AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ನಂತರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ಸಂಜನಾ ಗಲ್ರಾನಿ

ಸ್ಯಾಂಡಲ್​ವುಡ್ ಡ್ರಗ್​ ಕೇಸ್​ನಲ್ಲಿ ಸಂಜನಾ ಜೈಲು ಸೇರಿದ್ದರು. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಸಂಜನಾ ಹೊರ ಬಂದಿದ್ದಾರೆ. ಈ ಸಮಯದಲ್ಲಿ ಕಾಳಜಿ ತೋರಿದ ಇನ್​​ಸ್ಟಾಗ್ರಾಂ ಖಾತೆಯ 10 ಲಕ್ಷ ಹಿಂಬಾಲಕರಿಗೆ ಸಂಜನಾ ಧನ್ಯವಾದ ಹೇಳಿದ್ದಾರೆ.

ಜೈಲಿನಿಂದ ಹೊರ ಬಂದ ನಂತರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ ಶೇರ್​ ಮಾಡಿಕೊಂಡಿರುವ ಪೋಸ್ಟ್​
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 03, 2021 | 6:40 PM

Share

ಬೆಂಗಳೂರು: ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಜಾಮೀನು ಪಡೆದು ಹೊರ ಬಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಅಭಿಮಾನಿಗಳಿಗೆ ಅವರು ಧನ್ಯವಾದ  ಹೇಳಿದ್ದಾರೆ.

ಸ್ಯಾಂಡಲ್​ವುಡ್ ಡ್ರಗ್​ ಕೇಸ್​ನಲ್ಲಿ ಸಂಜನಾ ಹೆಸರು ಕೇಳಿ ಬಂದಿತ್ತು. ರಾಗಿಣಿ ದ್ವಿವೇದಿ ಜೊತೆ ಅವರು ಕೂಡ ಜೈಲು ಸೇರಿದ್ದರು. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಸಂಜನಾ ಬಿಡುಗಡೆ ಆಗಿದ್ದಾರೆ. ಈ ಸಮಯದಲ್ಲಿ ಕಾಳಜಿ ತೋರಿದ ಇನ್​​ಸ್ಟಾಗ್ರಾಂ ಖಾತೆಯ 10 ಲಕ್ಷ ಹಿಂಬಾಲಕರಿಗೆ ಸಂಜನಾ ಧನ್ಯವಾದ ಹೇಳಿದ್ದಾರೆ.

ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದ. ನಿಮ್ಮ ಪ್ರತಿ ಸಂದೇಶಗಳನ್ನು ನಾನು ಓದಿದ್ದೇನೆ. ನಿಮ್ಮ ಕಾಳಜಿಗೆ ಧನ್ಯವಾದ. ನನ್ನ ಆರೋಗ್ಯ ಸರಿ ಆದ ನಂತರದಲ್ಲಿ ನಾನು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯನಾಗುತ್ತೇನೆ. ನಿಮ್ಮ ಪ್ರೀತಿ-ಕಾಳಜಿಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ ಎಂದಿದ್ದಾರೆ.

ಸದ್ದು ಮಾಡಿದ್ದ ಸಂಜನಾ ಮತಾಂತರ ವಿಚಾರ ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಕಾಟನ್‌ಪೇಟೆ ಠಾಣೆಗೆ ನೀಡಿರುವ ದೂರಿನಲ್ಲಿ ವಕೀಲರೊಬ್ಬರು ಆರೋಪಿಸಿದ್ದರು. ದೂರು ಸ್ವೀಕರಿಸಿದ್ದ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದರು. ಸಂಜನಾರನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರುನಾಮಕರಣ ಮಾಡಲಾಗಿತ್ತು ಎನ್ನಲಾಗಿದೆ. ಜೈಲಿನಿಂದ ಬಿಡುಗಡೆ ಬಳಿಕ ಸಂಜನಾ ಅಜ್ಞಾತ ಸ್ಥಳಕ್ಕೆ ಶಿಫ್ಟ್​ ಆಗಿದ್ದರು.

ಸಂಜನಾಗೊಂದು ನ್ಯಾಯ, ರಾಗಿಣಿಗೊಂದು ನ್ಯಾಯವೇ? ರಾಗಿಣಿ ತಾಯಿ ಪ್ರಶ್ನೆ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?