AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adheera Poster: ಖಡಕ್​ ಪೋಸ್ಟರ್​ ಮೂಲಕ ಅಧೀರ ಸಂಜಯ್​ ದತ್​ ಹುಟ್ಟುಹಬ್ಬಕ್ಕೆ ಶುಭಕೋರಿದ ‘ಕೆಜಿಎಫ್ 2’ ತಂಡ

KGF Chapter 2: ನಟ ಸಂಜಯ್​ ದತ್​ ಅವರಿಗೆ ಇಂದು (ಜು.29) ಹುಟ್ಟುಹಬ್ಬದ ಸಂಭ್ರಮ. ಆ ಪ್ರಯುಕ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು, ಸಂಜುಗೆ ಜನ್ಮದಿನದ ಶುಭಕೋರಲಾಗಿದೆ.

Adheera Poster: ಖಡಕ್​ ಪೋಸ್ಟರ್​ ಮೂಲಕ ಅಧೀರ ಸಂಜಯ್​ ದತ್​ ಹುಟ್ಟುಹಬ್ಬಕ್ಕೆ ಶುಭಕೋರಿದ ‘ಕೆಜಿಎಫ್ 2’ ತಂಡ
ಖಡಕ್​ ಪೋಸ್ಟರ್​ ಮೂಲಕ ಅಧೀರ ಸಂಜಯ್​ ದತ್​ ಹುಟ್ಟುಹಬ್ಬಕ್ಕೆ ಶುಭಕೋರಿದ ‘ಕೆಜಿಎಫ್ 2’ ತಂಡ
TV9 Web
| Edited By: |

Updated on:Jul 29, 2021 | 11:31 AM

Share

ಬಾಲಿವುಡ್​ ನಟ ಸಂಜಯ್​ ದತ್​ (Sanjay Dutt) ಅವರ ಆಗಮನದಿಂದಾಗಿ ಯಶ್​ (Yash) ಅಭಿನಯದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿತು. ಈಗ ಆ ನಿರೀಕ್ಷೆಯನ್ನು ದುಪ್ಟಟ್ಟು ಮಾಡಲು ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಅಧೀರ ಎಂಬ ಪಾತ್ರಕ್ಕೆ ಸಂಜಯ್​ ದತ್​ ಬಣ್ಣ ಹಚ್ಚಿದ್ದಾರೆ. ಇಂದು (ಜು.29) ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು, ಸಂಜಯ್​ ದತ್​ಗೆ ಶುಭಕೋರಲಾಗಿದೆ. ಸಂಜಯ್​ ಅಭಿಮಾನಿಗಳಿಗೆ ಈ ಪೋಸ್ಟರ್​ ಸಖತ್​ ಇಷ್ಟ ಆಗಿದೆ. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಅಧೀರನ ಲುಕ್​ ವೈರಲ್​ ಆಗುತ್ತಿದೆ.

ಸಂಜಯ್ ದತ್​ ನಿಭಾಯಿಸಿರುವ ಅಧೀರ ಎಂಬ ಈ ಪಾತ್ರ ತುಂಬ ಕ್ರೂರವಾಗಿರಲಿದೆ. ಅದನ್ನು ಆರಂಭದಿಂದಲೂ ನಿರ್ದೇಶಕ ಪ್ರಶಾಂತ್​ ನೀಲ್​ ಹೇಳುತ್ತಲೇ ಬಂದಿದ್ದಾರೆ. ಈ ಹಿಂದೆ ಬಿಡುಗಡೆ ಆಗಿದ್ದ ಪೋಸ್ಟರ್​ನಲ್ಲಿಯೂ ಆ ಬಗ್ಗೆ ಪ್ರಶಾಂತ್ ನೀಲ್​ ಪ್ರಸ್ತಾಪ ಮಾಡಿದ್ದರು. ಈಗ ಹೊಸ ಪೋಸ್ಟರ್​ ಜೊತೆ ಅವರು ಹಂಚಿಕೊಂಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ‘ಯುದ್ಧ ಇರುವುದು ಪ್ರಗತಿಗಾಗಿ. ನನ್ನ ಈ ಮಾತನ್ನು ರಣಹದ್ದುಗಳು ಕೂಡ ಒಪ್ಪಿಕೊಳ್ಳುತ್ತವೆ’ ಎಂಬ ಡೈಲಾಗ್ ಅನ್ನು ಪ್ರಶಾಂತ್​ ನೀಲ್​ ಪೋಸ್ಟ್​​ ಮಾಡಿದ್ದಾರೆ.

ಪಾತ್ರವರ್ಗದಿಂದಲೇ ಈ ಸಿನಿಮಾ ಕೌತುಕ ಕೆರಳಿಸಿದೆ. ಬಾಲಿವುಡ್​ ನಟಿ ರವೀನಾ ಟಂಡನ್​ ಅವರು ರಮಿಕಾ ಸೇನ್​ ಎಂಬ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿ ಪ್ರಕಾಶ್​ ರೈ ಕೂಡ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್​ ಮುಗಿದಿದ್ದು ಕೊನೇ ಹಂತದ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿ ಆಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರೊಳಗೆ ‘ಕೆಜಿಎಫ್​ 2’ ರಿಲೀಸ್​ ಆಗಿರಬೇಕಿತ್ತು. ಆದರೆ ಕೊರೊನಾ ಎರಡನೇ ಅಲೆ ಕಾರಣದಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಯಿತು. ಈಗ ಹೊಸ ರಿಲೀಸ್​ ಡೇಟ್​ ಘೋಷಣೆಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ.

ಇದನ್ನೂ ಓದಿ:

Sanjay Dutt Birthday: ಸಂಜಯ್​ ದತ್ ಬದುಕಿನ 308 ಪ್ರೇಯಸಿಯರು ಮತ್ತು ಮೂವರು ಪತ್ನಿಯರ ಬಗ್ಗೆ ಅಚ್ಚರಿಯ ಮಾಹಿತಿ

ಸಂಜಯ್​ ದತ್​ ಮಗಳು ತ್ರಿಶಲಾ ಬಾಯ್​ ಫ್ರೆಂಡ್​ ಸತ್ತಿದ್ದು ಹೇಗೆ? ಸ್ಟಾರ್ ಪುತ್ರಿಗೆ ಕಿರಿಕಿರಿ ತಂದ ಪ್ರಶ್ನೆ!

Published On - 10:25 am, Thu, 29 July 21

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ