AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?
ರಾಜೇಶ್ ದುಗ್ಗುಮನೆ
|

Updated on:Apr 14, 2021 | 8:36 PM

Share

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಡ್ರಗ್​​ ಕೇಸ್​ನಲ್ಲಿ ಅನೇಕರು ಜೈಲು ಪಾಲಾಗಿದ್ದರು. ಇದರಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಒಬ್ಬರು. ಡ್ರಗ್​ ಪ್ರಕರಣಕ್ಕೆ ಸಂಬಂಧಿಸಿ ಸಂಜನಾ ಅನೇಕ ದಿನ ಜೈಲಿನಲ್ಲಿದ್ದು ಬಂದಿದ್ದರು. ಈಗ ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದಾರೆ. ಆದರೆ, ಖಿನ್ನತೆಯಿಂದ ಬೊಜ್ಜು ಕಾಣಿಸಿಕೊಂಡಿದೆ ಎಂದು ಸಂಜನಾ ಬೇಸರ ಹೊರ ಹಾಕಿದ್ದಾರೆ. ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ. ಆಹಾರ ಕ್ರಮದ ಮೇಲೂ ತುಂಬಾನೇ ಗಮನ ಹರಿಸುತ್ತಾರೆ. ಸ್ವಲ್ಪ ಬೊಜ್ಜು ಕಾಣಿಸಿಕೊಂಡರೂ ಸೆಲೆಬ್ರಿಟಿಗಳಿಗೆ ಚಿಂತೆ ಶುರುವಾಗಿ ಬಿಡುತ್ತದೆ. ಈಗ ಸಂಜನಾಗೆ ಟಮ್ಮಿ ಫ್ಯಾಟ್​ ಕಾಣಿಸಿಕೊಂಡಿದೆ. ಹಾಗಂತ ಅವರು ಚಿಂತೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಅವರು ಓಪನ್​ ಆಗಿಯೇ ಹೇಳಿಕೊಂಡಿದ್ದಾರೆ.

ಈ ಬಗ್ಗೆ ರೀಲ್ಸ್​ ಮಾಡಿ ಇನ್​ಸ್ಟ್ರಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಸಂಜನಾ, ಡಿಪ್ರೆಷನ್​ನಿಂದ ಫ್ಯಾಟ್​ ಬಂದಿದೆ ಎಂದು ಹೇಳಿಕೊಂಡಿದ್ದಾರೆ. ಫ್ಯಾಟ್​ ಬಂದಿರುವುದನ್ನು ಈ ವಿಡಿಯೋದಲ್ಲಿ ಅವರು ತೋರಿಸಿದ್ದಾರೆ.

ಈ ಬಗ್ಗೆ ಕ್ಯಾಪ್ಶನ್​ ಕೊಟ್ಟಿರುವ ಸಂಜನಾ, ಜನರು ಸಣ್ಣ ಆದರೆ ಬಂದು ಸಣ್ಣ ಆದೆ ಸಣ್ಣ ಆದೆ ಎನ್ನುತ್ತಾರೆ. ಆದರೆ, ಈಗ ನಾನು ದಪ್ಪ ಆಗಿದ್ದೇನೆ. ಬೇರೆಯವರು ಬಂದು ಹೇಳುವ ಮೊದಲೇ ನಾನೇ ಇದನ್ನು ಹೇಳುತ್ತಿದ್ದೇನೆ ಎಂದಿದ್ದಾರೆ. ಜತೆಗೆ ಫ್ಯಾಟ್​ ಕರಗಿಸೋಕೆ ಅವರು ಸೊಲ್ಯೂಷನ್​ ಕೂಡ ಕೇಳಿದ್ದಾರೆ.

ಇದನ್ನೂ ಓದಿ: ಜಾಲಿ ಮೂಡ್​ನಲ್ಲಿ ಯಾರ್ಕರ್​ ಕಿಂಗ್ ಬುಮ್ರಾ- ಸಂಜನಾ ಗಣೇಶನ್.. ಫುಲ್​ ವೈರಲ್​ ಆಯ್ತು ದಂಪತಿಗಳ ಕ್ಯೂಟ್​ ಲುಕ್!

 ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

Published On - 8:15 pm, Wed, 14 April 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?