AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಗೆಟಪ್​ನಲ್ಲಿ ಬಂದ ದಿಗಂತ್-ಸಂಗೀತಾ ಶೃಂಗೇರಿ; ಇದು ‘ಮಾರಿಗೋಲ್ಡ್’ ಕಥೆ

Marigold Teaser: ರಾಘವೇಂದ್ರ ಎಂ. ನಾಯಕ್ ‘ಮಾರಿಗೋಲ್ಡ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ದಿಗಂತ್, ಸಂಗೀತಾ, ಯಶ್ ಶೆಟ್ಟಿ, ಕಾಕ್ರೋಚ್ ಸುಧಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ತಂಡದವರು ಸುದ್ದಿಗೋಷ್ಠಿ ನಡೆಸಿ ಟೀಸರ್ ರಿಲೀಸ್ ಮಾಡಿದ್ದಾರೆ. ಈ ಟೀಸರ್ ಎಲ್ಲರ ಗಮನ ಸೆಳೆದಿದೆ.

ಹೊಸ ಗೆಟಪ್​ನಲ್ಲಿ ಬಂದ ದಿಗಂತ್-ಸಂಗೀತಾ ಶೃಂಗೇರಿ; ಇದು ‘ಮಾರಿಗೋಲ್ಡ್’ ಕಥೆ
ಮಾರಿಗೋಲ್ಡ್ ತಂಡ
ರಾಜೇಶ್ ದುಗ್ಗುಮನೆ
|

Updated on: Feb 06, 2024 | 2:57 PM

Share

ಸಂಗೀತಾ ಶೃಂಗೇರಿ (Sangeetha Sringeri) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಎರಡನೇ ರನ್ನರ್ ಅಪ್ ಆಗಿದ್ದಾರೆ. ಅವರಿಗೆ ದೊಡ್ಮನೆಯಲ್ಲಿ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರು ಕೆಲವು ಚಿತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಬಿಗ್ ಬಾಸ್​ನಿಂದ ಹೊರ ಬರುತ್ತಿದ್ದಂತೆ ಅವರ ಸಿನಿಮಾ ತಂಡಗಳು ಪ್ರಚಾರ ಶುರುಮಾಡಿವೆ. ಈ ಪೈಕಿ ‘ಮಾರಿಗೋಲ್ಡ್’ ಸಿನಿಮಾ ಕೂಡ ಒಂದು. ಈ ಚಿತ್ರದ ಟೀಸರ್ ಇಂದು (ಫೆಬ್ರವರಿ 6) ರಿಲೀಸ್ ಆಗಿದ್ದು ಗಮನ ಸೆಳೆಯುತ್ತಿದೆ. ದಿಗಂತ್ ಹಾಗೂ ಸಂಗೀತಾ ಒಟ್ಟಾಗಿ ನಟಿಸಿದ ಸಿನಿಮಾ ಇದು ಎನ್ನುವ ಕಾರಣಕ್ಕೂ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟುಹಾಕಿದೆ.

ರಾಘವೇಂದ್ರ ಎಂ. ನಾಯಕ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ದಿಗಂತ್, ಸಂಗೀತಾ, ಯಶ್ ಶೆಟ್ಟಿ, ಕಾಕ್ರೋಚ್ ಸುಧಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಘುವರದನ್ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದವರು ಇಂದು ಸುದ್ದಿಗೋಷ್ಠಿ ನಡೆಸಿ ಟೀಸರ್ ರಿಲೀಸ್ ಮಾಡಿದ್ದಾರೆ. ಝಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ರಿಲೀಸ್ ಆಗಿದೆ.

ಹೆಸರೇ ಹೇಳುವಂತೆ ಇದು ‘ಗೋಲ್ಡ್’ ಹುಡುಕಿ ಹೋಗೋ ಕಥೆ. ದಿಗಂತ್ ಹಾಗೂ ಸಂಗೀತಾ ಶೃಂಗೇರಿ ಬೇರೆಯದೇ ಗೆಟಪ್ ತಾಳಿದ್ದಾರೆ. ಈ ಸಿನಿಮಾದಲ್ಲಿ ಸಖತ್ ಸಸ್ಪೆನ್ಸ್ ಇರಲಿದೆ ಎಂಬುದು ಟೀಸರ್ ಮೂಲಕ ಗೊತ್ತಾಗಿದೆ. ದಿಗಂತ್ ಅವರು ಚಾಕೋಲೇಟ್ ಬಾಯ್ ಆಗಿಯೇ ಹೆಚ್ಚು ಹೈಲೈಟ್ ಆದವರು. ಅವರ ವೃತ್ತಿ ಜೀವನದಲ್ಲಿ ಇದೊಂದು ಭಿನ್ನ ಸಿನಿಮಾ ಆಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್ ಮುಗಿದ ಬಳಿಕ ಸುದೀಪ್​ಗೆ ಸಂಗೀತಾ ಶೃಂಗೇರಿ ವಿಶೇಷ ಮಾತು

‘ದೂರದಿಂದ ನೋಡೋಕೆ ಸಕ್ಕರೆ, ಉಪ್ಪು ಒಂದೇ ರೀತಿ ಕಾಣುತ್ತದೆ. ಆದರೆ ಎರಡೂ ಬೇರೆ ಬೇರೆ’, ‘ಕಾಂಡಿಮೆಂಟ್ಸ್​ಗೆ ಬಂದು ಕಾಂಡಮ್ ಕೇಳ್ತಿದೀರಲ್ಲ’, ‘ಬದುಕೋಕೆ ಚಿನ್ನ ಮುಖ್ಯ ಅಲ್ಲ ಮೂರು ಹೊತ್ತು ಊಟ ಮುಖ್ಯ’ ಎಂಬಿತ್ಯಾದಿ ಡೈಲಾಗ್​ ಗಮನ ಸೆಳೆಯುತ್ತಿವೆ. ಬಿಗ್ ಬಾಸ್ ರೆಫರೆನ್ಸ್ ಕೂಡ ಒಮ್ಮೆ ಬಂದು ಹೋಗುತ್ತದೆ. ವೀರ್ ಸಮರ್ಥ್ ಅವರು ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ