AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ನಟಿಸಿದ ಯುವ ನಟಿಗೆ ಬಾಡಿ ಶೇಮಿಂಗ್​; ಖಿನ್ನತೆಗೆ ಒಳಗಾಗಿದ್ದ ಹೀರೋಯಿನ್​ ಕೊಟ್ಟ ಉತ್ತರ ಏನು?

ಸನುಶಾ ದೇಹದ ತೂಕ ಮಿತಿಮೀರಿ ಹೆಚ್ಚಿದ್ದರಿಂದ ಟೀಕೆಗೆ ಒಳಗಾಗಿದ್ದರು. ಈಗ ಅವರು, ಕಷ್ಟಪಟ್ಟು ತೂಕ ಇಳಿಸಿಕೊಂಡಿದ್ದಾರೆ. ಆದಾಗ್ಯೂ ಅನೇಕರು ಸನುಶಾ ಅವರ ದೇಹದ ಬಗ್ಗೆ ಕಮೆಂಟ್​ ಮಾಡಿದ್ದಾರೆ.

ಕನ್ನಡದಲ್ಲಿ ನಟಿಸಿದ ಯುವ ನಟಿಗೆ ಬಾಡಿ ಶೇಮಿಂಗ್​; ಖಿನ್ನತೆಗೆ ಒಳಗಾಗಿದ್ದ ಹೀರೋಯಿನ್​ ಕೊಟ್ಟ ಉತ್ತರ ಏನು?
ಸನುಶಾ ಸಂತೋಷ್​
ರಾಜೇಶ್ ದುಗ್ಗುಮನೆ
|

Updated on: Jun 11, 2021 | 5:13 PM

Share

ಚಿತ್ರರಂಗದ ಸಾಕಷ್ಟು ನಟಿಯರು ಬಾಡಿ ಶೇಮಿಂಗ್​ ಅನುಭವಿಸಿದ್ದಾರೆ. ಕೆಲವರು ಈ ಬಗ್ಗೆ ಕಠಿಣವಾಗಿ ಉತ್ತರಿಸಿದರೆ, ಇನ್ನೂ ಕೆಲವರು ಆ ಗೋಜಿಗೆ ಹೋಗದೆ ಸುಮ್ಮನಿದ್ದಾರೆ. ಕನ್ನಡದ ‘ಸಂತೆಯಲ್ಲಿ ನಿಂತ ಕಬೀರ’ ಸಿನಿಮಾದಲ್ಲಿ ನಟಿಸಿದ್ದ ಸನುಶಾ ಈಗ ಅಭಿಮಾನಿಗಳಿಂದ ಬಾಡಿ ಶೇಮಿಂಗ್ ಅನುಭವಿಸಿದ್ದಾರೆ. ಇದಕ್ಕೆ ಅವರ ಕಡೆಯಿಂದ ತಕ್ಕ ಉತ್ತರ ಕೂಡ ಬಂದಿದೆ.

ಈ ಮೊದಲು ಸನುಶಾ ಆತ್ಮಹತ್ಯೆ ಚಿಂತನೆ ಬಗ್ಗೆ ಮಾತನಾಡಿದ್ದರು. ‘ಕೆಲ ದಿನಗಳಿಂದ ನಾನು ವೈಯಕ್ತಿಕವಾಗಿ ಹಾಗೂ ವೃತ್ತಿ ಜೀವನದಲ್ಲಿ ಕಷ್ಟ ಎದುರಿಸುತ್ತಿದ್ದೇನೆ. ನನ್ನಲ್ಲಿರುವ ಮೌನ ಮತ್ತು ಕತ್ತಲಿಗೆ ಹೇಗೆ ಉತ್ತರಿಸಬೇಕು ಎಂಬುದು ತಿಳಿಯುತ್ತಿಲ್ಲ. ನಾನು ಖಿನ್ನತೆಯಿಂದ ಬಳಲುತ್ತಿದ್ದೇನೆ. ಯಾರ ಜತೆಯೂ ಮಾತನಾಡಲು ಇಷ್ಟವಿಲ್ಲ. ನನ್ನಲ್ಲಿ ಆತ್ಮಹತ್ಯೆ ಆಲೋಚನೆ ಬರುತ್ತಿದೆ’ ಎಂದು ಅವರು ಹೇಳಿದ್ದರು.

ಸನುಶಾ ದೇಹದ ತೂಕ ಮಿತಿಮೀರಿ ಹೆಚ್ಚಿದ್ದರಿಂದ ಟೀಕೆಗೆ ಒಳಗಾಗಿದ್ದರು. ಈಗ ಅವರು, ಕಷ್ಟಪಟ್ಟು ತೂಕ ಇಳಿಸಿಕೊಂಡಿದ್ದಾರೆ. ಆದಾಗ್ಯೂ ಅನೇಕರು ಸನುಶಾ ಅವರ ದೇಹದ ಬಗ್ಗೆ ಕಮೆಂಟ್​ ಮಾಡಿದ್ದಾರೆ. ಇದನ್ನು ಸಹಿಸದ ನಟಿ ತಕ್ಕ ಉತ್ತರ ನೀಡಿದ್ದಾರೆ. ‘ನನ್ನ ದೇಹದ ತೂಕದ ಬಗ್ಗೆ ಯಾರೂ ಇಷ್ಟೊಂದು ಯೋಚನೆ ಮಾಡಿರಲಿಕ್ಕಿಲ್ಲ. ನೀವು ಅದನ್ನು ಮಾಡಿದ್ದೀರಿ. ತೂಕ ಹೆಚ್ಚಾದರೆ ನೀವು ಚಿಂತಿಸಬೇಡಿ. ನೀವು ಯಾರ ಕಡೆಗಾದರೂ ಬೊಟ್ಟು ಮಾಡುತ್ತಿದ್ದೀರಿ ಎಂದರೆ, ಉಳಿದ ಬೆರಳುಗಳು ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಕಡೆಗೆ ಇರುತ್ತದೆ ಎಂಬುದು ನೆನಪಿರಲಿ. ನಿಮ್ಮ ಬಗ್ಗೆ ಮತ್ತು ನಿಮ್ಮ ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಿ’ ಎಂದಿದ್ದಾರೆ ಸನುಶಾ.

ಸನುಶಾ ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2012ರಲ್ಲಿ ಅವರು ನಟಿಯಾಗಿ ಬಡ್ತಿ ಪಡೆದರು. 2016ರಲ್ಲಿ ತೆರೆಗೆ ಬಂದ ಸಂತೆಯಲ್ಲಿ ನಿಂತ ಕಬೀರ ಚಿತ್ರದಲ್ಲಿ ಸನುಶಾ ನಟಿಸಿದ್ದರು. 2019ರಲ್ಲಿ ರಿಲೀಸ್​ ಆದ ತೆಲುಗಿನ ಹಿಟ್ ಚಿತ್ರ ‘ಜೆರ್ಸಿ’ಯೇ ಕೊನೆ. ಅದಾದ ನಂತರದಲ್ಲಿ ಸನುಶಾ ಯಾವುದೇ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ. ಅವರಿಗೆ ಈವರೆಗೆ ಬ್ರೇಕ್​​ ಕೊಡುವಂತಹ ಯಾವುದೇ ಸಿನಿಮಾ ಸಿಕ್ಕಿಲ್ಲ.

ಇದನ್ನೂ ಓದಿ: Bigg Boss Kannada 8: ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಬಗ್ಗೆ ಬಿಗ್​ ಅಪ್​ಡೇಟ್​; ಇನ್ನೂ ಮುಗಿದಿಲ್ಲ ಶೋ?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ