AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್, ಸಂತೋಷ್ ಆನಂದರಾಮ್, ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ; ಸೆಟ್ಟೇರೋದು ಯಾವಾಗ?

Puneeth Rajkumar: ಕನ್ನಡದ ಹಿಟ್ ಜೋಡಿಗಳಲ್ಲಿ ಒಂದಾದ ಸಂತೋಷ್ ಆನಂದರಾಮ್ ಹಾಗೂ ಪುನೀತ್ ರಾಜಕುಮಾರ್ ಅವರ ನೂತನ ಚಿತ್ರದ ಕುರಿತು ಮಾಹಿತಿ ಲಭ್ಯವಾಗಿದೆ. ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಪುನೀತ್, ಸಂತೋಷ್ ಆನಂದರಾಮ್, ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ; ಸೆಟ್ಟೇರೋದು ಯಾವಾಗ?
ಸಂತೋಷ್ ಆನಂದ್​ರಾಮ್ ಮತ್ತು ಪುನೀತ್ ರಾಜಕುಮಾರ್
TV9 Web
| Edited By: |

Updated on: Sep 19, 2021 | 11:15 AM

Share

ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಹೊಸ ಚಿತ್ರಗಳು ಇತ್ತೀಚೆಗೆ ಸಖತ್ ಸದ್ದು ಮಾಡುತ್ತಿವೆ. ಕಾರಣ, ದೊಡ್ಡ ತಾರಾ ಬಳಗ, ಅದ್ದೂರಿ ಬಜೆಟ್ ಹಾಗೂ ಸೂಪರ್ ಹಿಟ್ ಕಾಂಬಿನೇಷನ್ ನ ನಿರ್ದೇಶಕ- ನಟ ಜೋಡಿ ಒಂದಾಗಿ ಹೊಸ ಸಿನಿಮಾಗಳನ್ನು ಮಾಡುತ್ತಿರುವುದು. ಇದಕ್ಕೆ‌ ಉದಾಹರಣೆಯೆಂಬಂತೆ ಇತ್ತೀಚಿನ ಹಲವು ಚಿತ್ರಗಳನ್ನು ಗುರುತಿಸಬಹುದು. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯೊಂದೇ ತನ್ನ ಬ್ಯಾನರ್​​ನಲ್ಲಿ ಬಿಗ್​ ಬಜೆಟ್​ನ ಹಲವು ಚಿತ್ರಗಳನ್ನು ಘೋಷಿಸಿದೆ. ಇದೀಗ ಆ ಸಾಲಿಗೆ ಹೊಸ ಚಿತ್ರವೊಂದು ಸೇರ್ಪಡೆಯಾಗಿದೆ. ಹೌದು. ಚಂದನವನದ ಹಿಟ್ ಕಾಂಬಿನೇಷನ್​ನಲ್ಲಿ ಒಂದಾದ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜಕುಮಾರ್ ಜೋಡಿ ಮತ್ತೆ ಒಂದಾಗುವುದು ಪಕ್ಕಾ ಆಗಿದೆ. ಈ ಕುರಿತು ಸಂತೋಷ್, ಮಾಹಿತಿ ನೀಡಿದ್ದಾರೆ.

ಟ್ವೀಟ್ ಮುಖಾಂತರ ಮಾಹಿತಿ ನೀಡಿರುವ ನಿರ್ದೇಶಕ ಸಂತೋಷ್ ಆನಂದರಾಮ್, ಹೊಂಬಾಳೆ ಫಿಲ್ಮ್ಸ್, ಪುನೀತ್ ರಾಜಕುಮಾರ್ ಹಾಗೂ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಅಪ್ಡೇಟ್ ನೀಡಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್, ಪುನೀತ್ ಹಾಗೂ ನನ್ನ ಕಾಂಬಿನೇಷನ್​ನ ಹೊಸ ಚಿತ್ರದ ಬಗ್ಗೆ ಎಲ್ಲರೂ ಕೇಳುತ್ತಿದ್ದಿರಿ. ಅವರಿಗೆಲ್ಲರಿಗೂ ಈ ಮಾಹಿತಿ. ನಮ್ಮ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ ಮುಂದಿನ ವರ್ಷ ಸೆಟ್ಟೇರಲಿದೆ. ನಿಮ್ಮೆಲ್ಲರ ಅಭಿಮಾನ, ಹಾರೈಕೆಗೆ ಧನ್ಯವಾದಗಳು’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪುನೀತ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯನ್ನು ನೀಡಿದ್ದು, ಹೊಸ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಬ್ಯಾನರ್​ನಲ್ಲಿ ಪುನೀತ್ ರಾಜಕುಮಾರ್ ಕಡೆಯದಾಗಿ ‘ಯುವರತ್ನ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ರಾಜಕುಮಾರ’ ಚಿತ್ರದ ನಂತರ ಸಂತೋಷ್ ಆನಂದರಾಮ್ ಹಾಗೂ ಪುನೀತ್ ಜೋಡಿ ಈ ಚಿತ್ರಕ್ಕೆ ಒಂದಾಗಿತ್ತು. ಆದರೆ ಚಿತ್ರವು ಬೃಹತ್ ತಾರಾಗಣ, ಬಿಗ್ ಬಜೆಟ್​ನ ಹೊರತಾಗಿಯೂ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಸದ್ಯ ಪುನೀತ್ ಹೊಂಬಾಳೆ ಫಿಲ್ಮ್ಸ್ ಬ್ಯಾನರ್​ನಲ್ಲಿ ಲೂಸಿಯಾ ಪವನ್ ಕುಮಾರ್ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಚಿತ್ರದ ನಂತರ ನೂತನ ಚಿತ್ರ ಸೆಟ್ಟೇರಲಿದೆ ಎನ್ನಲಾಗಿದೆ.

ಇದನ್ನೂ ಓದಿ: 

ಜನಪ್ರಿಯ ಒಟಿಟಿಗೆ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾದ ರಾಮ್​ ಚರಣ್; ಇದಕ್ಕೆ ಅವರು ಪಡೆಯೋ ಹಣ ಇಷ್ಟೊಂದಾ?

SIIMA Awards: ಒಂದೇ ಕಾರ್ಯಕ್ರಮದಲ್ಲಿ ರಕ್ಷಿತ್​ ಶೆಟ್ಟಿ-ರಶ್ಮಿಕಾ; ಪ್ರತಿಷ್ಠಿತ ಅವಾರ್ಡ್​ ಬಾಚಿಕೊಂಡ ಕಿರಿಕ್​ ಜೋಡಿ

(Santhosh Anandram Puneeth Rajkumar and Hombale Films collaborated for a new movie starts from next year)

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ