AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರ್ತಿಕ್​ನ ಸಂಗೀತಾ ಟಿಶ್ಯೂ ರೀತಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ’; ಬಿಗ್ ಬಾಸ್​ನಲ್ಲಿ ಕೇಳಿತು ಹೊಸ ಆರೋಪ

ಸಂಗೀತಾ ಅವರು ತಮ್ಮ ಆಟಕ್ಕಾಗಿ ಕಾರ್ತಿಕ್ ಅವರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದು ಅವರ ಕಿವಿಗೆ ಬಿದ್ದರೆ ಯಾವ ರೀತಿಯಲ್ಲಿ ರಿಯಾಕ್ಟ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

‘ಕಾರ್ತಿಕ್​ನ ಸಂಗೀತಾ ಟಿಶ್ಯೂ ರೀತಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ’; ಬಿಗ್ ಬಾಸ್​ನಲ್ಲಿ ಕೇಳಿತು ಹೊಸ ಆರೋಪ
ಸಂಗೀತಾ-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on:Nov 08, 2023 | 7:46 AM

Share

ಕಾರ್ತಿಕ್ ಮಹೇಶ್ (Karthik Mahesh) ಹಾಗೂ ಸಂಗೀತಾ ಶೃಂಗೇರಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಆಪ್ತತೆ ಬೆಳೆದಿದೆ. ಆರಂಭದಿಂದ ಇಬ್ಬರೂ ಒಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಆದರೆ, ದಿನ ಕಳೆದಂತೆ ಇಬ್ಬರ ಮಧ್ಯೆ ಯಾಕೋ ಹೊಂದಾಣಿಕೆ ಆಗುತ್ತಿಲ್ಲ. ಇವರು ಕಿತ್ತಾಡಿಕೊಳ್ಳೋಕೆ ಶುರು ಮಾಡಿದ್ದಾರೆ. ಇಬ್ಬರ ಮಧ್ಯೆ ಮನಸ್ತಾಪಗಳು ಹೆಚ್ಚಾಗುತ್ತಿವೆ. ಸಂಗೀತಾ ಅವರು ತಮ್ಮ ಆಟಕ್ಕಾಗಿ ಕಾರ್ತಿಕ್ ಅವರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದು ಅವರ ಕಿವಿಗೆ ಬಿದ್ದರೆ ಯಾವ ರೀತಿಯಲ್ಲಿ ರಿಯಾಕ್ಟ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ನವೆಂಬರ್ 7ರ ಎಪಿಸೋಡ್​ನಲ್ಲಿ ಮುಂಜಾನೆ ಕಾರ್ತಿಕ್ ಹಾಗೂ ಸಂಗೀತಾ ಬೆಡ್​ನಿಂದ ಒಟ್ಟಿಗೆ ಎದ್ದರು. ಆಗ ಸಂಗೀತಾ ಅವರನ್ನು ಮಾತನಾಡಿಸಲು ಪ್ರಯತ್ನಿಸಿದರು ಕಾರ್ತಿಕ್. ‘ಎಲ್ಲರೂ ಮಲಗಿದ್ದಾರೆ ಮಾತನಾಡಬೇಡ’ ಎಂದು ಕಾರ್ತಿಕ್​ಗೆ ಸಂಗೀತಾ ಹೇಳಿದರು. ಆದಾಗ್ಯೂ ಕಾರ್ತಿಕ್​ ಮಾತನಾಡೋಕೆ ಹೋದರು. ಇದು ಸಂಗೀತಾಗೆ ಕೋಪ ತರಿಸಿತು. ಈ ಕೋಪ ನೋಡಿ ಕಾರ್ತಿಕ್​ಗೆ ಅಸಮಾಧಾನ ಆಗಿದೆ.

‘ಶ್ ಅಂದ ತಕ್ಷಣ ನಾನು ಸುಮ್ಮನಿರಬೇಕು. ಇಷ್ಟೊಂದು ಡಾಮಿನೇಷನ್ ಆದರೆ ನನ್ನ ಬಳಿ ಸಾಧ್ಯವಿಲ್ಲ’ ಎಂದು ಸಂಗೀತಾ ಬಗ್ಗೆ ಕಾರ್ತಿಕ್ ಅವರು ತನಿಷಾ ಬಳಿ ಹೇಳಿದ್ದಾರೆ. ತನಿಷಾ ಅವರು ಕಾರ್ತಿಕ್​ನ ಸಮಾಧಾನ ಮಾಡೋಕೆ ಪ್ರಯತ್ನಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಕುಳಿತು ನೋಡುತ್ತಿದ್ದರು. ಅವರು ಈ ಜೋಡಿ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದರು.

‘ಸಂಗೀತಾ ಸ್ಟ್ರಾಂಗ್ ಆಗಿದ್ದಾರೆ. ಅವರಿಗೆ ಬೇರೆಯವರ ಸಹಾಯ ಬೇಡ. ಆದಾಗ್ಯೂ ಕಾರ್ತಿಕ್ ಜೊತೆ ಅವಳು ಆಪ್ತವಾಗಿದ್ದಾಳೆ. ಅವಳಿಗೆ ಕಾರ್ತಿಕ್ ಟಿಶ್ಯೂ ಪೇಪರ್ ಇದ್ದ ಹಾಗೆ. ಮುಖ ಒರೆಸಿಕೊಂಡು ಬಿಸಾಕುತ್ತಾಳೆ’ ಎಂದು ವರ್ತೂರು ಸಂತೋಷ್ ಅವರು ತಮ್ಮ ಅಭಿಪ್ರಾಯ ಹೊರಹಾಕಿದರು. ಇದಕ್ಕೆ ತುಕಾಲಿ ಸಂತೋಷ್ ಅವರು ಹೌದು ಎಂಬಂತೆ ತಲೆ ಅಲ್ಲಾಡಿಸಿದ್ದಾರೆ.

ಇದನ್ನೂ ಓದಿ: ‘ನಾನು ನಿಮ್ಮ ಉದ್ಯೋಗಿ ಅಲ್ಲ’; ಸಂಗೀತಾ, ತನಿಷಾ ಜೊತೆ ಜಗಳಕ್ಕೆ ಇಳಿದ ಸ್ನೇಹಿತ್

ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರತಿ ದಿನ ರಾತ್ರಿ 9:30ಕ್ಕೆ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ. ಈ ಬಾರಿ ಬಿಗ್ ಬಾಸ್​ಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:37 am, Wed, 8 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು