AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡ; ನಟಿ ಮಾಡಿದ ತಪ್ಪೇನು?

‘ಚಿತ್ರತಂಡಕ್ಕೆ ರಚಿತಾ ರಾಮ್ ದ್ರೋಹ ಬಗೆದಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ನಿರ್ಮಾಪಕರು ದೂರು ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಿನಿಮಾದ ನಿರ್ಮಾಪಕ ಛಲವಾದಿ ಕುಮಾರ್​ ಅವರು ಪತ್ರ ಬರೆದಿದ್ದಾರೆ. ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ನಾಗಶೇಖರ್ ಕೂಡ ರಚಿತಾ ರಾಮ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡ; ನಟಿ ಮಾಡಿದ ತಪ್ಪೇನು?
Rachita Ram
ಮದನ್​ ಕುಮಾರ್​
|

Updated on: Jun 17, 2025 | 9:18 PM

Share

ನಟಿ ರಚಿತಾ ರಾಮ್ ಅವರು ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಜೊತೆ ಅವರು ಅಭಿನಯಿಸಿದ್ದಾರೆ. ಈ ಸಿನಿಮಾಗೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾ ಬಿಡುಗಡೆ ಆಯಿತು. ಈಗ ರಚಿತಾ ರಾಮ್ (Rachita Ram) ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದೆ. ನಟಿಯ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ಸಿನಿಮಾದ ಪ್ರಚಾರಕ್ಕೆ ಬಾರದೇ ರಚಿತಾ ರಾಮ್ ಅವರು ಅಸಹಕಾರ ತೋರುತ್ತಿದ್ದಾರೆ ಎಂದು ನಿರ್ದೇಶಕ ನಾಗಶೇಖರ್ (Nagashekar), ನಟ ಶ್ರೀನಗರ ಕಿಟ್ಟಿ ಅವರು ಆರೋಪಿಸಿದ್ದಾರೆ.

‘ನಾವು ಇಂಥ ಕಲಾವಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಹಕಾರ ಕೊಟ್ಟಿಲ್ಲ. ರಾಕ್​ಲೈನ್​ ವೆಂಕಟೇಶ್​​ ಮನವೊಲಿಸಿದರೂ ಸಹ ಒಪ್ಪಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್​ ಸಪೋರ್ಟ್​ ಕೊಟ್ಟಿದ್ದಾರೆ​. ಆದರೆ, ನಟಿ ರಚಿತಾ ರಾಮ್​ ಚಿತ್ರದ ಪ್ರಚಾರಕ್ಕೆ ಬಂದಿಲ್ಲ. ನಾವು ರಚಿತಾ ರಾಮ್ ಅವರಿಗೆ ಸಂಭಾವನೆ ಕಡಿಮೆ ಕೊಟ್ಟಿಲ್ಲ. ಆದರೂ ನಟಿ ರಚಿತಾ ರಾಮ್​ ಚಿತ್ರದ ಪ್ರಚಾರಕ್ಕೆ ಬಂದಿಲ್ಲ’ ಎಂದು ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದವರು ಆರೋಪ ಮಾಡಿದ್ದಾರೆ.

‘ರಮ್ಯಾ, ತಮನ್ನಾ ಮುಂತಾದ ಕಲಾವಿದರ ಜೊತೆ ಸಿನಿಮಾ ಮಾಡಿದ್ದೀನಿ. ಆದರೆ ಯಾವ ನಟಿಯೂ ಇಂತಹ ಸಮಸ್ಯೆ ಕೊಟ್ಟಿಲ್ಲ. ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರೂ ಕೂಡ ಒಂದು ದಿನವೂ ಸಪೋರ್ಟ್ ಮಾಡಿಲ್ಲ’ ಎಂದು ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಚಿತಾ ರಾಮ್ ಯಾವ ರೀತಿ ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ
Image
ರಚಿತಾ​ಗೆ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ ದರ್ಶನ್; ನಟಿಯ ಪ್ರತಿಕ್ರಿಯೆ ಏನು?
Image
‘ಎಷ್ಟೇ ವರ್ಷ ನನ್ನ ಹಿಂದೆ ಬಂದರೂ ನಿಮಗೆ ಬೀಳಲ್ಲ’; ನೇರವಾಗಿ ಹೇಳಿದ ರಚಿತಾ
Image
ಯಾರ ಜೊತೆಗೂ ಹೋಗಿ ಇರಲ್ಲ ಎಂದು ರಚಿತಾ ರಾಮ್ ಹೇಳಿದ್ದರ ಹಿಂದಿನ ವಿವಾದವೇನು?
Image
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ನಾವು ಕಳೆದ 45 ದಿನಗಳಿಂದ ನಟಿ ರಚಿತಾ ರಾಮ್ ಅವರನ್ನು ಮ್ಯಾನೇಜರ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಅವರನ್ನು ಪ್ರಚಾರಕ್ಕೆ ಕರೆತರಲು ವಿಫಲರಾಗಿದ್ದೇವೆ. ಅನ್ನ ತಿಂದ ಚಿತ್ರಕ್ಕೆ ರಚಿತಾ ರಾಮ್ ದ್ರೋಹ ಬಗೆದಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ನಿರ್ಮಾಪಕ ಛಲವಾದಿ ಕುಮಾರ್ ಅವರು ಫಿಲ್ಮ್ ಚೇಂಬರ್​ಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್

ಈ ಮೊದಲು ‘ಸಂಜು ವೆಡ್ಸ್ ಗೀತಾ 2’ ಸಿನಿಮಾವನ್ನು ಜನವರಿ 17ರಂದು ಬಿಡುಗಡೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಕಾನೂನಿನ ತೊಂದರೆ ಉಂಟಾಗಿದ್ದರಿಂದ ಪ್ರದರ್ಶನ ನಿಲ್ಲಿಸಲಾಯಿತು. ಅಲ್ಲದೇ ಸಿನಿಮಾಗೆ ಕೆಲವು ಬದಲಾವಣೆ ಮಾಡಲು ಚಿತ್ರತಂಡ ನಿರ್ಧರಿಸಿತು. ಆ ಎಲ್ಲ ವಿಘ್ನಗಳು ನಿವಾರಣೆ ಆದ ಬಳಿಕ ಜೂನ್ 6ರಂದು ಸಿನಿಮಾವನ್ನು ಮರು ಬಿಡುಗಡೆ ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು