AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?
ರಾಜೇಶ್ ದುಗ್ಗುಮನೆ
|

Updated on:Apr 14, 2021 | 8:36 PM

Share

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಡ್ರಗ್​​ ಕೇಸ್​ನಲ್ಲಿ ಅನೇಕರು ಜೈಲು ಪಾಲಾಗಿದ್ದರು. ಇದರಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಒಬ್ಬರು. ಡ್ರಗ್​ ಪ್ರಕರಣಕ್ಕೆ ಸಂಬಂಧಿಸಿ ಸಂಜನಾ ಅನೇಕ ದಿನ ಜೈಲಿನಲ್ಲಿದ್ದು ಬಂದಿದ್ದರು. ಈಗ ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದಾರೆ. ಆದರೆ, ಖಿನ್ನತೆಯಿಂದ ಬೊಜ್ಜು ಕಾಣಿಸಿಕೊಂಡಿದೆ ಎಂದು ಸಂಜನಾ ಬೇಸರ ಹೊರ ಹಾಕಿದ್ದಾರೆ. ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ. ಆಹಾರ ಕ್ರಮದ ಮೇಲೂ ತುಂಬಾನೇ ಗಮನ ಹರಿಸುತ್ತಾರೆ. ಸ್ವಲ್ಪ ಬೊಜ್ಜು ಕಾಣಿಸಿಕೊಂಡರೂ ಸೆಲೆಬ್ರಿಟಿಗಳಿಗೆ ಚಿಂತೆ ಶುರುವಾಗಿ ಬಿಡುತ್ತದೆ. ಈಗ ಸಂಜನಾಗೆ ಟಮ್ಮಿ ಫ್ಯಾಟ್​ ಕಾಣಿಸಿಕೊಂಡಿದೆ. ಹಾಗಂತ ಅವರು ಚಿಂತೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಅವರು ಓಪನ್​ ಆಗಿಯೇ ಹೇಳಿಕೊಂಡಿದ್ದಾರೆ.

ಈ ಬಗ್ಗೆ ರೀಲ್ಸ್​ ಮಾಡಿ ಇನ್​ಸ್ಟ್ರಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಸಂಜನಾ, ಡಿಪ್ರೆಷನ್​ನಿಂದ ಫ್ಯಾಟ್​ ಬಂದಿದೆ ಎಂದು ಹೇಳಿಕೊಂಡಿದ್ದಾರೆ. ಫ್ಯಾಟ್​ ಬಂದಿರುವುದನ್ನು ಈ ವಿಡಿಯೋದಲ್ಲಿ ಅವರು ತೋರಿಸಿದ್ದಾರೆ.

ಈ ಬಗ್ಗೆ ಕ್ಯಾಪ್ಶನ್​ ಕೊಟ್ಟಿರುವ ಸಂಜನಾ, ಜನರು ಸಣ್ಣ ಆದರೆ ಬಂದು ಸಣ್ಣ ಆದೆ ಸಣ್ಣ ಆದೆ ಎನ್ನುತ್ತಾರೆ. ಆದರೆ, ಈಗ ನಾನು ದಪ್ಪ ಆಗಿದ್ದೇನೆ. ಬೇರೆಯವರು ಬಂದು ಹೇಳುವ ಮೊದಲೇ ನಾನೇ ಇದನ್ನು ಹೇಳುತ್ತಿದ್ದೇನೆ ಎಂದಿದ್ದಾರೆ. ಜತೆಗೆ ಫ್ಯಾಟ್​ ಕರಗಿಸೋಕೆ ಅವರು ಸೊಲ್ಯೂಷನ್​ ಕೂಡ ಕೇಳಿದ್ದಾರೆ.

ಇದನ್ನೂ ಓದಿ: ಜಾಲಿ ಮೂಡ್​ನಲ್ಲಿ ಯಾರ್ಕರ್​ ಕಿಂಗ್ ಬುಮ್ರಾ- ಸಂಜನಾ ಗಣೇಶನ್.. ಫುಲ್​ ವೈರಲ್​ ಆಯ್ತು ದಂಪತಿಗಳ ಕ್ಯೂಟ್​ ಲುಕ್!

 ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

Published On - 8:15 pm, Wed, 14 April 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ