ಪುನೀತ್, ಸಂತೋಷ್ ಆನಂದರಾಮ್, ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ; ಸೆಟ್ಟೇರೋದು ಯಾವಾಗ?

Puneeth Rajkumar: ಕನ್ನಡದ ಹಿಟ್ ಜೋಡಿಗಳಲ್ಲಿ ಒಂದಾದ ಸಂತೋಷ್ ಆನಂದರಾಮ್ ಹಾಗೂ ಪುನೀತ್ ರಾಜಕುಮಾರ್ ಅವರ ನೂತನ ಚಿತ್ರದ ಕುರಿತು ಮಾಹಿತಿ ಲಭ್ಯವಾಗಿದೆ. ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಪುನೀತ್, ಸಂತೋಷ್ ಆನಂದರಾಮ್, ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ; ಸೆಟ್ಟೇರೋದು ಯಾವಾಗ?
ಸಂತೋಷ್ ಆನಂದ್​ರಾಮ್ ಮತ್ತು ಪುನೀತ್ ರಾಜಕುಮಾರ್
Follow us
| Updated By: shivaprasad.hs

Updated on: Sep 19, 2021 | 11:15 AM

ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಹೊಸ ಚಿತ್ರಗಳು ಇತ್ತೀಚೆಗೆ ಸಖತ್ ಸದ್ದು ಮಾಡುತ್ತಿವೆ. ಕಾರಣ, ದೊಡ್ಡ ತಾರಾ ಬಳಗ, ಅದ್ದೂರಿ ಬಜೆಟ್ ಹಾಗೂ ಸೂಪರ್ ಹಿಟ್ ಕಾಂಬಿನೇಷನ್ ನ ನಿರ್ದೇಶಕ- ನಟ ಜೋಡಿ ಒಂದಾಗಿ ಹೊಸ ಸಿನಿಮಾಗಳನ್ನು ಮಾಡುತ್ತಿರುವುದು. ಇದಕ್ಕೆ‌ ಉದಾಹರಣೆಯೆಂಬಂತೆ ಇತ್ತೀಚಿನ ಹಲವು ಚಿತ್ರಗಳನ್ನು ಗುರುತಿಸಬಹುದು. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯೊಂದೇ ತನ್ನ ಬ್ಯಾನರ್​​ನಲ್ಲಿ ಬಿಗ್​ ಬಜೆಟ್​ನ ಹಲವು ಚಿತ್ರಗಳನ್ನು ಘೋಷಿಸಿದೆ. ಇದೀಗ ಆ ಸಾಲಿಗೆ ಹೊಸ ಚಿತ್ರವೊಂದು ಸೇರ್ಪಡೆಯಾಗಿದೆ. ಹೌದು. ಚಂದನವನದ ಹಿಟ್ ಕಾಂಬಿನೇಷನ್​ನಲ್ಲಿ ಒಂದಾದ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜಕುಮಾರ್ ಜೋಡಿ ಮತ್ತೆ ಒಂದಾಗುವುದು ಪಕ್ಕಾ ಆಗಿದೆ. ಈ ಕುರಿತು ಸಂತೋಷ್, ಮಾಹಿತಿ ನೀಡಿದ್ದಾರೆ.

ಟ್ವೀಟ್ ಮುಖಾಂತರ ಮಾಹಿತಿ ನೀಡಿರುವ ನಿರ್ದೇಶಕ ಸಂತೋಷ್ ಆನಂದರಾಮ್, ಹೊಂಬಾಳೆ ಫಿಲ್ಮ್ಸ್, ಪುನೀತ್ ರಾಜಕುಮಾರ್ ಹಾಗೂ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಅಪ್ಡೇಟ್ ನೀಡಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್, ಪುನೀತ್ ಹಾಗೂ ನನ್ನ ಕಾಂಬಿನೇಷನ್​ನ ಹೊಸ ಚಿತ್ರದ ಬಗ್ಗೆ ಎಲ್ಲರೂ ಕೇಳುತ್ತಿದ್ದಿರಿ. ಅವರಿಗೆಲ್ಲರಿಗೂ ಈ ಮಾಹಿತಿ. ನಮ್ಮ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ ಮುಂದಿನ ವರ್ಷ ಸೆಟ್ಟೇರಲಿದೆ. ನಿಮ್ಮೆಲ್ಲರ ಅಭಿಮಾನ, ಹಾರೈಕೆಗೆ ಧನ್ಯವಾದಗಳು’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪುನೀತ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯನ್ನು ನೀಡಿದ್ದು, ಹೊಸ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಬ್ಯಾನರ್​ನಲ್ಲಿ ಪುನೀತ್ ರಾಜಕುಮಾರ್ ಕಡೆಯದಾಗಿ ‘ಯುವರತ್ನ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ರಾಜಕುಮಾರ’ ಚಿತ್ರದ ನಂತರ ಸಂತೋಷ್ ಆನಂದರಾಮ್ ಹಾಗೂ ಪುನೀತ್ ಜೋಡಿ ಈ ಚಿತ್ರಕ್ಕೆ ಒಂದಾಗಿತ್ತು. ಆದರೆ ಚಿತ್ರವು ಬೃಹತ್ ತಾರಾಗಣ, ಬಿಗ್ ಬಜೆಟ್​ನ ಹೊರತಾಗಿಯೂ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಸದ್ಯ ಪುನೀತ್ ಹೊಂಬಾಳೆ ಫಿಲ್ಮ್ಸ್ ಬ್ಯಾನರ್​ನಲ್ಲಿ ಲೂಸಿಯಾ ಪವನ್ ಕುಮಾರ್ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಚಿತ್ರದ ನಂತರ ನೂತನ ಚಿತ್ರ ಸೆಟ್ಟೇರಲಿದೆ ಎನ್ನಲಾಗಿದೆ.

ಇದನ್ನೂ ಓದಿ: 

ಜನಪ್ರಿಯ ಒಟಿಟಿಗೆ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾದ ರಾಮ್​ ಚರಣ್; ಇದಕ್ಕೆ ಅವರು ಪಡೆಯೋ ಹಣ ಇಷ್ಟೊಂದಾ?

SIIMA Awards: ಒಂದೇ ಕಾರ್ಯಕ್ರಮದಲ್ಲಿ ರಕ್ಷಿತ್​ ಶೆಟ್ಟಿ-ರಶ್ಮಿಕಾ; ಪ್ರತಿಷ್ಠಿತ ಅವಾರ್ಡ್​ ಬಾಚಿಕೊಂಡ ಕಿರಿಕ್​ ಜೋಡಿ

(Santhosh Anandram Puneeth Rajkumar and Hombale Films collaborated for a new movie starts from next year)

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ