AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭುದೇವ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ; ಕನ್ನಡ ಸೇರಿ ಬಹುಭಾಷೆಯಲ್ಲಿ ನಿರ್ಮಾಣ

ಸಂದೇಶ್​ ನಾಗರಾಜ್​ ಅವರು ಕನ್ನಡದಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗ ಅವರ ಬ್ಯಾನರ್​ನಲ್ಲಿ ಪ್ರಭುದೇವ ನಟನೆಯ ಹೊಸ ಸಿನಿಮಾ ಸೆಟ್ಟೇರುತ್ತಿರುವ ಸುದ್ದಿ ಹೊರಬಿದ್ದಿದೆ.

ಪ್ರಭುದೇವ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ; ಕನ್ನಡ ಸೇರಿ ಬಹುಭಾಷೆಯಲ್ಲಿ ನಿರ್ಮಾಣ
ಸಂದೇಶ್​ ನಾಗರಾಜ್​, ಪ್ರಭುದೇವ
TV9 Web
| Edited By: |

Updated on: Feb 05, 2022 | 8:46 AM

Share

ನಟನಾಗಿ, ನಿರ್ದೇಶಕನಾಗಿ, ಕೊರಿಯೋಗ್ರಾಫರ್​ ಆಗಿ ಪ್ರಭುದೇವ (Prabhu Deva) ಅವರು ಸಖತ್​ ಫೇಮಸ್​. ಕನ್ನಡ, ತಮಿಳು, ಹಿಂದೆ ಸೇರಿದಂತೆ ಹಲವು ಭಾಷೆಯ ಚಿತ್ರರಂಗದಲ್ಲಿ ಅವರಿಗೆ ಬೇಡಿಕೆ ಇದೆ. ಅತ್ಯುತ್ತಮ ಡ್ಯಾನ್ಸ್​​ನಿಂದಾಗಿ ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಪ್ರಭುದೇವ ಅವರು ಈಗೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರ ಪ್ಯಾನ್​ ಇಂಡಿಯಾ (Pan India Movie) ಮಟ್ಟದಲ್ಲಿ ಮೂಡಿಬರಲಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಚಿತ್ರ ನಿರ್ಮಾಣ ಆಗಲಿದೆ. ಈ ಬಹುನಿರೀಕ್ಷಿತ ಸಿನಿಮಾಗೆ ಬಂಡವಾಳ ಹೂಡುತ್ತಿರುವುದು ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ‘ಸಂದೇಶ್​ ಪ್ರೊಡಕ್ಷನ್ಸ್​’. ಕನ್ನಡ ಚಿತ್ರರಂಗದಲ್ಲಿ ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿದ ಕೀರ್ತಿ ಈ ಸಂಸ್ಥೆಗೆ ಸೇರುತ್ತದೆ. ಈಗ ‘ಸಂದೇಶ್​ ಪ್ರೊಡಕ್ಷನ್ಸ್​’ ಮೂಲಕ ಪ್ರಭುದೇವ ಅವರ ಪ್ಯಾನ್​ ಇಂಡಿಯಾ ಸಿನಿಮಾ ತಯಾರಾಗುತ್ತದೆ ಎಂಬ ಸುದ್ದಿ ಖಚಿತಗೊಂಡಿದೆ. ಈ ಕುರಿತಂತೆ ನಿರ್ಮಾಪಕ ಸಂದೇಶ್​ ನಾಗರಾಜ್ (Sandesh Nagaraj) ಅವರು ಪ್ರಭುದೇವ ಜೊತೆ ಮಾತುಕತೆ ಮುಗಿಸಿದ್ದಾರೆ. ಈ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಅಭಿನಯಿಸಲು ಪ್ರಭುದೇವ ಒಪ್ಪಿಕೊಂಡಿದ್ದಾರೆ.

ಮಣ್ಣಿನ ದೋಣಿ, ಮಿಸ್ಟರ್​ ಐರಾವತ, ಪ್ರಿನ್ಸ್​, ಅಮರ್​ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಂದೇಶ್​ ನಾಗರಾಜ್​ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಅಪಾರ ಅನುಭವ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಅವರು ಮಾಡುತ್ತಿದ್ದಾರೆ. ಈಗ ಅವರ ಬ್ಯಾನರ್​ನಲ್ಲಿ ಪ್ರಭುದೇವ ಸಿನಿಮಾ ಸೆಟ್ಟೇರುತ್ತಿರುವ ಸುದ್ದಿ ಹೊರಬಿದ್ದಿದೆ. ಈ ಸಿನಿಮಾದಲ್ಲಿ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ? ನಿರ್ದೇಶನ ಮಾಡುವವರು ಯಾರು? ಪ್ರಭುದೇವ ಅವರ ಪಾತ್ರ ಯಾವ ರೀತಿ ಇರಲಿದೆ? ಅವರಿಗೆ ನಾಯಕಿ ಯಾರು? ಇಂಥ ಹಲವು ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಶೀಘ್ರದಲ್ಲೇ ಈ ಕುರಿತು ಮಾಹಿತಿ ಹಂಚಿಕೊಳ್ಳುವುದಾಗಿ ಸಂದೇಶ್​ ನಾಗರಾಜ್​ ತಿಳಿಸಿದ್ದಾರೆ.

ಶಿವರಾಜ್​ಕುಮಾರ್​ ಜೊತೆ ಸಂದೇಶ್​ ನಾಗರಾಜ್​ ಹೊಸ ಚಿತ್ರ:

ಕೆಲವೇ ದಿನಗಳ ಹಿಂದೆ ನಿರ್ಮಾಪಕ ಸಂದೇಶ್​ ನಾಗರಾಜ್​ ಅವರು ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಜೊತೆ ಹೊಸ ಸಿನಿಮಾ ಘೋಷಿಸಿದರು. ಈಗಾಗಲೇ ಹಲವು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಚಿ. ಗುರುದತ್​ ಅವರು ಈ ಹೊಸ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಗುರುದತ್​ ಮತ್ತು ಶಿವರಾಜ್​ಕುಮಾರ್​ ಅವರ ನಡುವೆ ಉತ್ತಮ ಗೆಳೆತನ ಇದೆ. ಇಬ್ಬರೂ ಬಾಲ್ಯದ ಗೆಳೆಯರು. ‘ಆನಂದ್​’ ಸಿನಿಮಾ ಕಾಲದಿಂದಲೂ ಅವರಿಬ್ಬರ ಸಿನಿಮಾ ಜರ್ನಿ ಮುಂದುವರಿದುಕೊಂಡು ಬಂದಿದೆ. ಈ ಸ್ನೇಹಿತರು ಜೊತೆಗೂಡಿ ಈಗ ಹೊಸ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

Prabhudeva: ಅರ್ಧ ತುಂಡಾದ ಕಾಲು ಇಟ್ಟುಕೊಂಡು ಅಚ್ಚರಿ ಮೂಡಿಸಿದ ನಟ ಪ್ರಭುದೇವ; ಬೆರಗಾದ ಅಭಿಮಾನಿಗಳು

ನಮ್ಮಮ್ಮ ಕೂಡ ಭಯಂಕರವಾಗಿ ಅತ್ತುಬಿಟ್ಟರು -ಕನ್ನಡದಲ್ಲಿ ಸಂತಾಪ ಹೇಳಿದ ಡ್ಯಾನ್ಸ್​ ರಾಜ ಪ್ರಭುದೇವ

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು