AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?
ರಾಜೇಶ್ ದುಗ್ಗುಮನೆ
|

Updated on:Apr 14, 2021 | 8:36 PM

Share

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಡ್ರಗ್​​ ಕೇಸ್​ನಲ್ಲಿ ಅನೇಕರು ಜೈಲು ಪಾಲಾಗಿದ್ದರು. ಇದರಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಒಬ್ಬರು. ಡ್ರಗ್​ ಪ್ರಕರಣಕ್ಕೆ ಸಂಬಂಧಿಸಿ ಸಂಜನಾ ಅನೇಕ ದಿನ ಜೈಲಿನಲ್ಲಿದ್ದು ಬಂದಿದ್ದರು. ಈಗ ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದಾರೆ. ಆದರೆ, ಖಿನ್ನತೆಯಿಂದ ಬೊಜ್ಜು ಕಾಣಿಸಿಕೊಂಡಿದೆ ಎಂದು ಸಂಜನಾ ಬೇಸರ ಹೊರ ಹಾಕಿದ್ದಾರೆ. ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ. ಆಹಾರ ಕ್ರಮದ ಮೇಲೂ ತುಂಬಾನೇ ಗಮನ ಹರಿಸುತ್ತಾರೆ. ಸ್ವಲ್ಪ ಬೊಜ್ಜು ಕಾಣಿಸಿಕೊಂಡರೂ ಸೆಲೆಬ್ರಿಟಿಗಳಿಗೆ ಚಿಂತೆ ಶುರುವಾಗಿ ಬಿಡುತ್ತದೆ. ಈಗ ಸಂಜನಾಗೆ ಟಮ್ಮಿ ಫ್ಯಾಟ್​ ಕಾಣಿಸಿಕೊಂಡಿದೆ. ಹಾಗಂತ ಅವರು ಚಿಂತೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಅವರು ಓಪನ್​ ಆಗಿಯೇ ಹೇಳಿಕೊಂಡಿದ್ದಾರೆ.

ಈ ಬಗ್ಗೆ ರೀಲ್ಸ್​ ಮಾಡಿ ಇನ್​ಸ್ಟ್ರಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಸಂಜನಾ, ಡಿಪ್ರೆಷನ್​ನಿಂದ ಫ್ಯಾಟ್​ ಬಂದಿದೆ ಎಂದು ಹೇಳಿಕೊಂಡಿದ್ದಾರೆ. ಫ್ಯಾಟ್​ ಬಂದಿರುವುದನ್ನು ಈ ವಿಡಿಯೋದಲ್ಲಿ ಅವರು ತೋರಿಸಿದ್ದಾರೆ.

ಈ ಬಗ್ಗೆ ಕ್ಯಾಪ್ಶನ್​ ಕೊಟ್ಟಿರುವ ಸಂಜನಾ, ಜನರು ಸಣ್ಣ ಆದರೆ ಬಂದು ಸಣ್ಣ ಆದೆ ಸಣ್ಣ ಆದೆ ಎನ್ನುತ್ತಾರೆ. ಆದರೆ, ಈಗ ನಾನು ದಪ್ಪ ಆಗಿದ್ದೇನೆ. ಬೇರೆಯವರು ಬಂದು ಹೇಳುವ ಮೊದಲೇ ನಾನೇ ಇದನ್ನು ಹೇಳುತ್ತಿದ್ದೇನೆ ಎಂದಿದ್ದಾರೆ. ಜತೆಗೆ ಫ್ಯಾಟ್​ ಕರಗಿಸೋಕೆ ಅವರು ಸೊಲ್ಯೂಷನ್​ ಕೂಡ ಕೇಳಿದ್ದಾರೆ.

ಇದನ್ನೂ ಓದಿ: ಜಾಲಿ ಮೂಡ್​ನಲ್ಲಿ ಯಾರ್ಕರ್​ ಕಿಂಗ್ ಬುಮ್ರಾ- ಸಂಜನಾ ಗಣೇಶನ್.. ಫುಲ್​ ವೈರಲ್​ ಆಯ್ತು ದಂಪತಿಗಳ ಕ್ಯೂಟ್​ ಲುಕ್!

 ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

Published On - 8:15 pm, Wed, 14 April 21

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ