AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರ್ತಿಕ್​ನ ಸಂಗೀತಾ ಟಿಶ್ಯೂ ರೀತಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ’; ಬಿಗ್ ಬಾಸ್​ನಲ್ಲಿ ಕೇಳಿತು ಹೊಸ ಆರೋಪ

ಸಂಗೀತಾ ಅವರು ತಮ್ಮ ಆಟಕ್ಕಾಗಿ ಕಾರ್ತಿಕ್ ಅವರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದು ಅವರ ಕಿವಿಗೆ ಬಿದ್ದರೆ ಯಾವ ರೀತಿಯಲ್ಲಿ ರಿಯಾಕ್ಟ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

‘ಕಾರ್ತಿಕ್​ನ ಸಂಗೀತಾ ಟಿಶ್ಯೂ ರೀತಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ’; ಬಿಗ್ ಬಾಸ್​ನಲ್ಲಿ ಕೇಳಿತು ಹೊಸ ಆರೋಪ
ಸಂಗೀತಾ-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on:Nov 08, 2023 | 7:46 AM

Share

ಕಾರ್ತಿಕ್ ಮಹೇಶ್ (Karthik Mahesh) ಹಾಗೂ ಸಂಗೀತಾ ಶೃಂಗೇರಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಆಪ್ತತೆ ಬೆಳೆದಿದೆ. ಆರಂಭದಿಂದ ಇಬ್ಬರೂ ಒಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಆದರೆ, ದಿನ ಕಳೆದಂತೆ ಇಬ್ಬರ ಮಧ್ಯೆ ಯಾಕೋ ಹೊಂದಾಣಿಕೆ ಆಗುತ್ತಿಲ್ಲ. ಇವರು ಕಿತ್ತಾಡಿಕೊಳ್ಳೋಕೆ ಶುರು ಮಾಡಿದ್ದಾರೆ. ಇಬ್ಬರ ಮಧ್ಯೆ ಮನಸ್ತಾಪಗಳು ಹೆಚ್ಚಾಗುತ್ತಿವೆ. ಸಂಗೀತಾ ಅವರು ತಮ್ಮ ಆಟಕ್ಕಾಗಿ ಕಾರ್ತಿಕ್ ಅವರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದು ಅವರ ಕಿವಿಗೆ ಬಿದ್ದರೆ ಯಾವ ರೀತಿಯಲ್ಲಿ ರಿಯಾಕ್ಟ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ನವೆಂಬರ್ 7ರ ಎಪಿಸೋಡ್​ನಲ್ಲಿ ಮುಂಜಾನೆ ಕಾರ್ತಿಕ್ ಹಾಗೂ ಸಂಗೀತಾ ಬೆಡ್​ನಿಂದ ಒಟ್ಟಿಗೆ ಎದ್ದರು. ಆಗ ಸಂಗೀತಾ ಅವರನ್ನು ಮಾತನಾಡಿಸಲು ಪ್ರಯತ್ನಿಸಿದರು ಕಾರ್ತಿಕ್. ‘ಎಲ್ಲರೂ ಮಲಗಿದ್ದಾರೆ ಮಾತನಾಡಬೇಡ’ ಎಂದು ಕಾರ್ತಿಕ್​ಗೆ ಸಂಗೀತಾ ಹೇಳಿದರು. ಆದಾಗ್ಯೂ ಕಾರ್ತಿಕ್​ ಮಾತನಾಡೋಕೆ ಹೋದರು. ಇದು ಸಂಗೀತಾಗೆ ಕೋಪ ತರಿಸಿತು. ಈ ಕೋಪ ನೋಡಿ ಕಾರ್ತಿಕ್​ಗೆ ಅಸಮಾಧಾನ ಆಗಿದೆ.

‘ಶ್ ಅಂದ ತಕ್ಷಣ ನಾನು ಸುಮ್ಮನಿರಬೇಕು. ಇಷ್ಟೊಂದು ಡಾಮಿನೇಷನ್ ಆದರೆ ನನ್ನ ಬಳಿ ಸಾಧ್ಯವಿಲ್ಲ’ ಎಂದು ಸಂಗೀತಾ ಬಗ್ಗೆ ಕಾರ್ತಿಕ್ ಅವರು ತನಿಷಾ ಬಳಿ ಹೇಳಿದ್ದಾರೆ. ತನಿಷಾ ಅವರು ಕಾರ್ತಿಕ್​ನ ಸಮಾಧಾನ ಮಾಡೋಕೆ ಪ್ರಯತ್ನಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಕುಳಿತು ನೋಡುತ್ತಿದ್ದರು. ಅವರು ಈ ಜೋಡಿ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದರು.

‘ಸಂಗೀತಾ ಸ್ಟ್ರಾಂಗ್ ಆಗಿದ್ದಾರೆ. ಅವರಿಗೆ ಬೇರೆಯವರ ಸಹಾಯ ಬೇಡ. ಆದಾಗ್ಯೂ ಕಾರ್ತಿಕ್ ಜೊತೆ ಅವಳು ಆಪ್ತವಾಗಿದ್ದಾಳೆ. ಅವಳಿಗೆ ಕಾರ್ತಿಕ್ ಟಿಶ್ಯೂ ಪೇಪರ್ ಇದ್ದ ಹಾಗೆ. ಮುಖ ಒರೆಸಿಕೊಂಡು ಬಿಸಾಕುತ್ತಾಳೆ’ ಎಂದು ವರ್ತೂರು ಸಂತೋಷ್ ಅವರು ತಮ್ಮ ಅಭಿಪ್ರಾಯ ಹೊರಹಾಕಿದರು. ಇದಕ್ಕೆ ತುಕಾಲಿ ಸಂತೋಷ್ ಅವರು ಹೌದು ಎಂಬಂತೆ ತಲೆ ಅಲ್ಲಾಡಿಸಿದ್ದಾರೆ.

ಇದನ್ನೂ ಓದಿ: ‘ನಾನು ನಿಮ್ಮ ಉದ್ಯೋಗಿ ಅಲ್ಲ’; ಸಂಗೀತಾ, ತನಿಷಾ ಜೊತೆ ಜಗಳಕ್ಕೆ ಇಳಿದ ಸ್ನೇಹಿತ್

ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರತಿ ದಿನ ರಾತ್ರಿ 9:30ಕ್ಕೆ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ. ಈ ಬಾರಿ ಬಿಗ್ ಬಾಸ್​ಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:37 am, Wed, 8 November 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ