Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತಿ ಟೀಚರ್ ಏಳನೇ ತರಗತಿ’ ಸಿನಿಮಾದಲ್ಲಿ ಸಚಿವ ಸಂತೋಷ್ ಲಾಡ್ ನಟನೆ

‘ಭಾರತಿ ಟೀಚರ್ ಏಳನೇ ತರಗತಿ’ ಸಿನಿಮಾದ ಟೈಟಲ್ ಗಮನ ಸೆಳೆಯುತ್ತಿದೆ. ರಾಘವೇಂದ್ರ ರೆಡ್ಡಿ ನಿರ್ಮಾಣದ ಈ ಚಿತ್ರಕ್ಕೆ ಎಂ.ಎಲ್.ಪ್ರಸನ್ನ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಕೊನೇ ಹಂತದ ಶೂಟಿಂಗ್ ಬಾಕಿ ಇದೆ. ಸಚಿವ ಸಂತೋಷ್ ಲಾಡ್ ಅವರು ಈ ಸಿನಿಮಾದ ಒಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಭಾರತಿ ಟೀಚರ್ ಏಳನೇ ತರಗತಿ’ ಸಿನಿಮಾದಲ್ಲಿ ಸಚಿವ ಸಂತೋಷ್ ಲಾಡ್ ನಟನೆ
Santosh Lad
Follow us
ಮದನ್​ ಕುಮಾರ್​
|

Updated on: Mar 26, 2025 | 7:44 PM

ಈ ಮೊದಲು ‘ಸ.ಹಿ.ಪ್ರ. ಶಾಲೆ’ ಸಿನಿಮಾ ಸದ್ದು ಮಾಡಿತ್ತು. ಆ ಚಿತ್ರದ ಶೀರ್ಷಿಕೆ ಡಿಫರೆಂಟ್ ಆಗಿತ್ತು. ಈಗ ಅದೇ ರೀತಿ ಇನ್ನೊಂದು ಸಿನಿಮಾ ಟೈಟಲ್ ಗಮನ ಸೆಳೆಯುತ್ತಿದೆ. ‘ಭಾರತಿ ಟೀಚರ್ ಏಳನೇ ತರಗತಿ’ (Bharathi Teacher) ಎಂಬುದು ಹೊಸ ಸಿನಿಮಾದ ಶೀರ್ಷಿಕೆ. ಈ ಟೈಟಲ್ ಕುತೂಹಲ ಹುಟ್ಟಿಸುವ ರೀತಿಯಲ್ಲಿದೆ. ಇತ್ತೀಚೆಗೆ ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಯಿತು. ಸಚಿವ ಸಂತೋಷ್ ಲಾಡ್ ಅವರು ‘ಭಾರತಿ ಟೀಚರ್ ಏಳನೇ ತರಗತಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬುದು ವಿಶೇಷ. ಸಿನಿಮಾದ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ. ಟೀಸರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆ ಸಂತೋಷ್ ಲಾಡ್ (Santosh Lad) ಕೂಡ ಭಾಗಿಯಾಗಿದ್ದರು.

ಸಿರಗುಪ್ಪ ಮೂಲದ ಉದ್ಯಮಿ ರಾಘವೇಂದ್ರ ರೆಡ್ಡಿ ಅವರು ‘ಭಾರತಿ ಟೀಚರ್ ಏಳನೇ ತರಗತಿ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ‘ಪೂಜ್ಯಾಯ ಫಿಲ್ಮ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಎಂ.ಎಲ್.ಪ್ರಸನ್ನ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ, ಸಂಗೀತದ ಜವಾಬ್ದಾರಿ ಕೂಡ ಅವರೇ ನಿಭಾಯಿಸುತ್ತಿದ್ದಾರೆ. ವೆಂಕಟ್‌ ಗೌಡ ಅವರು ಕ್ರಿಯೇಟೀವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಸಿಹಿಕಹಿ ಚಂದ್ರು, ಕುಮಾರಿ ಯಶಿಕಾ, ಗೋವಿಂದೇಗೌಡ, ಅಶ್ವಿನ್‌ ಹಾಸನ್, ದಿವ್ಯಾ ಅಂಚನ್, ಬೆನಕಾ ನಂಜಪ್ಪ, ಸೌಜನ್ಯ ಸುನಿಲ್, ರೋಹಿತ್‌ ರಾಘವೇಂದ್ರ, ಎಂ.ಜೆ. ರಂಗಸ್ವಾಮಿ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ‘ಭಾರತಿ ಟೀಚರ್ ಏಳನೇ ತರಗತಿ’ ಸಿನಿಮಾದಲ್ಲಿ ಜಿಲ್ಲಾಧಿಕಾರಿ ಪಾತ್ರ ನೀಡಲಾಗಿದೆ. ‘ಈ ಸಿನಿಮಾದ ಸಾರಾಂಶ ನನಗೆ ಇಷ್ಟವಾಯಿತು. ನನಗೆ ಡಿಸಿ ಪಾತ್ರ ಮಾಡಬೇಕೆಂದು ಕೇಳಿಕೊಂಡಿದ್ದಾರೆ. ನಿರ್ದೇಶಕರೊಂದಿಗೆ ಕೆಲಸ ಮಾಡುವುದು ಇಷ್ಟವಾಗಿದೆ. ಪಾತ್ರಕ್ಕೆ ನಾನು ನ್ಯಾಯ ಒದಗಿಸುತ್ತೇನೆ ಎಂಬ ನಂಬಿಕೆ ಜೊತೆ ಭಯ ಕೂಡ ಇದೆ’ ಎಂದು ಅವರು ಹೇಳಿದ್ದಾರೆ.

‘ಇದು ಒಂದು ಉತ್ತಮ ಸಂದೇಶ ಇರುವ ಸಿನಿಮಾ ಆದ್ದರಿಂದ ನನ್ನ ಅದೃಷ್ಟ ಎಂದು ಭಾವಿಸಿದ್ದೇನೆ. ಸಿಹಿಕಹಿ ಚಂದ್ರು ನಟಿಸಿದ ಹಳೆಯ ಸಿನಿಮಾಗಳನ್ನು ನೋಡಿ ಬೆಳೆದವನು ನಾನು. ಈಗಿನ ಕಾಲದಲ್ಲಿ ಸಿನಿಮಾಗಳು ಗೆಲ್ಲುವುದು ಬಹಳ ಕಷ್ಟಕರವಾಗಿದೆ. ಕನ್ನಡ ಸಿನಿಮಾಗಳು ಹೆಚ್ಚು ಬೆಳೆಯಲಿ’ ಎಂದು ಸಂತೋಷ್ ಲಾಡ್ ಅವರು ವಿಶ್ ಮಾಡಿದರು. ಎಂ.ಬಿ. ಹಳ್ಳಿಕಟ್ಟಿ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಸುಜಿತ್‌ ನಾಯಕ್ ಅವರು ಸಂಕಲನ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ‘ದಿ ಡೆವಿಲ್’ ಶೂಟಿಂಗ್; ದರ್ಶನ್ ಅಭಿಮಾನಿಗಳಿಗೆ ಅಪ್​ಡೇಟ್ ನೀಡಿದ ತಂಡ

ನಿರ್ದೇಶಕ ಪ್ರಸನ್ನ ಅವರು ಕೂಡ ಈ ವೇಳೆ ಮಾತನಾಡಿದರು. ‘ಸಂತೋಷ್ ಲಾಡ್ ಅವರು ನಮ್ಮ ಸಿನಿಮಾದಲ್ಲಿ ನಟಿಸಲು ಒಪ್ಪಿದ್ದು ಹೆಗ್ಗಳಿಕೆ. ಇದಕ್ಕೆ ಅನುವು ಮಾಡಿಕೊಟ್ಟಿದ್ದು ವಿ. ನಾಗೇಂದ್ರ ಪಸಾದ್. ಅದಕ್ಕಾಗಿ ಅವರಿಗೂ ಧನ್ಯವಾದ’ ಎಂದು ಅವರು ಹೇಳಿದರು. ಭಾರತಿ ಎಂಬ 7ನೇ ತರಗತಿ ವಿದ್ಯಾರ್ಥಿನಿಗೆ ತನ್ನ ಊರಿನ ಪ್ರತಿಯೊಬ್ಬರು ಕನ್ನಡ ಓದಬೇಕು ಮತ್ತು ಬರೆಯಬೇಕು ಎನ್ನುವ ಕನಸು ಇರುತ್ತದೆ. ಆಕೆಯ ಕಥೆ ‘ಭಾರತಿ ಟೀಚರ್ ಏಳನೇ ತರಗತಿ’ ಸಿನಿಮಾದಲ್ಲಿ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ