AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೇ ಕ್ಷಣದಲ್ಲಿ ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆ ಕ್ಯಾನ್ಸಲ್; ಏನಿದು ಕಿರಿಕ್?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಶುಕ್ರವಾರ (ಜನವರಿ 10) ‘ಸಂಜು ವೆಡ್ಸ್​ ಗೀತಾ 2’ ಸಿನಿಮಾ ಬಿಡುಗಡೆ ಆಗುತ್ತಿತ್ತು. ಅಭಿಮಾನಿಗಳು ಈ ಸಿನಿಮಾ ನೋಡಲು ಕಾದಿದ್ದರು. ಆದರೆ ಚಿತ್ರತಂಡದೊಳಗಿನ ಜಗಳದಿಂದಾಗಿ ಬಿಡುಗಡೆಗೆ ಅಡ್ಡಿ ಉಂಟಾಗಿದೆ. ಕೊನೇ ಕ್ಷಣದಲ್ಲಿ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ರಿಲೀಸ್​ ಮುಂದಕ್ಕೆ ಹೋಗಿದೆ.

ಕೊನೇ ಕ್ಷಣದಲ್ಲಿ ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆ ಕ್ಯಾನ್ಸಲ್; ಏನಿದು ಕಿರಿಕ್?
Sanju Weds Geetha 2
Follow us
ಮದನ್​ ಕುಮಾರ್​
|

Updated on: Jan 09, 2025 | 10:40 PM

ಶ್ರೀನಗರ ಕಿಟ್ಟಿ, ರಚಿತಾ ರಾಮ್ ಮುಂತಾದವರು ನಟಿಸಿರುವ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಬಿಡುಗಡೆ ಕ್ಯಾನ್ಸಲ್ ಆಗಿದೆ. ಜನವರಿ 10ರಂದು ಬಿಡುಗಡೆ ಮಾಡಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಅಂತಿಮ ಹಂತದಲ್ಲಿ ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿದೆ. ಈ ಸಿನಿಮಾಗೆ ನಾಗಶೇಖರ್ ಅವರು ನಿರ್ದೇಶನ ಮಾಡಿದ್ದು, ಚಿತ್ರತಂಡದಲ್ಲಿನ ಜಟಾಪಟಿಯಿಂದಾಗಿ ಸಿನಿಮಾದ ರಿಲೀಸ್​ ಮುಂದಕ್ಕೆ ಹೋಗುವಂತಾಗಿದೆ. ಹಾಗಾಗಿ, ಶುಕ್ರವಾರ (ಜ.10) ‘ಸಂಜು ವೆಡ್ಸ್​ ಗೀತಾ 2’ ಸಿನಿಮಾ ಬಿಡುಗಡೆ ಆಗುತ್ತಿಲ್ಲ.

ಟೈಟಲ್​ ಕಾರಣದಿಂದಲೇ ‘ಸಂಜು ವೆಡ್ಸ್​ ಗೀತಾ 2’ ಚಿತ್ರ ನಿರೀಕ್ಷೆ ಮೂಡಿಸಿತ್ತು. ಹಾಗಾಗಿ ಈ ಸಿನಿಮಾವನ್ನು ನೋಡಬೇಕು ಎಂದು ರಚಿತಾ ರಾಮ್​, ಶ್ರೀನಗರ ಕಿಟ್ಟಿ ಫ್ಯಾನ್ಸ್ ಕಾಯುತ್ತಿದ್ದರು. ಇನ್ನೇನು ಜನವರಿ 10 ಬಂದೇ ಬಿಡ್ತು, ಚಿತ್ರಮಂದಿರದಲ್ಲಿ ಸಿನಿಮಾ ನೋಡೋಣ ಎಂದುಕೊಂಡಿದ್ದ ಎಲ್ಲ ಅಭಿಮಾನಿಗಳಿಗೆ ನಿರಾಸೆ ಆಗಿದೆ. ‘ಕ್ಷಮಿಸಿ, ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಲಾಗಿದೆ’ ಎಂದು ಚಿತ್ರತಂಡದವರು ಮಾಹಿತಿ ನೀಡಿದ್ದಾರೆ.

ನಿರ್ದೇಶಕ ನಾಗಶೇಖರ್​ ಮತ್ತು ಟಾಲಿವುಡ್ ನಿರ್ಮಾಪಕ ರಾಮರಾವ್ ನಡುವಿನ ಜಟಾಪಟಿಯೇ ಇದಕ್ಕೆಲ್ಲ ಕಾರಣ ಎನ್ನಲಾಗಿದೆ. ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಬಿಡುಗಡೆಗೆ ಹೈದಾರಾಬಾದ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಕಾರಣದಿಂದ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕುವುದು ಅನಿವಾರ್ಯ ಆಗಿದೆ.

ಇದನ್ನೂ ಓದಿ: ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ ರಾಮ್

ಇತ್ತೀಚೆಗಷ್ಟೇ ‘ಸಂಜು ವೆಡ್ಸ್​ ಗೀತಾ 2’ ಸುದ್ದಿಗೋಷ್ಠಿ ನಡೆಸಿತ್ತು. ಬಿಡುಗಡೆ ಸಲುವಾಗಿ ರಚಿತಾ ರಾಮ್ ಅವರು ಮಾಧ್ಯಮಗಳಿಗೆ ಸಂದರ್ಶನ ಕೂಡ ನೀಡಿದ್ದರು. ಕೊನೇ ಕ್ಷಣದಲ್ಲಿ ಬಿಡುಗಡೆ ಕ್ಯಾನ್ಸಲ್ ಆಗಿರುವುದರಿಂದ ಪ್ರೇಕ್ಷಕರಿಗೆ ಬೇಸರ ಆಗಿದೆ. 2011ರಲ್ಲಿ ‘ಸಂಜು ವೆಡ್ಸ್​ ಗೀತಾ’ ಸಿನಿಮಾ ಬಂದಿತ್ತು. ಆದರೆ ಈಗ ರಿಲೀಸ್​ಗೆ ಸಿದ್ಧವಾಗಿರುವ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ. ಇದು ಸೀಕ್ವೆಲ್​ ಅಲ್ಲ. ಈ ಬಾರಿ ನಿರ್ದೇಶಕ ನಾಗಶೇಖರ್​ ಅವರು ಸಂಪೂರ್ಣ ಬೇರೆಯದೇ ಕಹಾನಿಯನ್ನು ಪ್ರೇಕ್ಷಕರಿಗೆ ತೋರಿಸಲು ಸಜ್ಜಾಗಿದ್ದರು. ಆದರೆ ರಿಲೀಸ್ ಡೇಟ್​ ಮುಂದೂಡಿಕೆ ಆಗಿದ್ದು, ಹೊಸ ರಿಲೀಸ್​ ಡೇಟ್​ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಈ ವಾರ ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’, ‘ಛೂ ಮಂತರ್​’, ‘ಗೇಮ್​ ಚೇಂಜರ್​’ ಮುಂತಾದ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಹಲವು ಸಿನಿಮಾಗಳು ತೆರೆಕಾಣುತ್ತಿವೆ. ಈ ರೇಸ್​ನಿಂದ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾ ಹಿಂದಕ್ಕೆ ಸರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ