AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತದ ಸಿನಿಮಾಗಳನ್ನು ಕೊಂಡಾಡಿದ ಸಂಜಯ್ ದತ್; ‘ಕೆಡಿ’ ವೇದಿಕೆ ಮೇಲೆ ಬಾಲಿವುಡ್​ ಹೀರೋ ಹೇಳಿದ್ದಿಷ್ಟು

‘ಜೋಗಿ’ ಅಂತಹ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಪ್ರೇಮ್​ಗೆ ಇದೆ. ‘ಅದ್ದೂರಿ’ ಅಂತಹ ಹಿಟ್ ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ ಧ್ರುವ. ಇಬ್ಬರೂ ಒಂದಾಗಿರುವ ಕಾರಣಕ್ಕೆ ಕುತೂಹಲ ಹೆಚ್ಚಿದೆ.

ದಕ್ಷಿಣ ಭಾರತದ ಸಿನಿಮಾಗಳನ್ನು ಕೊಂಡಾಡಿದ ಸಂಜಯ್ ದತ್; ‘ಕೆಡಿ’ ವೇದಿಕೆ ಮೇಲೆ ಬಾಲಿವುಡ್​ ಹೀರೋ ಹೇಳಿದ್ದಿಷ್ಟು
ಸಂಜಯ್ ದತ್-ಧ್ರುವ
TV9 Web
| Edited By: |

Updated on: Oct 21, 2022 | 12:54 PM

Share

ನಟ ಸಂಜಯ್ ದತ್ (Sanjay Dutt) ಅವರು ಬಾಲಿವುಡ್​ನಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಇತ್ತೀಚೆಗೆ ಅವರು ದಕ್ಷಿಣ ಭಾರತದಲ್ಲಿ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ‘ಕೆಜಿಎಫ್ 2’ನಲ್ಲಿ (KGF Chapter 2) ಅಧೀರನಾಗಿ ಸಂಜಯ್ ದತ್ ಗಮನ ಸೆಳೆದಿದ್ದರು. ಈಗ ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಅಭಿನಯದ ‘ಕೆಡಿ’ ಸಿನಿಮಾ ಮೂಲಕ ಮತ್ತೆ ದಕ್ಷಿಣಕ್ಕೆ ಮರಳುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ ಅಡಿಯಲ್ಲಿ ಸಿದ್ಧವಾಗುತ್ತಿರುವ ಸಿನಿಮಾದ ಟೈಟಲ್ ಲಾಂಚ್ ಇತ್ತೀಚೆಗೆ ನಡೆದಿದೆ. ಈ ಕಾರ್ಯಕ್ರಮಕ್ಕೆ ಸಂಜಯ್ ದತ್ ಕೂಡ ಆಗಮಿಸಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುತ್ತಾ ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ಅವರು ಅಪಾರ ಪ್ರೀತಿ ವ್ಯಕ್ತಪಡಿಸಿದ್ದಾರೆ.

‘ನಾನು ಕೆಜಿಎಫ್​ ಚಿತ್ರದಲ್ಲಿ ನಟಿಸಿದ್ದೇನೆ. ನನಗೆ ರಾಜಮೌಳಿ ಒಳ್ಳೆಯ ಗೆಳೆಯ. ದಕ್ಷಿಣ ಭಾರತದಲ್ಲಿ ಮಾಡುವ ಸಿನಿಮಾಗಳಲ್ಲಿ ಸಾಕಷ್ಟು ಎನರ್ಜಿ, ಪ್ರೀತಿ ಹಾಗೂ ಪ್ಯಾಷನ್ ಕಾಣುತ್ತದೆ. ಇಲ್ಲಿನವರು ಹೀರೋಯಿಸಂ ಅನ್ನು ಸೆಲೆಬ್ರೇಟ್ ಮಾಡುತ್ತಾರೆ’ ಎಂದಿದ್ದಾರೆ ಸಂಜಯ್ ದತ್​.

‘ಮುಂಬೈನವರು (ಬಾಲಿವುಡ್​) ನಾವು ನಮ್ಮ ತನವನ್ನು ಕಳೆದುಕೊಳ್ಳಬಾರದು. ಯಶ್, ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲ್ಮ್ಸ್ ಜತೆ ಕೆಲಸ ಮಾಡಿದ್ದು ಖುಷಿ ಇದೆ. ಈಗ ಧ್ರುವ ಜತೆ ಕೆಲಸ ಮಾಡುತ್ತಿರುವುದಕ್ಕೆ ಖುಷಿ ಇದೆ’ ಎಂದು ಸಂಜಯ್ ದತ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಇದನ್ನೂ ಓದಿ
Image
ಧ್ರುವ ಸರ್ಜಾ- ಪ್ರೇಮ್ ಸಿನಿಮಾಗೆ ‘ಕೆಡಿ​’ ಟೈಟಲ್​; ಅದ್ದೂರಿಯಾಗಿ ಲಾಂಚ್ ಆಯ್ತು ಶೀರ್ಷಿಕೆ
Image
ನಿರ್ದೇಶಕ ಪ್ರೇಮ್ ಹಾಗೂ ಸಂಜಯ್ ದತ್ ಭೇಟಿ ಹಿಂದಿನ ಗುಟ್ಟೇನು?
Image
Dhruva Sarja: ಅಪ್ಪನಾದ ಖುಷಿಯಲ್ಲಿ ಆಸ್ಪತ್ರೆ ಎದುರು ಅಭಿಮಾನಿಗಳ ಜತೆ ಸೆಲ್ಫಿಗೆ ಪೋಸ್​ ಕೊಟ್ಟ ಧ್ರುವ ಸರ್ಜಾ
Image
ಧ್ರುವ ಸರ್ಜಾ-ಪ್ರೇರಣಾಗೆ ಹೆಣ್ಣು ಮಗು; ರಾಯನ್​ ಜತೆ ಬಂದು ಪ್ರತಿಕ್ರಿಯೆ ನೀಡಿದ ಮೇಘನಾ ರಾಜ್​

‘ಜೋಗಿ’ ಅಂತಹ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಪ್ರೇಮ್​ಗೆ ಇದೆ. ‘ಅದ್ದೂರಿ’ ಅಂತಹ ಹಿಟ್ ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ ಧ್ರುವ. ಇಬ್ಬರೂ ಒಂದಾಗಿರುವ ಕಾರಣಕ್ಕೆ ಕುತೂಹಲ ಹೆಚ್ಚಿದೆ. ಈ ಚಿತ್ರದ ಮೂಲಕ ಸಂಜಯ್ ದತ್ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗಲಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಚಿತ್ರಕ್ಕಾಗಿ ಯಶ್, ಸಂಜಯ್ ದತ್, ರವೀನಾ, ಪ್ರಶಾಂತ್ ನೀಲ್ ಪಡೆದ ಸಂಭಾವನೆ ಎಷ್ಟು? ಇಲ್ಲಿದೆ ವಿವರ

ಧ್ರುವ ಸರ್ಜಾ ‘ಮಾರ್ಟಿನ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಮಾರ್ಟಿನ್’ ಚಿತ್ರಕ್ಕೆ ಎ.ಪಿ. ಅರ್ಜುನ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ನಟನೆಯ ಮೊದಲ ಸಿನಿಮಾ ‘ಅದ್ದೂರಿ’ಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು ಈಗ ಮತ್ತೊಮ್ಮೆ ಧ್ರುವ ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ, ರಿಲೀಸ್ ದಿನಾಂಕ ವಿಳಂಬ ಆಗಿದೆ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?