AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ರಿಲೀಸ್​ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಂಜಯ್​ ದತ್​

2022ರಲ್ಲಿ ಸಂಜಯ್​ ದತ್​ ನಟನೆಯ ಮೂರು ಸಿನಿಮಾಗಳು ತೆರೆಗೆ ಬರಬೇಕಿದೆ. ಈ ಸಿನಿಮಾಗಳ ರಿಲೀಸ್​ ದಿನಾಂಕಗಳು ಮುಂದಕ್ಕೆ ಹೋಗಬಹುದೇ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಕೆಜಿಎಫ್​ 2’ ರಿಲೀಸ್​ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಂಜಯ್​ ದತ್​
TV9 Web
| Edited By: |

Updated on: Jan 13, 2022 | 7:49 PM

Share

ಕರ್ನಾಟಕದಲ್ಲಿ ಕೊವಿಡ್​ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂದು (ಜನವರಿ 13) ರಾಜ್ಯದಲ್ಲಿ ಒಂದೇ ದಿನ 25 ಸಾವಿರ ಪ್ರಕರಣಗಳು ವರದಿ ಆಗಿವೆ. ಹೀಗಾಗಿ, ರಾಜ್ಯದಲ್ಲಿ ಮತ್ತೆ ಲಾಕ್​ಡೌನ್​ ಆಗುವ ಭಯ ಕಾಡಿದೆ. ಹಾಗಾದಲ್ಲಿ ಮತ್ತೆ ಚಿತ್ರಮಂದಿರಗಳನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ. ಆ ಬಳಿಕ ಮತ್ತೆ ಥಿಯೇಟರ್​​ಗಳು ಓಪನ್​ ಆಗೋಕೆ ಹಲವು ತಿಂಗಳೇ ಬೇಕಾಗಬಹುದು. ಹಾಗಾದಲ್ಲಿ ‘ಕೆಜಿಎಫ್​ 2’ ರಿಲೀಸ್ ಮತ್ತೆ ವಿಳಂಬವಾಗಬಹುದು. ಈಗ ಈ ಬಗ್ಗೆ ‘ಕೆಜಿಎಫ್​ 2’ ವಿಲನ್​, ಬಾಲಿವುಡ್​ ನಟ ಸಂಜಯ್​ ದತ್​ ಮಾತನಾಡಿದ್ದಾರೆ.

2022ರಲ್ಲಿ ಸಂಜಯ್​ ದತ್​ ನಟನೆಯ ಮೂರು ಸಿನಿಮಾಗಳು ತೆರೆಗೆ ಬರಬೇಕಿದೆ. ಈ ಸಿನಿಮಾಗಳ ರಿಲೀಸ್​ ದಿನಾಂಕಗಳು ಮುಂದಕ್ಕೆ ಹೋಗಬಹುದೇ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ‘ಕೆಜಿಎಫ್​ 2’ ಸಿನಿಮಾ ಚಿತ್ರಮಂದಿರದಲ್ಲೇ ಬಿಡುಗಡೆ ಆಗಲಿದೆ ಎಂದು ಅವರು ಹೇಳಿದ್ದಾರೆ.

‘2022 ಆರಂಭದಲ್ಲೇ ನನ್ನ ಮೂರು ಚಿತ್ರಗಳು ಬಿಡುಗಡೆ ಆಗಬೇಕಿದೆ. ಇದಕ್ಕೆ ನಾನು ತುಂಬಾ ಉತ್ಸುಕನಾಗಿದ್ದೇನೆ. ಈ ಸಿನಿಮಾಗಳು ರಿಲೀಸ್​ ಆಗುವುದಕ್ಕೆ ಎದುರು ನೋಡುತ್ತಿದ್ದೇನೆ. ಆದರೆ, ಕೊವಿಡ್​ ಹೆಚ್ಚುತ್ತಿದೆ. ಹೀಗಾಗಿ ಎಲ್ಲವೂ ಅನಿಶ್ಚಿತವಾಗಿದೆ. ‘ಶಂಶೇರಾ’, ‘ಕೆಜಿಎಫ್ 2’ ಮತ್ತು ‘ಪೃಥ್ವಿರಾಜ್’ ಈ ಮೂರು ಚಿತ್ರಗಳು ಥಿಯೇಟರ್​ ರಿಲೀಸ್​​ಗಾಗಿಯೇ ಮಾಡಿದ್ದಾಗಿದೆ’ ಎಂದಿದ್ದಾರೆ ಸಂಜಯ್​ ದತ್​. ಈ ಮೂಲಕ ಈ ಮೂರು ಚಿತ್ರಗಳು ಒಟಿಟಿ ಹಾದಿ ಹಿಡಿಯುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

‘ದೇಶದ ಕೋವಿಡ್ 19 ಪರಿಸ್ಥಿತಿ ನಿಯಂತ್ರಣದಲ್ಲಿದ್ದಾಗ ಮಾತ್ರ ಥಿಯೇಟರ್​ನಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದು. ಮುಂಬರುವ ದಿನಗಳಲ್ಲಿ ಕೊವಿಡ್​ ನಿಯಂತ್ರಣಕ್ಕೆ ಬರಬಹುದು ಎಂದು ನಾನು ಭಾವಿಸಿದ್ದೇನೆ. ಇದಕ್ಕಾಗಿ ಜನರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದನ್ನು ಮತ್ತು ಮಾಸ್ಕ್​ ಧರಿಸುವುದನ್ನು ಮುಂದುವರಿಸಬೇಕು’ ಎಂದು ಕೋರಿದ್ದಾರೆ ಸಂಜಯ್​ ದತ್​.

ಕಳೆದ ಜುಲೈ ತಿಂಗಳಲ್ಲೇ ‘ಕೆಜಿಎಫ್​ 2’ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕವನ್ನು 8 ತಿಂಗಳು ಮುಂದೂಡಿತ್ತು ಚಿತ್ರತಂಡ. ಸಿನಿಮಾ ಕೆಲಸ ಬಹುತೇಕ ಪೂರ್ಣಗೊಂಡ ಹೊರತಾಗಿಯೂ ಸಿನಿಮಾ ರಿಲೀಸ್​ ದಿನಾಂಕವನ್ನು ಇಷ್ಟು ದೂರಕ್ಕೆ ತಳ್ಳಿದ್ದೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಇದಕ್ಕೆ ಯಶ್​ ಕಡೆಯಿಂದ ಉತ್ತರ ನೀಡಿದ್ದರು.

‘ಶೀಘ್ರವೇ ಮೂರನೆ ಅಲೆ ಕಡಿಮೆ ಆಗಲಿದೆ. ತಜ್ಞರ ವರದಿ ಆಧರಿಸಿ ನಾನು ಈ ಮಾತನ್ನು ಹೇಳುತ್ತಿದ್ದೇನೆ. ಸಿನಿಮಾ ರಿಲೀಸ್​ ದಿನಾಂಕವನ್ನು 8 ತಿಂಗಳ ಕಾಲ ಮುಂದೂಡಿದ್ದು ಏಕೆ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ನಾವು ಈ ರೀತಿಯ ಪರಿಸ್ಥಿತಿ ಬರುತ್ತದೆ ಎಂದು ನಿರೀಕ್ಷಿಸಿದ್ದೆವು. ಹೀಗಾಗಿ, ಸೇಫ್​ ರಿಲೀಸ್​ ದಿನಾಂಕವನ್ನು ಆಯ್ಕೆ ಮಾಡಿಕೊಂಡೆವು’ ಎಂದು ಯಶ್ ಮಾಧ್ಯಮ ಒಂದರ ಸಂದರ್ಶನದಲ್ಲಿ ಹೇಳಿದ್ದರು.

ಇದನ್ನೂ ಓದಿ: ‘ಕೆಜಿಎಫ್​ ಸಿನಿಮಾ ಕಥೆ ಆಧರಿಸಿಯೇ ‘ಪುಷ್ಪ’ ಚಿತ್ರ ರೆಡಿ ಆಯ್ತು’; ಹೋಲಿಕೆ ಮಾಡಿ ಕಿಡಿಕಾರಿದ ನೆಟ್ಟಿಗರು

 

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ