AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ವಿಜಯ ಯಾತ್ರೆಯ ಮ್ಯಾಪ್ ಇಲ್ಲಿದೆ; ನಿಮ್ಮೂರಿಗೆ ಭೇಟಿ ನೀಡೋದು ಯಾವಾಗ ನೋಡಿ

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಭಾವನಾತ್ಮಕವಾಗಿ ಎಲ್ಲರನ್ನೂ ಸೆಳೆದುಕೊಳ್ಳುತ್ತಿದೆ. ಚಿತ್ರಕ್ಕೆ ಎರಡನೇ ವಾರವೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಈಗ ತಂಡ ‘ವಿಜಯ ಯಾತ್ರೆ’ ಆರಂಭಿಸಿದೆ. ರಾಜ್ಯದ ಪ್ರಮುಖ ನಗರಗಳಿಗೆ ಈ ಟೀಂ ಭೇಟಿ ನೀಡುತ್ತಿದೆ. ಯಾವಾಗ ಯಾವ ಊರಿಗೆ ಭೇಟಿ ನೀಡಲಾಗುತ್ತದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ವಿಜಯ ಯಾತ್ರೆಯ ಮ್ಯಾಪ್ ಇಲ್ಲಿದೆ; ನಿಮ್ಮೂರಿಗೆ ಭೇಟಿ ನೀಡೋದು ಯಾವಾಗ ನೋಡಿ
ಹೇಮಂತ್, ರುಕ್ಮಣಿ, ರಕ್ಷಿತ್
ರಾಜೇಶ್ ದುಗ್ಗುಮನೆ
|

Updated on: Sep 06, 2023 | 11:23 AM

Share

ಹೇಮಂತ್ ರಾವ್ ಅವರು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್-ಎ’ (Sapta Sagaradaache Ello – Side A) ಚಿತ್ರದ ಮೂಲಕ ಮೂರನೇ ಯಶಸ್ಸು ಕಂಡಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ರಾವ್ (Hemant Rao) ಕಾಂಬಿನೇಷನ್​ನಲ್ಲಿ ಬಂದ ಎರಡನೇ ಸಿನಿಮಾ ಇದು. ಈ ಚಿತ್ರ ಭಾವನಾತ್ಮಕವಾಗಿ ಎಲ್ಲರನ್ನೂ ಸೆಳೆದುಕೊಳ್ಳುತ್ತಿದೆ. ಚಿತ್ರಕ್ಕೆ ಎರಡನೇ ವಾರವೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಈಗ ತಂಡ ‘ವಿಜಯ ಯಾತ್ರೆ’ ಆರಂಭಿಸಿದೆ. ರಾಜ್ಯದ ಪ್ರಮುಖ ನಗರಗಳಿಗೆ ಈ ಟೀಂ ಭೇಟಿ ನೀಡುತ್ತಿದೆ. ಯಾವಾಗ ಯಾವ ಊರಿಗೆ ಭೇಟಿ ನೀಡಲಾಗುತ್ತದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಆಗಸ್ಟ್ 31ರಂದು ಪೇಯ್ಡ್​ ಪ್ರೀಮಿಯರ್ ಕೂಡ ಆಯೋಜನೆ ಮಾಡಲಾಯಿತು. ಈ ಚಿತ್ರವನ್ನು ನೋಡಿದ ಎಲ್ಲರೂ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದರು. ಹೀಗಾಗಿ, ಮೊದಲ ದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದರು. ಮೊದಲ ವೀಕೆಂಡ್​ನಲ್ಲಿ ಬಹುತೇಕ ಎಲ್ಲಾ ಕಡೆಗಳಲ್ಲಿ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಂಡಿತು. ಹೀಗಾಗಿ ತಂಡದವರು ‘ವಿಜಯ ಯಾತ್ರೆ’ ಮಾಡುತ್ತಿದ್ದಾರೆ.

ಸೆಪ್ಟೆಂಬರ್ 5ರಂದು ತಂಡ ಮೈಸೂರು ಹಾಗೂ ಮಂಡ್ಯಕ್ಕೆ ಭೇಟಿ ನೀಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತಂಡ ಹಾಸನಕ್ಕೆ ಭೇಟಿ ನೀಡಲಿದೆ. ಆ ಬಳಿಕ ಉಡುಪಿಗೆ ತೆರಳಲಿದೆ. ಸೆಪ್ಟೆಂಬರ್ 7ರಂದು ಉಡುಪಿ/ಮಣಿಪಾಲ್​ ಹಾಗೂ ಕುಂದಾಪುರಕ್ಕೆ ತಂಡ ಭೇಟಿ ನೀಡಲಿದೆ. ಸೆಪ್ಟೆಂಬರ್ 8ರಂದು ಮಂಗಳೂರಿಗೆ ತಂಡ ತೆರಳಲಿದೆ. ಸೆಪ್ಟೆಂಬರ್ 9ಕ್ಕೆ ಶಿವಮೊಗ್ಗ, ಸೆಪ್ಟೆಂಬರ್ 10ರಂದು ಹುಬ್ಬಳಿ ಹಾಗೂ ಧಾರವಾಡ, ಸೆಪ್ಟೆಂಬರ್ 11 ಬೆಳಗಾವಿ, ಸೆಪ್ಟೆಂಬರ್ 12 ದಾವಣಗೆರೆ ಹಾಗೂ ತುಮಕೂರಿಗೆ ತಂಡ ಭೇಟಿ ನೀಡಲಿದೆ. ಈ ಮೂಲಕ ಅಲ್ಲಿನ ಅಭಿಮಾನಿಗಳ ಜೊತೆ ತಂಡ ಯಶಸ್ಸನ್ನು ಸಂಭ್ರಮಿಸಲಿದೆ.

View this post on Instagram

A post shared by Hemanth (@hemanthrao11)

ಇದನ್ನೂ ಓದಿ: ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಿಕ್ಕ ‘ಬುಕ್​ ಮೈ ಶೋ’, ‘ಐಎಂಡಿಬಿ’ ರೇಟಿಂಗ್​ ಎಷ್ಟು?

ಶೀಘ್ರದಲ್ಲೇ ತೆಲುಗು ವರ್ಷನ್ ರಿಲೀಸ್

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಪರ ಭಾಷೆಯಲ್ಲಿ ರಿಲೀಸ್ ಆಗಲಿದೆ ಎಂದು ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಮೊದಲು ತೆಲುಗು ವರ್ಷನ್ ರಿಲೀಸ್ ಮಾಡಲು ನಿರ್ದೇಶಕ ಹೇಮಂತ್ ರಾವ್ ಹಾಗೂ ರಕ್ಷಿತ್ ಶೆಟ್ಟಿ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶೀಘ್ರವೇ ಅಧಿಕೃತ ಘೋಷಣೆ ಆಗಲಿದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!