AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ. ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು […]

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ
KUSHAL V
| Edited By: |

Updated on: Sep 11, 2020 | 1:55 PM

Share

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ.

ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು ಬಳಸಿಕೊಂಡಿರುವುದರ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಇದಲ್ಲದೆ, ಈ ಅಕ್ರಮ ಚಟುವಟಿಕೆಗಳಿಗಾಗಿ ಕೆಲವೊಂದು ಫ್ಲ್ಯಾಟ್‌ಗಳನ್ನು ಕೂಡ ಬೇನಾಮಿಯಾಗಿ ಬಳಸಿಕೊಂಡಿರುವ ಗುಮಾನಿ ವ್ಯಕ್ತವಾಗಿದೆ. ಹೀಗಾಗಿ, ನಟಿ ಸಂಜನಾರನ್ನ ED ಅಧಿಕಾರಿಗಳು ವಿಚಾರಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಬಂಧಿತ ವಿರೇನ್ ಖನ್ನಾ , ರಾಹುಲ್‌ನನ್ನ ವಿಚಾರಣೆ ನಡೆಸಿ ಮಾಹಿತಿ ಪಡೆದಿರುವ ED ಅಧಿಕಾರಿಗಳು ಸಂಜನಾಳನ್ನು ಸಹ ವಿಚಾರಣೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈಗಾಗಲೇ, ಸಂಜನಾ 7ರಿಂದ8 ಅಕ್ರಮ ಫ್ಲ್ಯಾಟ್‌ಗಳನ್ನ ಗಳಿಸಿರುವ ಆರೋಪ ಕೇಳಿಬಂದಿದೆ. ಒಂದು ಫ್ಲ್ಯಾಟ್‌ಗೆ ಕೋಟ್ಯಂತರ ರೂಪಾಯಿ ಇದ್ರು ಸಹ ಅತೀ ಕಡಿಮೆ ಬೆಲೆಗೆ ಪಡೆದಿರುವ ಬಗ್ಗೆ ದಾಖಲೆಗೆಳು ಸಿಕ್ಕಿದೆ. ಇನ್ನೂ ಆಕೆಯ ಮೊಬೈಲ್‌ನಲ್ಲಿ ಸಹ ಆಸ್ತಿಪಾಸ್ತಿಗೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿರುವುದಾಗಿ ತಿಳಿದುಬಂದಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ