AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ರಿಲೀಸ್​ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಂಜಯ್​ ದತ್​

2022ರಲ್ಲಿ ಸಂಜಯ್​ ದತ್​ ನಟನೆಯ ಮೂರು ಸಿನಿಮಾಗಳು ತೆರೆಗೆ ಬರಬೇಕಿದೆ. ಈ ಸಿನಿಮಾಗಳ ರಿಲೀಸ್​ ದಿನಾಂಕಗಳು ಮುಂದಕ್ಕೆ ಹೋಗಬಹುದೇ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಕೆಜಿಎಫ್​ 2’ ರಿಲೀಸ್​ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಂಜಯ್​ ದತ್​
TV9 Web
| Edited By: |

Updated on: Jan 13, 2022 | 7:49 PM

Share

ಕರ್ನಾಟಕದಲ್ಲಿ ಕೊವಿಡ್​ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂದು (ಜನವರಿ 13) ರಾಜ್ಯದಲ್ಲಿ ಒಂದೇ ದಿನ 25 ಸಾವಿರ ಪ್ರಕರಣಗಳು ವರದಿ ಆಗಿವೆ. ಹೀಗಾಗಿ, ರಾಜ್ಯದಲ್ಲಿ ಮತ್ತೆ ಲಾಕ್​ಡೌನ್​ ಆಗುವ ಭಯ ಕಾಡಿದೆ. ಹಾಗಾದಲ್ಲಿ ಮತ್ತೆ ಚಿತ್ರಮಂದಿರಗಳನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ. ಆ ಬಳಿಕ ಮತ್ತೆ ಥಿಯೇಟರ್​​ಗಳು ಓಪನ್​ ಆಗೋಕೆ ಹಲವು ತಿಂಗಳೇ ಬೇಕಾಗಬಹುದು. ಹಾಗಾದಲ್ಲಿ ‘ಕೆಜಿಎಫ್​ 2’ ರಿಲೀಸ್ ಮತ್ತೆ ವಿಳಂಬವಾಗಬಹುದು. ಈಗ ಈ ಬಗ್ಗೆ ‘ಕೆಜಿಎಫ್​ 2’ ವಿಲನ್​, ಬಾಲಿವುಡ್​ ನಟ ಸಂಜಯ್​ ದತ್​ ಮಾತನಾಡಿದ್ದಾರೆ.

2022ರಲ್ಲಿ ಸಂಜಯ್​ ದತ್​ ನಟನೆಯ ಮೂರು ಸಿನಿಮಾಗಳು ತೆರೆಗೆ ಬರಬೇಕಿದೆ. ಈ ಸಿನಿಮಾಗಳ ರಿಲೀಸ್​ ದಿನಾಂಕಗಳು ಮುಂದಕ್ಕೆ ಹೋಗಬಹುದೇ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ‘ಕೆಜಿಎಫ್​ 2’ ಸಿನಿಮಾ ಚಿತ್ರಮಂದಿರದಲ್ಲೇ ಬಿಡುಗಡೆ ಆಗಲಿದೆ ಎಂದು ಅವರು ಹೇಳಿದ್ದಾರೆ.

‘2022 ಆರಂಭದಲ್ಲೇ ನನ್ನ ಮೂರು ಚಿತ್ರಗಳು ಬಿಡುಗಡೆ ಆಗಬೇಕಿದೆ. ಇದಕ್ಕೆ ನಾನು ತುಂಬಾ ಉತ್ಸುಕನಾಗಿದ್ದೇನೆ. ಈ ಸಿನಿಮಾಗಳು ರಿಲೀಸ್​ ಆಗುವುದಕ್ಕೆ ಎದುರು ನೋಡುತ್ತಿದ್ದೇನೆ. ಆದರೆ, ಕೊವಿಡ್​ ಹೆಚ್ಚುತ್ತಿದೆ. ಹೀಗಾಗಿ ಎಲ್ಲವೂ ಅನಿಶ್ಚಿತವಾಗಿದೆ. ‘ಶಂಶೇರಾ’, ‘ಕೆಜಿಎಫ್ 2’ ಮತ್ತು ‘ಪೃಥ್ವಿರಾಜ್’ ಈ ಮೂರು ಚಿತ್ರಗಳು ಥಿಯೇಟರ್​ ರಿಲೀಸ್​​ಗಾಗಿಯೇ ಮಾಡಿದ್ದಾಗಿದೆ’ ಎಂದಿದ್ದಾರೆ ಸಂಜಯ್​ ದತ್​. ಈ ಮೂಲಕ ಈ ಮೂರು ಚಿತ್ರಗಳು ಒಟಿಟಿ ಹಾದಿ ಹಿಡಿಯುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

‘ದೇಶದ ಕೋವಿಡ್ 19 ಪರಿಸ್ಥಿತಿ ನಿಯಂತ್ರಣದಲ್ಲಿದ್ದಾಗ ಮಾತ್ರ ಥಿಯೇಟರ್​ನಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದು. ಮುಂಬರುವ ದಿನಗಳಲ್ಲಿ ಕೊವಿಡ್​ ನಿಯಂತ್ರಣಕ್ಕೆ ಬರಬಹುದು ಎಂದು ನಾನು ಭಾವಿಸಿದ್ದೇನೆ. ಇದಕ್ಕಾಗಿ ಜನರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದನ್ನು ಮತ್ತು ಮಾಸ್ಕ್​ ಧರಿಸುವುದನ್ನು ಮುಂದುವರಿಸಬೇಕು’ ಎಂದು ಕೋರಿದ್ದಾರೆ ಸಂಜಯ್​ ದತ್​.

ಕಳೆದ ಜುಲೈ ತಿಂಗಳಲ್ಲೇ ‘ಕೆಜಿಎಫ್​ 2’ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕವನ್ನು 8 ತಿಂಗಳು ಮುಂದೂಡಿತ್ತು ಚಿತ್ರತಂಡ. ಸಿನಿಮಾ ಕೆಲಸ ಬಹುತೇಕ ಪೂರ್ಣಗೊಂಡ ಹೊರತಾಗಿಯೂ ಸಿನಿಮಾ ರಿಲೀಸ್​ ದಿನಾಂಕವನ್ನು ಇಷ್ಟು ದೂರಕ್ಕೆ ತಳ್ಳಿದ್ದೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಇದಕ್ಕೆ ಯಶ್​ ಕಡೆಯಿಂದ ಉತ್ತರ ನೀಡಿದ್ದರು.

‘ಶೀಘ್ರವೇ ಮೂರನೆ ಅಲೆ ಕಡಿಮೆ ಆಗಲಿದೆ. ತಜ್ಞರ ವರದಿ ಆಧರಿಸಿ ನಾನು ಈ ಮಾತನ್ನು ಹೇಳುತ್ತಿದ್ದೇನೆ. ಸಿನಿಮಾ ರಿಲೀಸ್​ ದಿನಾಂಕವನ್ನು 8 ತಿಂಗಳ ಕಾಲ ಮುಂದೂಡಿದ್ದು ಏಕೆ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ನಾವು ಈ ರೀತಿಯ ಪರಿಸ್ಥಿತಿ ಬರುತ್ತದೆ ಎಂದು ನಿರೀಕ್ಷಿಸಿದ್ದೆವು. ಹೀಗಾಗಿ, ಸೇಫ್​ ರಿಲೀಸ್​ ದಿನಾಂಕವನ್ನು ಆಯ್ಕೆ ಮಾಡಿಕೊಂಡೆವು’ ಎಂದು ಯಶ್ ಮಾಧ್ಯಮ ಒಂದರ ಸಂದರ್ಶನದಲ್ಲಿ ಹೇಳಿದ್ದರು.

ಇದನ್ನೂ ಓದಿ: ‘ಕೆಜಿಎಫ್​ ಸಿನಿಮಾ ಕಥೆ ಆಧರಿಸಿಯೇ ‘ಪುಷ್ಪ’ ಚಿತ್ರ ರೆಡಿ ಆಯ್ತು’; ಹೋಲಿಕೆ ಮಾಡಿ ಕಿಡಿಕಾರಿದ ನೆಟ್ಟಿಗರು

 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್