‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು…’; ಟಿಪ್ಸ್ ಕೊಟ್ಟ ಸಾನ್ಯಾ ಐಯ್ಯರ್

Sanya Iyer: ರೂಪೇಶ್ ಶೆಟ್ಟಿ ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಟಿಪ್ಸ್ ಒಂದನ್ನು ನೀಡಿದ್ದಾರೆ.

‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು...’;  ಟಿಪ್ಸ್ ಕೊಟ್ಟ ಸಾನ್ಯಾ ಐಯ್ಯರ್
ಸಾನ್ಯಾ
Follow us
|

Updated on:Jun 23, 2023 | 8:57 AM

ನಟಿ ಸಾನ್ಯಾ ಐಯ್ಯರ್ (Sanya Iyer) ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಎಲ್ಲರ ಗಮನ ಸೆಳೆದರು. ಮನೆಯಲ್ಲಿ ಇದ್ದಷ್ಟು ದಿನ ಅವರು ಎಲ್ಲರನ್ನೂ ರಂಜಿಸಿದರು. ಕೆಲವು ಕಿರಿಕ್​ಗಳನ್ನು ಮಾಡಿಕೊಂಡರು. ರೂಪೇಶ್ ಶೆಟ್ಟಿ (Roopesh Shetty) ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಂಚಿಕೊಂಡ ರೀಲ್ಸ್ ವೈರಲ್ ಆಗುತ್ತಿದೆ.

ಬಿಗ್ ಬಾಸ್​ನಿಂದ ಸಾಕಷ್ಟು ಜನಪ್ರಿಯತೆ ಸಿಗುತ್ತದೆ. ದೊಡ್ಮನೆಗೆ ಹೋಗಿ ಬಂದವರಿಗೆ ಸಾಕಷ್ಟು ಸಿನಿಮಾ ಆಫರ್​ಗಳು ಬರುತ್ತವೆ. ಸಾನ್ಯಾ ಐಯ್ಯರ್ ಕೂಡ ಕಿರುತೆರೆ ಅಥವಾ ಹಿರಿತೆರೆಯಲ್ಲಿ ಬ್ಯುಸಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ವಿವಿಧ ರೀತಿಯ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪುನೀತ್ ರಾಜ್​ಕುಮಾರ್ ಚಿತ್ರದ ಸಾಂಗ್​ಗೆ ರೀಲ್ಸ್ ಮಾಡಿದ್ದಾರೆ.

‘ಪರಮಾತ್ಮ’ ಸಿನಿಮಾದ ‘ಹೆಸರು ಪೂರ್ತಿ ಹೇಳದೆ..’ ಹಾಡು ಸೂಪರ್ ಹಿಟ್ ಆಗಿತ್ತು. ಪುನೀತ್ ರಾಜ್​ಕುಮಾರ್ ನಟನೆಯ ಸಿನಿಮಾದ ಹಾಡು ಈಗಲೂ ಜನರ ಫೇವರಿಟ್​. ಈ ಹಾಡಿಗೆ ಸಾನ್ಯಾ ರೀಲ್ಸ್ ಮಾಡಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ‘ಐ ಲವ್​ ಯೂ ಹೇಳಬೇಡಿ ಅದರ ಬದಲು ಈ ಹಾಡನ್ನು ಹೇಳಿ’ ಎಂದಿದ್ದಾರೆ ಸಾನ್ಯಾ.

ಇದನ್ನೂ ಓದಿ: Sanya Iyer: ‘ಚಾರ್ಮಿಂಗ್ ಬ್ಯೂಟಿ’; ಸಾನ್ಯಾ ಐಯ್ಯರ್ ಹೊಸ ಫೋಟೋಗೆ ಫಿದಾ ಆದ ಫ್ಯಾನ್ಸ್

ಸಾನ್ಯಾ ಐಯ್ಯರ್ ಇತ್ತೀಚೆಗೆ ಹಲವು ಫೋಟೋಶೂಟ್ ಮಾಡಿಸಿದ್ದಾರೆ. ಎಲ್ಲಾ ಫೋಟೋಗಳಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಬಳಿ ಅವರು ಫೋಟೋಶೂಟ್ ಮಾಡಿಸಿದ್ದರು ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:26 am, Fri, 23 June 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ