AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು…’; ಟಿಪ್ಸ್ ಕೊಟ್ಟ ಸಾನ್ಯಾ ಐಯ್ಯರ್

Sanya Iyer: ರೂಪೇಶ್ ಶೆಟ್ಟಿ ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಟಿಪ್ಸ್ ಒಂದನ್ನು ನೀಡಿದ್ದಾರೆ.

‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು...’;  ಟಿಪ್ಸ್ ಕೊಟ್ಟ ಸಾನ್ಯಾ ಐಯ್ಯರ್
ಸಾನ್ಯಾ
ರಾಜೇಶ್ ದುಗ್ಗುಮನೆ
|

Updated on:Jun 23, 2023 | 8:57 AM

Share

ನಟಿ ಸಾನ್ಯಾ ಐಯ್ಯರ್ (Sanya Iyer) ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಎಲ್ಲರ ಗಮನ ಸೆಳೆದರು. ಮನೆಯಲ್ಲಿ ಇದ್ದಷ್ಟು ದಿನ ಅವರು ಎಲ್ಲರನ್ನೂ ರಂಜಿಸಿದರು. ಕೆಲವು ಕಿರಿಕ್​ಗಳನ್ನು ಮಾಡಿಕೊಂಡರು. ರೂಪೇಶ್ ಶೆಟ್ಟಿ (Roopesh Shetty) ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಂಚಿಕೊಂಡ ರೀಲ್ಸ್ ವೈರಲ್ ಆಗುತ್ತಿದೆ.

ಬಿಗ್ ಬಾಸ್​ನಿಂದ ಸಾಕಷ್ಟು ಜನಪ್ರಿಯತೆ ಸಿಗುತ್ತದೆ. ದೊಡ್ಮನೆಗೆ ಹೋಗಿ ಬಂದವರಿಗೆ ಸಾಕಷ್ಟು ಸಿನಿಮಾ ಆಫರ್​ಗಳು ಬರುತ್ತವೆ. ಸಾನ್ಯಾ ಐಯ್ಯರ್ ಕೂಡ ಕಿರುತೆರೆ ಅಥವಾ ಹಿರಿತೆರೆಯಲ್ಲಿ ಬ್ಯುಸಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ವಿವಿಧ ರೀತಿಯ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪುನೀತ್ ರಾಜ್​ಕುಮಾರ್ ಚಿತ್ರದ ಸಾಂಗ್​ಗೆ ರೀಲ್ಸ್ ಮಾಡಿದ್ದಾರೆ.

‘ಪರಮಾತ್ಮ’ ಸಿನಿಮಾದ ‘ಹೆಸರು ಪೂರ್ತಿ ಹೇಳದೆ..’ ಹಾಡು ಸೂಪರ್ ಹಿಟ್ ಆಗಿತ್ತು. ಪುನೀತ್ ರಾಜ್​ಕುಮಾರ್ ನಟನೆಯ ಸಿನಿಮಾದ ಹಾಡು ಈಗಲೂ ಜನರ ಫೇವರಿಟ್​. ಈ ಹಾಡಿಗೆ ಸಾನ್ಯಾ ರೀಲ್ಸ್ ಮಾಡಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ‘ಐ ಲವ್​ ಯೂ ಹೇಳಬೇಡಿ ಅದರ ಬದಲು ಈ ಹಾಡನ್ನು ಹೇಳಿ’ ಎಂದಿದ್ದಾರೆ ಸಾನ್ಯಾ.

ಇದನ್ನೂ ಓದಿ: Sanya Iyer: ‘ಚಾರ್ಮಿಂಗ್ ಬ್ಯೂಟಿ’; ಸಾನ್ಯಾ ಐಯ್ಯರ್ ಹೊಸ ಫೋಟೋಗೆ ಫಿದಾ ಆದ ಫ್ಯಾನ್ಸ್

ಸಾನ್ಯಾ ಐಯ್ಯರ್ ಇತ್ತೀಚೆಗೆ ಹಲವು ಫೋಟೋಶೂಟ್ ಮಾಡಿಸಿದ್ದಾರೆ. ಎಲ್ಲಾ ಫೋಟೋಗಳಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಬಳಿ ಅವರು ಫೋಟೋಶೂಟ್ ಮಾಡಿಸಿದ್ದರು ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:26 am, Fri, 23 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ