AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೌರಿ’ ಸಿನಿಮಾದ ಡಬ್ಬಿಂಗ್ ಪೂರ್ಣಗೊಳಿಸಿದ ಸಾನ್ಯಾ ಅಯ್ಯರ್; ರಿಲೀಸ್ ಬಗ್ಗೆ ಕುತೂಹಲ

ಆಗಸ್ಟ್ ತಿಂಗಳಾಂತ್ಯದಲ್ಲಿ ‘ಗೌರಿ’ ಸಿನಿಮಾದ ಮುಹೂರ್ತ ಬೆಂಗಳೂರಿನ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದಿತ್ತು. ಕೆಲವೇ ತಿಂಗಳಲ್ಲಿ ಸಿನಿಮಾ ಕೆಲಸಗಳನ್ನು ತಂಡ ಪೂರ್ಣಗೊಳಿಸಿದೆ.

‘ಗೌರಿ’ ಸಿನಿಮಾದ ಡಬ್ಬಿಂಗ್ ಪೂರ್ಣಗೊಳಿಸಿದ ಸಾನ್ಯಾ ಅಯ್ಯರ್; ರಿಲೀಸ್ ಬಗ್ಗೆ ಕುತೂಹಲ
ಸಾನ್ಯಾ ಅಯ್ಯರ್
ರಾಜೇಶ್ ದುಗ್ಗುಮನೆ
|

Updated on: Jan 11, 2024 | 2:51 PM

Share

ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರ ಮಗ ಸಮರ್ಜಿತ್ ಲಂಕೇಶ್ ‘ಗೌರಿ’ ಸಿನಿಮಾ ಮೂಲಕ ಹೀರೋ ಆಗುತ್ತಿದ್ದಾರೆ. ಅವರಿಗೆ ಜೊತೆಯಾಗಿ ಸಾನ್ಯಾ ಅಯ್ಯರ್ ನಟಿಸಿದ್ದಾರೆ. ಈ ಚಿತ್ರ ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ಸೆಟ್ಟೇರಿತ್ತು. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಡಬ್ಬಿಂಗ್ ಕೆಲಸ ಮಾಡಿ ಮುಗಿಸಿದ್ದಾರೆ ಸಾನ್ಯಾ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್ ಮೂಲಕ ಸಾನ್ಯಾ ಜನಪ್ರಿಯತೆ ಹೆಚ್ಚಿತು.

ಡಬ್ಬಿಂಗ್ ಮಾಡುತ್ತಿರುವ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಾಕಿದ್ದಾರೆ ಸಾನ್ಯಾ. ‘ಗೌರಿ ಚಿತ್ರದ ಡಬ್ಬಿಂಗ್ ಕೆಲಸ ಮುಗಿದಿದೆ. ನನ್ನೊಂದಿಗೆ ಸದಾ ಉಳಿಯುವ ಮತ್ತು ನಿಮ್ಮ ಹೃದಯದಲ್ಲೂ ಒಂದು ಸ್ಥಾನ ಕಂಡುಕೊಳ್ಳುವ ಪಾತ್ರ. ಈ ವರ್ಷ ಗೌರಿ ಹಬ್ಬ ಇನ್ನೂ ಬೇಗನೆ ಬರಲಿದೆ’ ಎಂದು ಅವರು ಬರೆದುಕೊಂಡಿದ್ದಾರೆ. ಡಬ್ಬಿಂಗ್ ಸಂದರ್ಭದಲ್ಲಿ ಸಲಹೆ ನೀಡಿದ ಇಂದ್ರಜಿತ್ ಲಂಕೇಶ್ ಅವರಿಗೆ ಸಾನ್ಯಾ ಧನ್ಯವಾದ ಹೇಳಿದ್ದಾರೆ.

ಆಗಸ್ಟ್ ತಿಂಗಳಾಂತ್ಯದಲ್ಲಿ ‘ಗೌರಿ’ ಸಿನಿಮಾದ ಮುಹೂರ್ತ ಬೆಂಗಳೂರಿನ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದಿತ್ತು. ಮುಹೂರ್ತ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿಜಿ ಭೇಟಿ ನೀಡಿ ಸಮರ್ಜಿತ್‌ಗೆ ಆಶೀರ್ವಾದ ಮಾಡಿದ್ದರು. ಕೆಲವೇ ತಿಂಗಳಲ್ಲಿ ಸಿನಿಮಾ ಕೆಲಸಗಳನ್ನು ತಂಡ ಪೂರ್ಣಗೊಳಿಸಿದೆ.

ಇದನ್ನೂ ಓದಿ: ಇಂದ್ರಜಿತ್​ ಲಂಕೇಶ್​ ಪುತ್ರನ ಮೊದಲ ಸಿನಿಮಾ ಹೆಸರು ‘ಗೌರಿ’; ಮುಹೂರ್ತಕ್ಕೆ ಸಿದ್ದರಾಮಯ್ಯ ಅತಿಥಿ

‘ಗೌರಿ’ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಇದೆ. ಮಗನಿಗಾಗಿ ಹೊಸ ರೀತಿಯ ಕಥೆ ರೆಡಿ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಪತ್ನಿ ಅರ್ಪಿತಾ ಬಂಡವಾಳ ಹೂಡಿದ್ದಾರೆ. ನಿರ್ಮಾಪಕಿಯಾಗಿ ಅವರಿಗೆ ಇದು ಮೊದಲ ಸಿನಿಮಾ. ‘ಕಾಂತಾರ’ ಸಿನಿಮಾ ಖ್ಯಾತಿಯ ನಟಿ ಮಾನಸಿ ಸುಧೀರ್ ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಖ್ಯಾತ ಸಂಗೀತ ಸಂಯೋಜಕ ಜೆಸ್ಸಿ ಗಿಫ್ಟ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ