ಸ್ವಿಟ್ಜರ್ಲ್ಯಾಂಡ್​ನ ಚಳಿಯಲ್ಲಿ‘ಸಂಜು ವೆಡ್ಸ್ ಗೀತಾ 2‘ ಚಿತ್ರೀಕರಣ

Sanju Weds Geetha 2: ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಹಾಡುಗಳ ಚಿತ್ರೀಕರಣವನ್ನು ಸ್ವಿಡ್ಜರ್​​ಲ್ಯಾಂಡ್​ನಲ್ಲಿ ಮಾಡಲಾಗಿದೆ. ಅಲ್ಲಿನ ಅನುಭವದ ಬಗ್ಗೆ ಚಿತ್ರತಂಡ ಮಾತನಾಡಿದೆ.

ಸ್ವಿಟ್ಜರ್ಲ್ಯಾಂಡ್​ನ ಚಳಿಯಲ್ಲಿ‘ಸಂಜು ವೆಡ್ಸ್ ಗೀತಾ 2‘ ಚಿತ್ರೀಕರಣ
Follow us
|

Updated on:Dec 30, 2023 | 7:47 PM

ಕೆಲವು ತಿಂಗಳ ಹಿಂದೆ ‘ಸಂಜು ವೆಡ್ಸ್ ಗೀತಾ 2‘ (Sanju weds Geetha 2) ಸಿನಿಮಾದ ಚಿತ್ರೀಕರಣ ಅಂತಿಮ ಘಟ್ಟಕ್ಕೆ ಬಂದಿದೆ. ಡಿಸೆಂಬರ್ ತಿಂಗಳಲ್ಲಿ ಚಿತ್ರತಂಡ ಸ್ವಿಟ್ಜರ್ ಲ್ಯಾಂಡ್ ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು ಬಂದಿದೆ. ಈವರೆಗೆ ನಡೆಸಿದ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಳ್ಳಲೆಂದು ಸಿನಿಮಾದ ನಿರ್ದೇಶಕ‌ ನಾಗಶೇಖರ್ ಹಾಗೂ ಚಿತ್ರತಂಡ ಮಾದ್ಯಮಗಳ ಮುಂದೆ ಬಂದಿತ್ತು. ಅಶೋಕ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಿಟ್ಜರ್ ಲ್ಯಾಂಡ್ ಶೂಟಿಂಗ್ ದೃಶ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ನಾಗಶೇಖರ್ ಹಿಂದೆ ‘ಸಂಜು ವೆಡ್ಸ್ ಗೀತಾ’ ಮೊದಲ ಸಿನಿಮಾ ಮಾಡುವಾಗ ಆದ ಅನುಭವಗಳನ್ನು ಮೆಲಕು ಹಾಕಿದರು. ಅಲ್ಲದೆ ಈ ಚಿತ್ರ ಅದಕ್ಕಿಂತ ಚೆನ್ನಾಗಿ, ಸುಂದರವಾಗಿ ಮೂಡಿಬರುತ್ತಿದೆ. ಇತ್ತೀಚೆಗಷ್ಟೇ ಸ್ವಿಟ್ಜರ್ ಲ್ಯಾಂಡ್ ನಲ್ಲಿ ಹಾಡುಗಳ ಚಿತ್ರೀಕರಣ ಮಾಡಿಕೊಂಡು ಬಂದಿದ್ದೇವೆ. ನಂತರ ಮುಂಬಯಿ, ಹೈದರಾಬಾದ್ ಶೂಟಿಂಗ್ ಮಾಡಿ, 2024ರ ಏಪ್ರಿಲ್ 1ರಂದು ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ’’ ಎಂದರು.

‘ಸಂಜು ವೆಡ್ಸ್ ಗೀತಾ’ ಸಿನಿಮಾಕ್ಕೆ ಪ್ರೇಕ್ಷಕರ ಪ್ರೇಮ ದೊರಕಿದ ಕಾರಣದಿಂದ ಭಾಗ ಎರಡು ಇಷ್ಟು ಅದ್ದೂರಿಯಾಗಿ ಮೂಡಿಬರುತ್ತಿದೆ. ರಂಗಾಯಣ ರಘು, ಸಾಧು ಕೋಕಿಲ ವಿಶೇಷ ಪಾತ್ರಗಳಲ್ಲಿದ್ದಾರೆ. ನನ್ನ‌ ಈ ಕನಸಿಗೆ ಎಂಜಿನಿಯರಿಂಗ್ ಕ್ಲಾಸ್ ಮೆಟ್ ಕುಮಾರ್ ಕೈಜೋಡಿಸಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಅದ್ಭುತವಾದ ಟ್ಯೂನ್ ಗಳನ್ನು ಮಾಡಿ ಕೊಟ್ಟಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ರಚಿತಾ ರಾಮ್, ಶ್ರೀನಗರ ಕಿಟ್ಟಿ ಇಬ್ಬರೂ ಅದ್ಭುತ ಅಭಿನಯ ನೀಡಿದ್ದಾರೆ. 2024ರ ಬ್ಲಾಕ್ ಬಸ್ಟರ್ ಸಿನಿಮಾ ಆಗಲಿದೆ ‘ಸಂಜು ವೆಡ್ಸ್ ಗೀತಾ’ ಎಂದರು.

ಇದನ್ನೂ ಓದಿ:ಸಂಜು ವೆಡ್ಸ್ ಗೀತಾ 2: ಅರುಣ್ ಸಾಗರ್ ಹಾಡಿದ ಚೈನೀಸ್ ಹಾಡು ಕೇಳಿ

ಇಂಥ ಒಳ್ಳೆ ನಿರ್ಮಾಪಕರು ನಮ್ಮ ಚಿತ್ರಕ್ಕೆ ಸಿಕ್ಕಿದ್ದಾರೆ. ಯಾವುದಕ್ಕೂ ಹಿಂದೇಟು ಹಾಕಲ್ಲ ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹಿರಿಯ ನಿರ್ದೇಶಕ ಎಸ್.ಮಹೇಂದರ್, ನಟ ಶರಣ್ ಆಗಮಿಸಿ ನಾಗಶೇಖರ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಬಗ್ಗೆ ಮಾತನಾಡಿದರು. ನಾಯಕ ಶ್ರೀನಗರ ಕಿಟ್ಟಿ ಮಾತನಾಡಿ ‘‘ಸ್ವಿಟ್ಜರ್​ಲ್ಯಾಂಡ್​ನಲ್ಲಿ ಕೊರೆಯುವ ಚಳಿ ಇತ್ತು. ವಿಷಮ ಪರಿಸ್ಥಿತಿಯನ್ನು ಸಹಿಸಿಕೊಂಡು ಕೆಲಸ ಮಾಡಿದ್ದೇವೆ ಅದಕ್ಕೆ ತಕ್ಕಂತೆ ಹಾಡುಗಳು ತುಂಬಾ ಚೆನ್ನಾಗಿ ಬಂದಿವೆ ಎಂದರು.

ನಾಯಕಿ ರಚಿತಾ ರಾಮ್ ಮಾತನಾಡಿ ‘ಭಿನ್ನ ಶೇಡ್ಸ್ ಇರುವಂಥ ಗೀತಾ ಪಾತ್ರ ನನ್ನದು. ಸಿನಿಮಾ ಅಂದ್ರೆ ಖುಷಿ, ಕಷ್ಟ ಎರಡೂ ಇರುತ್ತೆ. ನಾವು ಹೋಗಿದ್ದೇ ಡಿಸೆಂಬರ್ ಚಳಿಯಲ್ಲಿ. ನಾಗಶೇಖರ್ ಏನೇ ಮಾಡಿದರೂ ಯೋಜನೆ ಹಾಕಿಕೊಂಡು ಮಾಡ್ತಾರೆ. ನಮಗೆ ಪ್ರಕೃತಿ ಕೂಡ ತುಂಬಾ ಬೆಂಬಲ ಮಾಡಿತು. ಅಲ್ಲಿ ಮಾಡಿದ ಎರಡು ಹಾಡುಗಳೂ ತುಂಬಾ ಚೆನ್ನಾಗಿ ಬಂದಿವೆ. ಲೊಕೇಶನ್ ಅದ್ಭುತ. ಸತ್ಯ ಹೆಗಡೆ ಸರ್ ಬೇರೆ ಬೇರೆ ಆ್ಯಂಗಲ್ ನಲ್ಲಿ ಶೂಟ್ ಮಾಡಿದ್ದಾರೆ. ಎಮೋಷನಲ್ ಸೀನ್ಸ್ ಬಹಳ ಚೆನ್ನಾಗಿ ಬಂದಿದೆ ಎಂದರು.

ಸಂಗೀತ ನಿರ್ದೇಶಕ‌ ಶ್ರೀಧರ ವಿ. ಸಂಭ್ರಮ ಚಿತ್ರದಲ್ಲಿ 5 ಸುಂದರ ಹಾಡುಗಳಿಗೆ ಸಂಗೀತ ನೀಡಿದ್ದು, ಕವಿರಾಜ ಅವರು ಸಾಹಿತ್ಯ ಬರೆದಿದ್ದಾರೆ. ನಿರ್ಮಾಪಕ ಚಲವಾದಿ ಕುಮಾರ್‌ ಮಾತನಾಡಿ, ನಾಗಶೇಖರ್ ನಾನು ಇಂಜಿನಿಯರಿಂಗ್ ಕ್ಲಾಸ್ ಮೆಟ್ಸ್. ಸ್ಕ್ರಿಪ್ಟ್ ನಲ್ಲೂ ನಾನು ಜೊತೆ ಕುಳಿತಿದ್ದೆ. ಸಿನಿಮಾ ತುಂಬಾ ಚೆನ್ನಾಗಿ ಬರುತ್ತಿದೆ ಎಂದರು. ನಾಗಶೇಖರ್ ಮೂವೀಸ್ ಹಾಗೂ ಪವಿತ್ರ ಇಂಟರ್ ನ್ಯಾಷನಲ್ ಮೂವಿ ಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Sat, 30 December 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ