AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’

2018ರಲ್ಲಿ ಸಂಕಷ್ಟಕರ ಗಣಪತಿ ಸಿನಿಮಾ ತೆರೆಗೆ ಬಂದಿತ್ತು. ‘ಏಲಿಯನ್ ಹ್ಯಾಂಡ್ ಸಿಂಡ್ರೋಮ್’ ಕಥಾಹಂದರ ಹೊಂದಿದ್ದ ಈ ಸಿನಿಮಾ ಉತ್ತಮ ಹೆಸರು ಮಾಡಿತ್ತು.

ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’
ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’
TV9 Web
| Edited By: |

Updated on: Aug 14, 2021 | 9:18 PM

Share

ಸ್ಯಾಂಡಲ್​ವುಡ್​ನ ಸಾಕಷ್ಟು ಸಿನಿಮಾಗಳು ಈ ಮೊದಲಿನಿಂದಲೂ ಬೇರೆ ಭಾಷೆಗಳಿಗೆ ರಿಮೇಕ್​ ಆಗುತ್ತಲೇ ಬಂದಿವೆ. ಯು-ಟರ್ನ್​ ಸಿನಿಮಾ ಹಲವು ಭಾಷೆಗೆ ರಿಮೇಕ್​ ಆಗಿ ದಾಖಲೆ ಬರೆದಿದೆ. ಈಗ ಕನ್ನಡದ ಮತ್ತೊಂದು ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಹೌದು, ಕನ್ನಡದ ‘ಸಂಕಷ್ಟಕರ ಗಣಪತಿ’ ಸಿನಿಮಾ ಈಗ ಹಿಂದಿ ಚಿತ್ರರಂಗದತ್ತ ಮುಖ ಮಾಡಿದೆ.

2018ರಲ್ಲಿ ಸಂಕಷ್ಟಕರ ಗಣಪತಿ ಸಿನಿಮಾ ತೆರೆಗೆ ಬಂದಿತ್ತು. ‘ಏಲಿಯನ್ ಹ್ಯಾಂಡ್ ಸಿಂಡ್ರೋಮ್’ ಕಥಾಹಂದರ ಹೊಂದಿದ್ದ ಈ ಸಿನಿಮಾ ಉತ್ತಮ ಹೆಸರು ಮಾಡಿತ್ತು. ವಿಮರ್ಶೆಯಲ್ಲೂ ಈ ಚಿತ್ರ ಗೆದ್ದಿತ್ತು. ಈಗ ಈ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ‘ಕಾರ್ವಾನ್’ ಮತ್ತು ‘ರಶ್ಮಿ ರಾಕೆಟ್’ ಖ್ಯಾತಿಯ ಆಕರ್ಷ್ ಖುರಾನಾ ಅವರು ಸನ್ನಿ ಖುರಾನಾ ಹಾಗೂ ವಿಕಾಸ್ ಶರ್ಮಾ ಜೊತೆಗೂಡಿ ‘ಬಾಯೆ ಹಾಥ್ ಕಾ ಖೇಲ್’ ಹೆಸರಿನಡಿಯಲ್ಲಿ ಸಿನಿಮಾ ಮಾಡುತ್ತಿದೆ.

2018ರಲ್ಲಿ ತೆರೆಕಂಡ ಈ ಚಿತ್ರವು ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿ ನಂತರ ಅಮೇಜಾನ್ ಪ್ರೈಮ್​ನಲ್ಲಿ ಪ್ರಸಾರವಾಗುತ್ತಿದೆ. ಅರ್ಜುನ್​ ಕುಮಾರ್​ ಎಸ್​. ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು.  ಲಿಖಿತ್ ಶೆಟ್ಟಿ, ಅಚ್ಯುತ ಕುಮಾರ್, ಶೃತಿ ಗೊರಾಡಿಯಾ, ನಾಗಭೂಷಣ, ಮಂಜುನಾಥ ಹೆಗಡೆ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್​ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಮತ್ತು  ವಿಜೇತ್ ಚಂದ್ರ, ಮಧು ತುಂಬಕೆರೆ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದರು.

ಇದನ್ನೂ ಓದಿ: ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ

‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!