AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ನಂತರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ಸಂಜನಾ ಗಲ್ರಾನಿ

ಸ್ಯಾಂಡಲ್​ವುಡ್ ಡ್ರಗ್​ ಕೇಸ್​ನಲ್ಲಿ ಸಂಜನಾ ಜೈಲು ಸೇರಿದ್ದರು. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಸಂಜನಾ ಹೊರ ಬಂದಿದ್ದಾರೆ. ಈ ಸಮಯದಲ್ಲಿ ಕಾಳಜಿ ತೋರಿದ ಇನ್​​ಸ್ಟಾಗ್ರಾಂ ಖಾತೆಯ 10 ಲಕ್ಷ ಹಿಂಬಾಲಕರಿಗೆ ಸಂಜನಾ ಧನ್ಯವಾದ ಹೇಳಿದ್ದಾರೆ.

ಜೈಲಿನಿಂದ ಹೊರ ಬಂದ ನಂತರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ ಶೇರ್​ ಮಾಡಿಕೊಂಡಿರುವ ಪೋಸ್ಟ್​
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 03, 2021 | 6:40 PM

ಬೆಂಗಳೂರು: ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಜಾಮೀನು ಪಡೆದು ಹೊರ ಬಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಅಭಿಮಾನಿಗಳಿಗೆ ಅವರು ಧನ್ಯವಾದ  ಹೇಳಿದ್ದಾರೆ.

ಸ್ಯಾಂಡಲ್​ವುಡ್ ಡ್ರಗ್​ ಕೇಸ್​ನಲ್ಲಿ ಸಂಜನಾ ಹೆಸರು ಕೇಳಿ ಬಂದಿತ್ತು. ರಾಗಿಣಿ ದ್ವಿವೇದಿ ಜೊತೆ ಅವರು ಕೂಡ ಜೈಲು ಸೇರಿದ್ದರು. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಸಂಜನಾ ಬಿಡುಗಡೆ ಆಗಿದ್ದಾರೆ. ಈ ಸಮಯದಲ್ಲಿ ಕಾಳಜಿ ತೋರಿದ ಇನ್​​ಸ್ಟಾಗ್ರಾಂ ಖಾತೆಯ 10 ಲಕ್ಷ ಹಿಂಬಾಲಕರಿಗೆ ಸಂಜನಾ ಧನ್ಯವಾದ ಹೇಳಿದ್ದಾರೆ.

ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದ. ನಿಮ್ಮ ಪ್ರತಿ ಸಂದೇಶಗಳನ್ನು ನಾನು ಓದಿದ್ದೇನೆ. ನಿಮ್ಮ ಕಾಳಜಿಗೆ ಧನ್ಯವಾದ. ನನ್ನ ಆರೋಗ್ಯ ಸರಿ ಆದ ನಂತರದಲ್ಲಿ ನಾನು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯನಾಗುತ್ತೇನೆ. ನಿಮ್ಮ ಪ್ರೀತಿ-ಕಾಳಜಿಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ ಎಂದಿದ್ದಾರೆ.

ಸದ್ದು ಮಾಡಿದ್ದ ಸಂಜನಾ ಮತಾಂತರ ವಿಚಾರ ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಕಾಟನ್‌ಪೇಟೆ ಠಾಣೆಗೆ ನೀಡಿರುವ ದೂರಿನಲ್ಲಿ ವಕೀಲರೊಬ್ಬರು ಆರೋಪಿಸಿದ್ದರು. ದೂರು ಸ್ವೀಕರಿಸಿದ್ದ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದರು. ಸಂಜನಾರನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರುನಾಮಕರಣ ಮಾಡಲಾಗಿತ್ತು ಎನ್ನಲಾಗಿದೆ. ಜೈಲಿನಿಂದ ಬಿಡುಗಡೆ ಬಳಿಕ ಸಂಜನಾ ಅಜ್ಞಾತ ಸ್ಥಳಕ್ಕೆ ಶಿಫ್ಟ್​ ಆಗಿದ್ದರು.

ಸಂಜನಾಗೊಂದು ನ್ಯಾಯ, ರಾಗಿಣಿಗೊಂದು ನ್ಯಾಯವೇ? ರಾಗಿಣಿ ತಾಯಿ ಪ್ರಶ್ನೆ

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ