AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭುದೇವ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ; ಕನ್ನಡ ಸೇರಿ ಬಹುಭಾಷೆಯಲ್ಲಿ ನಿರ್ಮಾಣ

ಸಂದೇಶ್​ ನಾಗರಾಜ್​ ಅವರು ಕನ್ನಡದಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗ ಅವರ ಬ್ಯಾನರ್​ನಲ್ಲಿ ಪ್ರಭುದೇವ ನಟನೆಯ ಹೊಸ ಸಿನಿಮಾ ಸೆಟ್ಟೇರುತ್ತಿರುವ ಸುದ್ದಿ ಹೊರಬಿದ್ದಿದೆ.

ಪ್ರಭುದೇವ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ; ಕನ್ನಡ ಸೇರಿ ಬಹುಭಾಷೆಯಲ್ಲಿ ನಿರ್ಮಾಣ
ಸಂದೇಶ್​ ನಾಗರಾಜ್​, ಪ್ರಭುದೇವ
TV9 Web
| Edited By: |

Updated on: Feb 05, 2022 | 8:46 AM

Share

ನಟನಾಗಿ, ನಿರ್ದೇಶಕನಾಗಿ, ಕೊರಿಯೋಗ್ರಾಫರ್​ ಆಗಿ ಪ್ರಭುದೇವ (Prabhu Deva) ಅವರು ಸಖತ್​ ಫೇಮಸ್​. ಕನ್ನಡ, ತಮಿಳು, ಹಿಂದೆ ಸೇರಿದಂತೆ ಹಲವು ಭಾಷೆಯ ಚಿತ್ರರಂಗದಲ್ಲಿ ಅವರಿಗೆ ಬೇಡಿಕೆ ಇದೆ. ಅತ್ಯುತ್ತಮ ಡ್ಯಾನ್ಸ್​​ನಿಂದಾಗಿ ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಪ್ರಭುದೇವ ಅವರು ಈಗೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರ ಪ್ಯಾನ್​ ಇಂಡಿಯಾ (Pan India Movie) ಮಟ್ಟದಲ್ಲಿ ಮೂಡಿಬರಲಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಚಿತ್ರ ನಿರ್ಮಾಣ ಆಗಲಿದೆ. ಈ ಬಹುನಿರೀಕ್ಷಿತ ಸಿನಿಮಾಗೆ ಬಂಡವಾಳ ಹೂಡುತ್ತಿರುವುದು ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ‘ಸಂದೇಶ್​ ಪ್ರೊಡಕ್ಷನ್ಸ್​’. ಕನ್ನಡ ಚಿತ್ರರಂಗದಲ್ಲಿ ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿದ ಕೀರ್ತಿ ಈ ಸಂಸ್ಥೆಗೆ ಸೇರುತ್ತದೆ. ಈಗ ‘ಸಂದೇಶ್​ ಪ್ರೊಡಕ್ಷನ್ಸ್​’ ಮೂಲಕ ಪ್ರಭುದೇವ ಅವರ ಪ್ಯಾನ್​ ಇಂಡಿಯಾ ಸಿನಿಮಾ ತಯಾರಾಗುತ್ತದೆ ಎಂಬ ಸುದ್ದಿ ಖಚಿತಗೊಂಡಿದೆ. ಈ ಕುರಿತಂತೆ ನಿರ್ಮಾಪಕ ಸಂದೇಶ್​ ನಾಗರಾಜ್ (Sandesh Nagaraj) ಅವರು ಪ್ರಭುದೇವ ಜೊತೆ ಮಾತುಕತೆ ಮುಗಿಸಿದ್ದಾರೆ. ಈ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಅಭಿನಯಿಸಲು ಪ್ರಭುದೇವ ಒಪ್ಪಿಕೊಂಡಿದ್ದಾರೆ.

ಮಣ್ಣಿನ ದೋಣಿ, ಮಿಸ್ಟರ್​ ಐರಾವತ, ಪ್ರಿನ್ಸ್​, ಅಮರ್​ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಂದೇಶ್​ ನಾಗರಾಜ್​ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಅಪಾರ ಅನುಭವ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಅವರು ಮಾಡುತ್ತಿದ್ದಾರೆ. ಈಗ ಅವರ ಬ್ಯಾನರ್​ನಲ್ಲಿ ಪ್ರಭುದೇವ ಸಿನಿಮಾ ಸೆಟ್ಟೇರುತ್ತಿರುವ ಸುದ್ದಿ ಹೊರಬಿದ್ದಿದೆ. ಈ ಸಿನಿಮಾದಲ್ಲಿ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ? ನಿರ್ದೇಶನ ಮಾಡುವವರು ಯಾರು? ಪ್ರಭುದೇವ ಅವರ ಪಾತ್ರ ಯಾವ ರೀತಿ ಇರಲಿದೆ? ಅವರಿಗೆ ನಾಯಕಿ ಯಾರು? ಇಂಥ ಹಲವು ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಶೀಘ್ರದಲ್ಲೇ ಈ ಕುರಿತು ಮಾಹಿತಿ ಹಂಚಿಕೊಳ್ಳುವುದಾಗಿ ಸಂದೇಶ್​ ನಾಗರಾಜ್​ ತಿಳಿಸಿದ್ದಾರೆ.

ಶಿವರಾಜ್​ಕುಮಾರ್​ ಜೊತೆ ಸಂದೇಶ್​ ನಾಗರಾಜ್​ ಹೊಸ ಚಿತ್ರ:

ಕೆಲವೇ ದಿನಗಳ ಹಿಂದೆ ನಿರ್ಮಾಪಕ ಸಂದೇಶ್​ ನಾಗರಾಜ್​ ಅವರು ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಜೊತೆ ಹೊಸ ಸಿನಿಮಾ ಘೋಷಿಸಿದರು. ಈಗಾಗಲೇ ಹಲವು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಚಿ. ಗುರುದತ್​ ಅವರು ಈ ಹೊಸ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಗುರುದತ್​ ಮತ್ತು ಶಿವರಾಜ್​ಕುಮಾರ್​ ಅವರ ನಡುವೆ ಉತ್ತಮ ಗೆಳೆತನ ಇದೆ. ಇಬ್ಬರೂ ಬಾಲ್ಯದ ಗೆಳೆಯರು. ‘ಆನಂದ್​’ ಸಿನಿಮಾ ಕಾಲದಿಂದಲೂ ಅವರಿಬ್ಬರ ಸಿನಿಮಾ ಜರ್ನಿ ಮುಂದುವರಿದುಕೊಂಡು ಬಂದಿದೆ. ಈ ಸ್ನೇಹಿತರು ಜೊತೆಗೂಡಿ ಈಗ ಹೊಸ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

Prabhudeva: ಅರ್ಧ ತುಂಡಾದ ಕಾಲು ಇಟ್ಟುಕೊಂಡು ಅಚ್ಚರಿ ಮೂಡಿಸಿದ ನಟ ಪ್ರಭುದೇವ; ಬೆರಗಾದ ಅಭಿಮಾನಿಗಳು

ನಮ್ಮಮ್ಮ ಕೂಡ ಭಯಂಕರವಾಗಿ ಅತ್ತುಬಿಟ್ಟರು -ಕನ್ನಡದಲ್ಲಿ ಸಂತಾಪ ಹೇಳಿದ ಡ್ಯಾನ್ಸ್​ ರಾಜ ಪ್ರಭುದೇವ

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್