ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’

2018ರಲ್ಲಿ ಸಂಕಷ್ಟಕರ ಗಣಪತಿ ಸಿನಿಮಾ ತೆರೆಗೆ ಬಂದಿತ್ತು. ‘ಏಲಿಯನ್ ಹ್ಯಾಂಡ್ ಸಿಂಡ್ರೋಮ್’ ಕಥಾಹಂದರ ಹೊಂದಿದ್ದ ಈ ಸಿನಿಮಾ ಉತ್ತಮ ಹೆಸರು ಮಾಡಿತ್ತು.

ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’
ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 14, 2021 | 9:18 PM

ಸ್ಯಾಂಡಲ್​ವುಡ್​ನ ಸಾಕಷ್ಟು ಸಿನಿಮಾಗಳು ಈ ಮೊದಲಿನಿಂದಲೂ ಬೇರೆ ಭಾಷೆಗಳಿಗೆ ರಿಮೇಕ್​ ಆಗುತ್ತಲೇ ಬಂದಿವೆ. ಯು-ಟರ್ನ್​ ಸಿನಿಮಾ ಹಲವು ಭಾಷೆಗೆ ರಿಮೇಕ್​ ಆಗಿ ದಾಖಲೆ ಬರೆದಿದೆ. ಈಗ ಕನ್ನಡದ ಮತ್ತೊಂದು ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಹೌದು, ಕನ್ನಡದ ‘ಸಂಕಷ್ಟಕರ ಗಣಪತಿ’ ಸಿನಿಮಾ ಈಗ ಹಿಂದಿ ಚಿತ್ರರಂಗದತ್ತ ಮುಖ ಮಾಡಿದೆ.

2018ರಲ್ಲಿ ಸಂಕಷ್ಟಕರ ಗಣಪತಿ ಸಿನಿಮಾ ತೆರೆಗೆ ಬಂದಿತ್ತು. ‘ಏಲಿಯನ್ ಹ್ಯಾಂಡ್ ಸಿಂಡ್ರೋಮ್’ ಕಥಾಹಂದರ ಹೊಂದಿದ್ದ ಈ ಸಿನಿಮಾ ಉತ್ತಮ ಹೆಸರು ಮಾಡಿತ್ತು. ವಿಮರ್ಶೆಯಲ್ಲೂ ಈ ಚಿತ್ರ ಗೆದ್ದಿತ್ತು. ಈಗ ಈ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ‘ಕಾರ್ವಾನ್’ ಮತ್ತು ‘ರಶ್ಮಿ ರಾಕೆಟ್’ ಖ್ಯಾತಿಯ ಆಕರ್ಷ್ ಖುರಾನಾ ಅವರು ಸನ್ನಿ ಖುರಾನಾ ಹಾಗೂ ವಿಕಾಸ್ ಶರ್ಮಾ ಜೊತೆಗೂಡಿ ‘ಬಾಯೆ ಹಾಥ್ ಕಾ ಖೇಲ್’ ಹೆಸರಿನಡಿಯಲ್ಲಿ ಸಿನಿಮಾ ಮಾಡುತ್ತಿದೆ.

2018ರಲ್ಲಿ ತೆರೆಕಂಡ ಈ ಚಿತ್ರವು ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿ ನಂತರ ಅಮೇಜಾನ್ ಪ್ರೈಮ್​ನಲ್ಲಿ ಪ್ರಸಾರವಾಗುತ್ತಿದೆ. ಅರ್ಜುನ್​ ಕುಮಾರ್​ ಎಸ್​. ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು.  ಲಿಖಿತ್ ಶೆಟ್ಟಿ, ಅಚ್ಯುತ ಕುಮಾರ್, ಶೃತಿ ಗೊರಾಡಿಯಾ, ನಾಗಭೂಷಣ, ಮಂಜುನಾಥ ಹೆಗಡೆ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್​ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಮತ್ತು  ವಿಜೇತ್ ಚಂದ್ರ, ಮಧು ತುಂಬಕೆರೆ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದರು.

ಇದನ್ನೂ ಓದಿ: ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ

‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ