AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ವಿಜಯ ಯಾತ್ರೆಯ ಮ್ಯಾಪ್ ಇಲ್ಲಿದೆ; ನಿಮ್ಮೂರಿಗೆ ಭೇಟಿ ನೀಡೋದು ಯಾವಾಗ ನೋಡಿ

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಭಾವನಾತ್ಮಕವಾಗಿ ಎಲ್ಲರನ್ನೂ ಸೆಳೆದುಕೊಳ್ಳುತ್ತಿದೆ. ಚಿತ್ರಕ್ಕೆ ಎರಡನೇ ವಾರವೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಈಗ ತಂಡ ‘ವಿಜಯ ಯಾತ್ರೆ’ ಆರಂಭಿಸಿದೆ. ರಾಜ್ಯದ ಪ್ರಮುಖ ನಗರಗಳಿಗೆ ಈ ಟೀಂ ಭೇಟಿ ನೀಡುತ್ತಿದೆ. ಯಾವಾಗ ಯಾವ ಊರಿಗೆ ಭೇಟಿ ನೀಡಲಾಗುತ್ತದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ವಿಜಯ ಯಾತ್ರೆಯ ಮ್ಯಾಪ್ ಇಲ್ಲಿದೆ; ನಿಮ್ಮೂರಿಗೆ ಭೇಟಿ ನೀಡೋದು ಯಾವಾಗ ನೋಡಿ
ಹೇಮಂತ್, ರುಕ್ಮಣಿ, ರಕ್ಷಿತ್
ರಾಜೇಶ್ ದುಗ್ಗುಮನೆ
|

Updated on: Sep 06, 2023 | 11:23 AM

Share

ಹೇಮಂತ್ ರಾವ್ ಅವರು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್-ಎ’ (Sapta Sagaradaache Ello – Side A) ಚಿತ್ರದ ಮೂಲಕ ಮೂರನೇ ಯಶಸ್ಸು ಕಂಡಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ರಾವ್ (Hemant Rao) ಕಾಂಬಿನೇಷನ್​ನಲ್ಲಿ ಬಂದ ಎರಡನೇ ಸಿನಿಮಾ ಇದು. ಈ ಚಿತ್ರ ಭಾವನಾತ್ಮಕವಾಗಿ ಎಲ್ಲರನ್ನೂ ಸೆಳೆದುಕೊಳ್ಳುತ್ತಿದೆ. ಚಿತ್ರಕ್ಕೆ ಎರಡನೇ ವಾರವೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಈಗ ತಂಡ ‘ವಿಜಯ ಯಾತ್ರೆ’ ಆರಂಭಿಸಿದೆ. ರಾಜ್ಯದ ಪ್ರಮುಖ ನಗರಗಳಿಗೆ ಈ ಟೀಂ ಭೇಟಿ ನೀಡುತ್ತಿದೆ. ಯಾವಾಗ ಯಾವ ಊರಿಗೆ ಭೇಟಿ ನೀಡಲಾಗುತ್ತದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಆಗಸ್ಟ್ 31ರಂದು ಪೇಯ್ಡ್​ ಪ್ರೀಮಿಯರ್ ಕೂಡ ಆಯೋಜನೆ ಮಾಡಲಾಯಿತು. ಈ ಚಿತ್ರವನ್ನು ನೋಡಿದ ಎಲ್ಲರೂ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದರು. ಹೀಗಾಗಿ, ಮೊದಲ ದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದರು. ಮೊದಲ ವೀಕೆಂಡ್​ನಲ್ಲಿ ಬಹುತೇಕ ಎಲ್ಲಾ ಕಡೆಗಳಲ್ಲಿ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಂಡಿತು. ಹೀಗಾಗಿ ತಂಡದವರು ‘ವಿಜಯ ಯಾತ್ರೆ’ ಮಾಡುತ್ತಿದ್ದಾರೆ.

ಸೆಪ್ಟೆಂಬರ್ 5ರಂದು ತಂಡ ಮೈಸೂರು ಹಾಗೂ ಮಂಡ್ಯಕ್ಕೆ ಭೇಟಿ ನೀಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತಂಡ ಹಾಸನಕ್ಕೆ ಭೇಟಿ ನೀಡಲಿದೆ. ಆ ಬಳಿಕ ಉಡುಪಿಗೆ ತೆರಳಲಿದೆ. ಸೆಪ್ಟೆಂಬರ್ 7ರಂದು ಉಡುಪಿ/ಮಣಿಪಾಲ್​ ಹಾಗೂ ಕುಂದಾಪುರಕ್ಕೆ ತಂಡ ಭೇಟಿ ನೀಡಲಿದೆ. ಸೆಪ್ಟೆಂಬರ್ 8ರಂದು ಮಂಗಳೂರಿಗೆ ತಂಡ ತೆರಳಲಿದೆ. ಸೆಪ್ಟೆಂಬರ್ 9ಕ್ಕೆ ಶಿವಮೊಗ್ಗ, ಸೆಪ್ಟೆಂಬರ್ 10ರಂದು ಹುಬ್ಬಳಿ ಹಾಗೂ ಧಾರವಾಡ, ಸೆಪ್ಟೆಂಬರ್ 11 ಬೆಳಗಾವಿ, ಸೆಪ್ಟೆಂಬರ್ 12 ದಾವಣಗೆರೆ ಹಾಗೂ ತುಮಕೂರಿಗೆ ತಂಡ ಭೇಟಿ ನೀಡಲಿದೆ. ಈ ಮೂಲಕ ಅಲ್ಲಿನ ಅಭಿಮಾನಿಗಳ ಜೊತೆ ತಂಡ ಯಶಸ್ಸನ್ನು ಸಂಭ್ರಮಿಸಲಿದೆ.

View this post on Instagram

A post shared by Hemanth (@hemanthrao11)

ಇದನ್ನೂ ಓದಿ: ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಿಕ್ಕ ‘ಬುಕ್​ ಮೈ ಶೋ’, ‘ಐಎಂಡಿಬಿ’ ರೇಟಿಂಗ್​ ಎಷ್ಟು?

ಶೀಘ್ರದಲ್ಲೇ ತೆಲುಗು ವರ್ಷನ್ ರಿಲೀಸ್

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಪರ ಭಾಷೆಯಲ್ಲಿ ರಿಲೀಸ್ ಆಗಲಿದೆ ಎಂದು ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಮೊದಲು ತೆಲುಗು ವರ್ಷನ್ ರಿಲೀಸ್ ಮಾಡಲು ನಿರ್ದೇಶಕ ಹೇಮಂತ್ ರಾವ್ ಹಾಗೂ ರಕ್ಷಿತ್ ಶೆಟ್ಟಿ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶೀಘ್ರವೇ ಅಧಿಕೃತ ಘೋಷಣೆ ಆಗಲಿದೆ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!