Sign In

By signing in or creating an account, you agree with Associated Broadcasting Company's Terms & Conditions and Privacy Policy.

Adheera Poster: ಖಡಕ್​ ಪೋಸ್ಟರ್​ ಮೂಲಕ ಅಧೀರ ಸಂಜಯ್​ ದತ್​ ಹುಟ್ಟುಹಬ್ಬಕ್ಕೆ ಶುಭಕೋರಿದ ‘ಕೆಜಿಎಫ್ 2’ ತಂಡ

KGF Chapter 2: ನಟ ಸಂಜಯ್​ ದತ್​ ಅವರಿಗೆ ಇಂದು (ಜು.29) ಹುಟ್ಟುಹಬ್ಬದ ಸಂಭ್ರಮ. ಆ ಪ್ರಯುಕ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು, ಸಂಜುಗೆ ಜನ್ಮದಿನದ ಶುಭಕೋರಲಾಗಿದೆ.

Adheera Poster: ಖಡಕ್​ ಪೋಸ್ಟರ್​ ಮೂಲಕ ಅಧೀರ ಸಂಜಯ್​ ದತ್​ ಹುಟ್ಟುಹಬ್ಬಕ್ಕೆ ಶುಭಕೋರಿದ ‘ಕೆಜಿಎಫ್ 2’ ತಂಡ
ಖಡಕ್​ ಪೋಸ್ಟರ್​ ಮೂಲಕ ಅಧೀರ ಸಂಜಯ್​ ದತ್​ ಹುಟ್ಟುಹಬ್ಬಕ್ಕೆ ಶುಭಕೋರಿದ ‘ಕೆಜಿಎಫ್ 2’ ತಂಡ
Follow us
TV9 Web
| Updated By: Digi Tech Desk

Updated on:Jul 29, 2021 | 11:31 AM

ಬಾಲಿವುಡ್​ ನಟ ಸಂಜಯ್​ ದತ್​ (Sanjay Dutt) ಅವರ ಆಗಮನದಿಂದಾಗಿ ಯಶ್​ (Yash) ಅಭಿನಯದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿತು. ಈಗ ಆ ನಿರೀಕ್ಷೆಯನ್ನು ದುಪ್ಟಟ್ಟು ಮಾಡಲು ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಅಧೀರ ಎಂಬ ಪಾತ್ರಕ್ಕೆ ಸಂಜಯ್​ ದತ್​ ಬಣ್ಣ ಹಚ್ಚಿದ್ದಾರೆ. ಇಂದು (ಜು.29) ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು, ಸಂಜಯ್​ ದತ್​ಗೆ ಶುಭಕೋರಲಾಗಿದೆ. ಸಂಜಯ್​ ಅಭಿಮಾನಿಗಳಿಗೆ ಈ ಪೋಸ್ಟರ್​ ಸಖತ್​ ಇಷ್ಟ ಆಗಿದೆ. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಅಧೀರನ ಲುಕ್​ ವೈರಲ್​ ಆಗುತ್ತಿದೆ.

ಸಂಜಯ್ ದತ್​ ನಿಭಾಯಿಸಿರುವ ಅಧೀರ ಎಂಬ ಈ ಪಾತ್ರ ತುಂಬ ಕ್ರೂರವಾಗಿರಲಿದೆ. ಅದನ್ನು ಆರಂಭದಿಂದಲೂ ನಿರ್ದೇಶಕ ಪ್ರಶಾಂತ್​ ನೀಲ್​ ಹೇಳುತ್ತಲೇ ಬಂದಿದ್ದಾರೆ. ಈ ಹಿಂದೆ ಬಿಡುಗಡೆ ಆಗಿದ್ದ ಪೋಸ್ಟರ್​ನಲ್ಲಿಯೂ ಆ ಬಗ್ಗೆ ಪ್ರಶಾಂತ್ ನೀಲ್​ ಪ್ರಸ್ತಾಪ ಮಾಡಿದ್ದರು. ಈಗ ಹೊಸ ಪೋಸ್ಟರ್​ ಜೊತೆ ಅವರು ಹಂಚಿಕೊಂಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ‘ಯುದ್ಧ ಇರುವುದು ಪ್ರಗತಿಗಾಗಿ. ನನ್ನ ಈ ಮಾತನ್ನು ರಣಹದ್ದುಗಳು ಕೂಡ ಒಪ್ಪಿಕೊಳ್ಳುತ್ತವೆ’ ಎಂಬ ಡೈಲಾಗ್ ಅನ್ನು ಪ್ರಶಾಂತ್​ ನೀಲ್​ ಪೋಸ್ಟ್​​ ಮಾಡಿದ್ದಾರೆ.

ಪಾತ್ರವರ್ಗದಿಂದಲೇ ಈ ಸಿನಿಮಾ ಕೌತುಕ ಕೆರಳಿಸಿದೆ. ಬಾಲಿವುಡ್​ ನಟಿ ರವೀನಾ ಟಂಡನ್​ ಅವರು ರಮಿಕಾ ಸೇನ್​ ಎಂಬ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿ ಪ್ರಕಾಶ್​ ರೈ ಕೂಡ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್​ ಮುಗಿದಿದ್ದು ಕೊನೇ ಹಂತದ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿ ಆಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರೊಳಗೆ ‘ಕೆಜಿಎಫ್​ 2’ ರಿಲೀಸ್​ ಆಗಿರಬೇಕಿತ್ತು. ಆದರೆ ಕೊರೊನಾ ಎರಡನೇ ಅಲೆ ಕಾರಣದಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಯಿತು. ಈಗ ಹೊಸ ರಿಲೀಸ್​ ಡೇಟ್​ ಘೋಷಣೆಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ.

ಇದನ್ನೂ ಓದಿ:

Sanjay Dutt Birthday: ಸಂಜಯ್​ ದತ್ ಬದುಕಿನ 308 ಪ್ರೇಯಸಿಯರು ಮತ್ತು ಮೂವರು ಪತ್ನಿಯರ ಬಗ್ಗೆ ಅಚ್ಚರಿಯ ಮಾಹಿತಿ

ಸಂಜಯ್​ ದತ್​ ಮಗಳು ತ್ರಿಶಲಾ ಬಾಯ್​ ಫ್ರೆಂಡ್​ ಸತ್ತಿದ್ದು ಹೇಗೆ? ಸ್ಟಾರ್ ಪುತ್ರಿಗೆ ಕಿರಿಕಿರಿ ತಂದ ಪ್ರಶ್ನೆ!

Published On - 10:25 am, Thu, 29 July 21

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್