AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ

ಸಂತೋಷ್​ ಆನಂದ್​ರಾಮ್​ ಹಾಗೂ ಪುನೀತ್​ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇವರ ಕಾಂಬಿನೇಷನ್​ನಲ್ಲಿ ಬಂದ ‘ರಾಜಕುಮಾರ’ ಹಾಗೂ ‘ಯುವರತ್ನ’ ಸಿನಿಮಾಗಳಲ್ಲಿ ಕೆಲಸ ಮಾಡಿದ್ದರು. ಎರಡೂ ಚಿತ್ರ ಹಿಟ್​ ಆಗಿತ್ತು.

ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ
ಸಂತೋಷ್ ಆನಂದ್​ರಾಮ್ ಮತ್ತು ಪುನೀತ್ ರಾಜಕುಮಾರ್
TV9 Web
| Edited By: |

Updated on: Nov 21, 2021 | 9:52 PM

Share

ಪುನೀತ್​ ರಾಜ್​ಕುಮಾರ್​ ಅವರು ನಿಧನ ಹೊಂದಿ ಒಂದು ತಿಂಗಳು ಆಗುತ್ತಾ ಬಂದಿದೆ. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಸಮಾಧಿಗೆ ನಿತ್ಯ ಸಾವಿರಾರು ಜನರು ಈಗಲೂ ಭೇಟಿ ನೀಡುತ್ತಲೇ ಇದ್ದಾರೆ. ಮತ್ತೊಂದು ಕಡೆ ಪುನೀತ್​ ನಟನೆಯ ಕೊನೆಯ ಸಿನಿಮಾ ‘ಜೇಮ್ಸ್​’ನ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಈ ಸಿನಿಮಾ ಮಾರ್ಚ್​ ತಿಂಗಳಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಈಗ ಪುನೀತ್​ ಬಯೋಪಿಕ್​ ಬಗ್ಗೆ ಚರ್ಚೆ ನಡೆಯುತ್ತಿದೆ. ಹೀಗೊಂದು ಆಲೋಚನೆ ಅಭಿಮಾನಿಗಳ ಕಡೆಯಿಂದಲೇ ಬಂದಿದೆ. ಇದಕ್ಕೆ ಖ್ಯಾತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಪ್ರತಿಕ್ರಿಯೆ ನೀಡಿದ್ದಾರೆ.

ಸಂತೋಷ್​ ಆನಂದ್​ರಾಮ್​ ಹಾಗೂ ಪುನೀತ್​ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇವರ ಕಾಂಬಿನೇಷನ್​ನಲ್ಲಿ ಬಂದ ‘ರಾಜಕುಮಾರ’ ಹಾಗೂ ‘ಯುವರತ್ನ’ ಸಿನಿಮಾಗಳಲ್ಲಿ ಕೆಲಸ ಮಾಡಿದ್ದರು. ಎರಡೂ ಚಿತ್ರ ಹಿಟ್​ ಆಗಿತ್ತು. ಇವರ ಕಾಂಬಿನೇಷನ್​ನಲ್ಲಿ ಮೂರನೇ ಸಿನಿಮಾ ಮೂಡಿ ಬರಬೇಕಿತ್ತು. ಅದಕ್ಕೂ ಮೊದಲೇ ಅವಘಡವೊಂದು ನಡೆದು ಹೋಗಿತ್ತು. ಪುನೀತ್​ ಹೃದಯಘಾತದಿಂದ ಮೃತಪಟ್ಟರು. ಈ ಕಾರಣಕ್ಕೆ ಹಲವು ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತಿವೆ. ಈ ಮಧ್ಯೆ ಪುನೀತ್​ ಬಯೋಪಿಕ್​ ಬಗ್ಗೆ ಚರ್ಚೆ ನಡೆದಿದೆ.

ಪುನೀತ್​ ಸಣ್ಣ ವಯಸ್ಸಿನಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. ಆಗಲೇ ರಾಷ್ಟ್ರ ಪ್ರಶಸ್ತಿಯನ್ನು ಕೂಡ ಅವರು ಬಾಚಿಕೊಂಡರು. ನಂತರ ಹೀರೋ ಆಗಿಯೂ ಪುನೀತ್​ ಮಿಂಚಿದರು. ಸಾಮಾಜಿಕ ಕೆಲಸಗಳನ್ನು ಕೂಡ ಪುನೀತ್​ ಮಾಡಿದ್ದಾರೆ. ಇಷ್ಟೇ ಅಲ್ಲದೆ, ಪುನೀತ್​ ಬಗ್ಗೆ ತಿಳಿಯದೇ ಇರುವ ಹಲವು ವಿಚಾರಗಳು ಇವೆ. ಇದನ್ನು ತಿಳಿದುಕೊಳ್ಳಬೇಕು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಈ ಕಾರಣಕ್ಕೆ ಕೆಲವರು ಪುನೀತ್​​ ಬಯೋಪಿಕ್​ ಮಾಡಿ ಎನ್ನುವ ಬೇಡಿಕೆಯನ್ನು ಸಂತೋಷ್​ ಮುಂದೆ ಇಟ್ಟಿದ್ದಾರೆ. ಇದಕ್ಕೆ ಸಂತೋಷ್​ ಆನಂದ್​ರಾಮ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಸಂತೋಷ್ ಆನಂದ್‌ರಾಮ್‌ ಅವರೇ ಅಪ್ಪು ಸರ್ ಬಗ್ಗೆ ಒಂದು ಬಯೋಪಿಕ್ ಮಾಡಿ. ನೀವು ಪುನೀತ್​ ಅವರನ್ನು ತುಂಬ ಹತ್ತಿರದಿಂದ ನೋಡಿದ್ದೀರಿ. ಅವರ ಪ್ರೀತಿ ಮತ್ತು ಮೌಲ್ಯಗಳನ್ನು ನೋಡಿದ್ದೀರಿ. ದಯವಿಟ್ಟು ಬಯೋಪಿಕ್​ ಮಾಡಿ’ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಸಂತೋಷ್ ಆನಂದ್‌ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ‘ಈ ಕಲ್ಪನೆಯನ್ನು ತೆರೆಯ ಮೇಲೆ ತರಲು ನನ್ನಿಂದಾದ ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತೇನೆ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸುರಿಯುವ ಮಳೆಯಲ್ಲಿ ಪುನೀತ್ ಫೋಟೋ​ಗೆ ಕೈ ಮುಗಿದು ಕುಳಿತ ಅಭಿಮಾನಿ; ಇಲ್ಲಿದೆ ವೈರಲ್​ ವಿಡಿಯೋ

ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಹಾರಾಷ್ಟ್ರ ಅನಾಥಾಶ್ರಮದಲ್ಲಿ ಅನ್ನದಾನ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್