ್​ನಲ್ಲಿ ಕಳೆದ ಆರು ತಿಂಗಳಿಂದ ಕವಿದಿದ್ದ ಕಾರ್ಮೋಡ ಮಾಯವಾಗಿದೆ. ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’ ಹಾಗೂ ಕಿರೀಟಿ ಅಭಿನಯದ ‘ಜೂನಿಯರ್’ (Junior Movie) ಸಿನಿಮಾಗಳು ಗೆಲುವಿನ ನಗೆ ಬೀರಿವೆ. ಸತತವಾಗಿ ಸೊರಗಿ ಹೋಗಿದ್ದ ಬಾಕ್ಸ್ ಆಫೀಸ್ ಈಗ ಮತ್ತೆ ಪುಟಿದೆದ್ದು ನಿಂತಿದೆ. ಈ ನವ ಹೀರೋಗಳು ಮಾಡಿದ ಸಾಧನೆ ಅಂತಿಂಥದ್ದಲ್ಲ. ಆ ಬಗ್ಗೆ ಇಲ್ಲಿದೆ ಒಂದು ವಿವರ.

ಅದು 2024ರ ಕ್ರಿಸ್​ಮಸ್ ಸಮಯ. ಕನ್ನಡದಲ್ಲಿ ಉಪೇಂದ್ರ ನಟಿಸಿ ನಿರ್ದೇಶಿಸಿದ ‘ಯುಐ’ ಹಾಗೂ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲಿಸ್ ಆದವು. ಈ ಚಿತ್ರದ ಮೂಲಕ ಅವರು ದೊಡ್ಡ ಗೆಲುವು ಕಂಡರು. ಈ ಸಿನಿಮಾದಿಂದ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಬಿಸ್ನೆಸ್ ಆಯಿತು. ಆದರೆ, ಇದಾದ ಬಳಿಕ ಯಾವುದೇ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಕಮಾಯಿ ಮಾಡಲೇ ಇಲ್ಲ.

ಈಗಾಗಲೇ 2025ರ ಏಳು ತಿಂಗಳು ಪೂರ್ಣಗೊಳ್ಳುತ್ತಾ ಬಂದಿದೆ. ಈ ಅವಧಿಯಲ್ಲಿ 100ಕ್ಕೂ ಹೆಚ್ಚು ಚಿತ್ರಗಳು ತೆರೆಗೆ ಬಂದಿವೆ. ಇದರಲ್ಲಿ ಶರಣ್ ನಟನೆಯ ‘ಛೂ ಮಂತರ್’ ಚಿತ್ರ ಮಾತ್ರ 5 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಉಳಿದ ಎಲ್ಲಾ ಸಿನಿಮಾಗಳು ಹೇಳಿಕೊಳ್ಳುವಂಥ ಕಮಾಯಿ ಮಾಡಲು ಸಾಧ್ಯವಾಗಿರಲೇ ಇಲ್ಲ.

ಇದನ್ನೂ ಓದಿ
Image
ಈ ದಿನಂದು ‘ಕಣ್ಣಪ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ?
Image
ಈ ಸಸ್ಪೆನ್ಸ್ ಥ್ರಿಲ್ಲರ್​ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಲೇಬೇಡಿ
Image
‘ಎಕ್ಕ’ ಚಿತ್ರಕ್ಕೆ ಸರಿ ಸಮಾನವಾಗಿ ಗಳಿಕೆ ಮಾಡುತ್ತಿದೆ ‘ಜೂನಿಯರ್’
Image
ಬಾಕ್ಸ್ ಆಫೀಸ್ ಉಡೀಸ್ ಮಾಡಿದ ‘ಎಕ್ಕ’ ಸಿನಿಮಾ; ಭಾನುವಾರ ಬಂಗಾರದ ಬೆಳೆ

ಕನ್ನಡ ಚಿತ್ರರಂಗದ ಸ್ಟಾರ್​ಗಳು ವರ್ಷಕ್ಕೆ ಒಂದು ಸಿನಿಮಾ ಕೊಡೋದು ಕಷ್ಟ ಎಂಬಂತಾಗಿದೆ. ಹೊಸ ಹೀರೋಗಳ ಚಿತ್ರಗಳನ್ನು ಪ್ರೇಕ್ಷಕರು ನೋಡುತ್ತಿಲ್ಲ ಎಂಬ ದೂರಿದೆ. ಈ ಕಾರಣಕ್ಕೆ ಎಲ್ಲರೂ ಸ್ಟಾರ್ ಹೀರೋ ಸಿನಿಮಾಗಳಿಗಾಗಿ ಕಾದಿದ್ದರು. ಈ ವರ್ಷ ತೆರೆಮೇಲೆ ಬರೋ ಸ್ಟಾರ್ ಹೀರೋಗಳ ಪಟ್ಟಿ ಕೂಡ ಕಡಿಮೆ ಇದೆ. ಶಿವರಾಜ್​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ನಟನೆಯ ‘45’, ರಿಷಬ್ ಶೆಟ್ಟಿ ನಟನೆಯ ‘ಕಾಂತರ’, ಧ್ರುವ ಅಭಿನಯದ ‘ಕೆಡಿ’ ಸಿನಿಮಾಗಳು ಈ ವರ್ಷ ರಿಲೀಸ್ ಆಗ ಬೇಕಿರುವ ದೊಡ್ಡ ಚಿತ್ರಗಳು. ಇವರಿಗಾಗಿ ಎಲ್ಲರೂ ಚಾತಕ ಪಕ್ಷಿಯಂತೆ ಕಾದಿದ್ದಾಗ ಬಂದಿದ್ದೇ ‘ಎಕ್ಕ’ ಹಾಗೂ ‘ಜೂನಿಯರ್’ ಸಿನಿಮಾ.

‘ಎಕ್ಕ’ ಹಾಗೂ ‘ಜೂನಿಯರ್’ ಸಿನಿಮಾಗಳ ಹಿಂದೆ ದೊಡ್ಡ ನಿರ್ಮಾಣ ಸಂಸ್ಥೆ ಇದೆ ನಿಜ. ಆದರೆ, ಈ ಮೊದಲು ಕೂಡ ದೊಡ್ಡ ಸಂಸ್ಥೆಗಳು ಹೊಸ ಹೀರೋಗಳ ಸಿನಿಮಾಗೆ ಬಂಡವಾಳ ಹೂಡಿ ಕೈ ಸುಟ್ಟುಕೊಂಡ ಉದಾಹರಣೆ ಇದೆ. ಆದರೆ, ಈ ಸಿನಿಮಾ ವಿಚಾರಗಳಲ್ಲಿ ಆ ರೀತಿ ಆಗಿಲ್ಲ. ಚಿತ್ರವನ್ನು ಜನರ ಎದುರು ತಲುಪಿಸಲು ಈ ತಂಡದವರು ಸಾಕಷ್ಟು ಶ್ರಮ ಹಾಕಿದ್ದಾರೆ. ಸಾಕಷ್ಟು ಪ್ರಚಾರ ಮಾಡಿದ್ದಾರೆ. ಚಿತ್ರದ ಕಥೆ ಹಾಗೂ ನಿರೂಪಣೆ ಜನರಿಗೆ ಇಷ್ಟ ಆಗಿದೆ. ಹೊಸ ಹೀರೋಗಳ ಪರ್ಫಾರ್ಮೆನ್ಸ್​ನ ಜನರು ಮೆಚ್ಚಿಕೊಂಡಿದ್ದಾರೆ. ಇದೆಲ್ಲವೂ ತಂಡಕ್ಕೆ ಸಹಕಾರಿ ಆಗಿದೆ.

ಇದನ್ನೂ ಓದಿ: ‘ಎಕ್ಕ’ ಚಿತ್ರಕ್ಕೆ ಸರಿ ಸಮಾನವಾಗಿ ಗಳಿಕೆ ಮಾಡುತ್ತಿದೆ ‘ಜೂನಿಯರ್’; ಕಿರೀಟಿಗೆ ಪರ್ಫೆಕ್ಟ್ ಲಾಂಚ್

‘ಎಕ್ಕ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 5.66 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನು, ‘ಜೂನಿಯರ್’ ಸಿನಿಮಾ 5.40 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಎರಡೂ ಸಿನಿಮಾಗಳು ಚಿತ್ರರಂಗದ ಗೆಲುವಿಗೆ ಸಹಕಾರ ನೀಡಿವೆ. ಮುಂದಿನ ದಿನಗಳಲ್ಲಿ ಬರುವ ಚಿತ್ರಕ್ಕೆ ಈ ಗೆಲುವು ಸಹಕಾರಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ