AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭುದೇವ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ; ಕನ್ನಡ ಸೇರಿ ಬಹುಭಾಷೆಯಲ್ಲಿ ನಿರ್ಮಾಣ

ಸಂದೇಶ್​ ನಾಗರಾಜ್​ ಅವರು ಕನ್ನಡದಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗ ಅವರ ಬ್ಯಾನರ್​ನಲ್ಲಿ ಪ್ರಭುದೇವ ನಟನೆಯ ಹೊಸ ಸಿನಿಮಾ ಸೆಟ್ಟೇರುತ್ತಿರುವ ಸುದ್ದಿ ಹೊರಬಿದ್ದಿದೆ.

ಪ್ರಭುದೇವ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ; ಕನ್ನಡ ಸೇರಿ ಬಹುಭಾಷೆಯಲ್ಲಿ ನಿರ್ಮಾಣ
ಸಂದೇಶ್​ ನಾಗರಾಜ್​, ಪ್ರಭುದೇವ
TV9 Web
| Edited By: |

Updated on: Feb 05, 2022 | 8:46 AM

Share

ನಟನಾಗಿ, ನಿರ್ದೇಶಕನಾಗಿ, ಕೊರಿಯೋಗ್ರಾಫರ್​ ಆಗಿ ಪ್ರಭುದೇವ (Prabhu Deva) ಅವರು ಸಖತ್​ ಫೇಮಸ್​. ಕನ್ನಡ, ತಮಿಳು, ಹಿಂದೆ ಸೇರಿದಂತೆ ಹಲವು ಭಾಷೆಯ ಚಿತ್ರರಂಗದಲ್ಲಿ ಅವರಿಗೆ ಬೇಡಿಕೆ ಇದೆ. ಅತ್ಯುತ್ತಮ ಡ್ಯಾನ್ಸ್​​ನಿಂದಾಗಿ ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಪ್ರಭುದೇವ ಅವರು ಈಗೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರ ಪ್ಯಾನ್​ ಇಂಡಿಯಾ (Pan India Movie) ಮಟ್ಟದಲ್ಲಿ ಮೂಡಿಬರಲಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಚಿತ್ರ ನಿರ್ಮಾಣ ಆಗಲಿದೆ. ಈ ಬಹುನಿರೀಕ್ಷಿತ ಸಿನಿಮಾಗೆ ಬಂಡವಾಳ ಹೂಡುತ್ತಿರುವುದು ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ‘ಸಂದೇಶ್​ ಪ್ರೊಡಕ್ಷನ್ಸ್​’. ಕನ್ನಡ ಚಿತ್ರರಂಗದಲ್ಲಿ ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿದ ಕೀರ್ತಿ ಈ ಸಂಸ್ಥೆಗೆ ಸೇರುತ್ತದೆ. ಈಗ ‘ಸಂದೇಶ್​ ಪ್ರೊಡಕ್ಷನ್ಸ್​’ ಮೂಲಕ ಪ್ರಭುದೇವ ಅವರ ಪ್ಯಾನ್​ ಇಂಡಿಯಾ ಸಿನಿಮಾ ತಯಾರಾಗುತ್ತದೆ ಎಂಬ ಸುದ್ದಿ ಖಚಿತಗೊಂಡಿದೆ. ಈ ಕುರಿತಂತೆ ನಿರ್ಮಾಪಕ ಸಂದೇಶ್​ ನಾಗರಾಜ್ (Sandesh Nagaraj) ಅವರು ಪ್ರಭುದೇವ ಜೊತೆ ಮಾತುಕತೆ ಮುಗಿಸಿದ್ದಾರೆ. ಈ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಅಭಿನಯಿಸಲು ಪ್ರಭುದೇವ ಒಪ್ಪಿಕೊಂಡಿದ್ದಾರೆ.

ಮಣ್ಣಿನ ದೋಣಿ, ಮಿಸ್ಟರ್​ ಐರಾವತ, ಪ್ರಿನ್ಸ್​, ಅಮರ್​ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಂದೇಶ್​ ನಾಗರಾಜ್​ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಅಪಾರ ಅನುಭವ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಅವರು ಮಾಡುತ್ತಿದ್ದಾರೆ. ಈಗ ಅವರ ಬ್ಯಾನರ್​ನಲ್ಲಿ ಪ್ರಭುದೇವ ಸಿನಿಮಾ ಸೆಟ್ಟೇರುತ್ತಿರುವ ಸುದ್ದಿ ಹೊರಬಿದ್ದಿದೆ. ಈ ಸಿನಿಮಾದಲ್ಲಿ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ? ನಿರ್ದೇಶನ ಮಾಡುವವರು ಯಾರು? ಪ್ರಭುದೇವ ಅವರ ಪಾತ್ರ ಯಾವ ರೀತಿ ಇರಲಿದೆ? ಅವರಿಗೆ ನಾಯಕಿ ಯಾರು? ಇಂಥ ಹಲವು ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಶೀಘ್ರದಲ್ಲೇ ಈ ಕುರಿತು ಮಾಹಿತಿ ಹಂಚಿಕೊಳ್ಳುವುದಾಗಿ ಸಂದೇಶ್​ ನಾಗರಾಜ್​ ತಿಳಿಸಿದ್ದಾರೆ.

ಶಿವರಾಜ್​ಕುಮಾರ್​ ಜೊತೆ ಸಂದೇಶ್​ ನಾಗರಾಜ್​ ಹೊಸ ಚಿತ್ರ:

ಕೆಲವೇ ದಿನಗಳ ಹಿಂದೆ ನಿರ್ಮಾಪಕ ಸಂದೇಶ್​ ನಾಗರಾಜ್​ ಅವರು ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಜೊತೆ ಹೊಸ ಸಿನಿಮಾ ಘೋಷಿಸಿದರು. ಈಗಾಗಲೇ ಹಲವು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಚಿ. ಗುರುದತ್​ ಅವರು ಈ ಹೊಸ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಗುರುದತ್​ ಮತ್ತು ಶಿವರಾಜ್​ಕುಮಾರ್​ ಅವರ ನಡುವೆ ಉತ್ತಮ ಗೆಳೆತನ ಇದೆ. ಇಬ್ಬರೂ ಬಾಲ್ಯದ ಗೆಳೆಯರು. ‘ಆನಂದ್​’ ಸಿನಿಮಾ ಕಾಲದಿಂದಲೂ ಅವರಿಬ್ಬರ ಸಿನಿಮಾ ಜರ್ನಿ ಮುಂದುವರಿದುಕೊಂಡು ಬಂದಿದೆ. ಈ ಸ್ನೇಹಿತರು ಜೊತೆಗೂಡಿ ಈಗ ಹೊಸ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

Prabhudeva: ಅರ್ಧ ತುಂಡಾದ ಕಾಲು ಇಟ್ಟುಕೊಂಡು ಅಚ್ಚರಿ ಮೂಡಿಸಿದ ನಟ ಪ್ರಭುದೇವ; ಬೆರಗಾದ ಅಭಿಮಾನಿಗಳು

ನಮ್ಮಮ್ಮ ಕೂಡ ಭಯಂಕರವಾಗಿ ಅತ್ತುಬಿಟ್ಟರು -ಕನ್ನಡದಲ್ಲಿ ಸಂತಾಪ ಹೇಳಿದ ಡ್ಯಾನ್ಸ್​ ರಾಜ ಪ್ರಭುದೇವ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?