AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಸ್ಪರ್ಧೆ ಅಲ್ಲ, ಸಹಯೋಗ’; ‘ಸಪ್ತಸಾಗರದಾಚೆ ಎಲ್ಲೋ’-‘ಟೋಬಿ’ ಕ್ಲ್ಯಾಶ್ ಬಗ್ಗೆ ಉತ್ತರಿಸಿದ ರಾಜ್​ ಬಿ. ಶೆಟ್ಟಿ

ರಾಜ್ ಬಿ. ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ಕರಾವಳಿಯವರು. ಇಬ್ಬರ ನಡುವೆ ಒಳ್ಳೆಯ ಗೆಳೆತನ ಇದೆ. ಹೀಗಿದ್ದರೂ ‘ಟೋಬಿ’ ಹಾಗೂ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಒಂದು ವಾರದ ಗ್ಯಾಪ್​ನಲ್ಲಿ ರಿಲೀಸ್ ಆಗುತ್ತಿದೆ.

‘ಇದು ಸ್ಪರ್ಧೆ ಅಲ್ಲ, ಸಹಯೋಗ’; ‘ಸಪ್ತಸಾಗರದಾಚೆ ಎಲ್ಲೋ’-‘ಟೋಬಿ’ ಕ್ಲ್ಯಾಶ್ ಬಗ್ಗೆ ಉತ್ತರಿಸಿದ ರಾಜ್​ ಬಿ. ಶೆಟ್ಟಿ
ಟೋಬಿ-ರಕ್ಷಿತ್
ರಾಜೇಶ್ ದುಗ್ಗುಮನೆ
|

Updated on: Jul 03, 2023 | 8:18 AM

Share

‘ಟೋಬಿ’ ಸಿನಿಮಾ (Toby Movie) ಆಗಸ್ಟ್ 25ಕ್ಕೆ ರಿಲೀಸ್ ಆಗುತ್ತಿದೆ. ರಾಜ್​ ಬಿ. ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಸಿನಿಮಾದ ಲುಕ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಟಗರು ಕೂಡ ಹೈಲೈಟ್ ಆಗಿದೆ. ಈ ಸಿನಿಮಾ ರಿಲೀಸ್ ಆದ ಒಂದು ವಾರದ ಬಳಿಕ (ಸೆಪ್ಟೆಂಬರ್ 1) ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರ ತೆರೆಗೆ ಬರುತ್ತಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಎರಡೂ ಸಿನಿಮಾಗಳು ಕ್ಲ್ಯಾಶ್ ಆಗುತ್ತಿವೆ. ಈ ಬಗ್ಗೆ ರಾಜ್ ಬಿ. ಶೆಟ್ಟಿ ಮಾತನಾಡಿದ್ದಾರೆ. ಇದು ಕ್ಲ್ಯಾಶ್ ಅಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ ಬಿ. ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ಕರಾವಳಿಯವರು. ಇಬ್ಬರ ನಡುವೆ ಒಳ್ಳೆಯ ಗೆಳೆತನ ಇದೆ. ‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಜೊತೆ ರಾಜ್​ ಬಿ. ಶೆಟ್ಟಿ ನಟಿಸಿದ್ದರು. ಹೀಗಿದ್ದರೂ ‘ಟೋಬಿ’ ಹಾಗೂ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಒಂದು ವಾರದ ಗ್ಯಾಪ್​ನಲ್ಲಿ ರಿಲೀಸ್ ಆಗುತ್ತಿದೆ. ಈ ವಿಚಾರದ ಕುರಿತು ರಾಜ್​ ಬಿ. ಶೆಟ್ಟಿ ಮಾತನಾಡಿದ್ದಾರೆ.

‘ಒಟ್ಟಿಗೆ ಸಪೋರ್ಟ್​ ಮಾಡೋಣ. ಹೊಡೆದಾಡಿಕೊಂಡು ಯಾಕೆ ಸಿನಿಮಾ ಮಾಡಬೇಕು? ಒಟ್ಟಿಗೆ ಇದ್ದು ಯಾಕೆ ಸಿನಿಮಾ ಮಾಡಬಾರದು? ನಾನು ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಫ್ಯಾನ್​. ಟೋಬಿ ಹಾಗೂ ಸಪ್ತ ಎರಡೂ ಬೇರೆ ಬೇರೆ ರೀತಿಯ ಸಿನಿಮಾ. ಇದು ಕಾಂಪಿಟೇಷನ್ ಅಲ್ಲ ಸಹಯೋಗ. ಕನ್ನಡ ಸಿನಿಮಾ ನೋಡಲು ಜನರು ಮತ್ತೆ ಥಿಯೇಟರ್​ಗೆ ಬರಬೇಕು ಎನ್ನುವ ಪ್ರಯತ್ನ’ ಎಂಬುದು ರಾಜ್ ಬಿ. ಶೆಟ್ಟಿ ಅಭಿಪ್ರಾಯ.

ಇದನ್ನೂ ಓದಿ: ರಕ್ಷಿತ್-ರಿಷಬ್-ರಾಜ್ ಮೂವರು ಒಂದೇ ಸಿನಿಮಾದಲ್ಲಿ ನಟಿಸುತ್ತಾರಾ? ರಾಜ್ ಬಿ ಶೆಟ್ಟರು ಕೊಟ್ಟರು ಉತ್ತರ

‘ನಾನು ಆಗಸ್ಟ್ 25ಕ್ಕೆ ಬರಬೇಕು ಎಂಬುದನ್ನು ಮೊದಲೇ ನಿರ್ಧರಿಸಿದ್ದೆ. ಅವರ ಲೆಕ್ಕಾಚಾರ ಬೇರೆ ರೀತಿ ಇತ್ತು. ನಾವು ಯಾವಾಗ ಸಿನಿಮಾ ರಿಲೀಸ್ ಮಾಡ್ತೀವಿ ಅನ್ನೋದಕ್ಕೆ ಸಾವಿರಾರು ಕಾರಣ ಇರುತ್ತದೆ. ಎದುರು ಟೀಂನವರು ಅದನ್ನು ಅರ್ಥ ಮಾಡಿಕೊಳ್ಳಲುಸ ಸಾಧ್ಯವೇ ಇಲ್ಲ. ಅವರು ತೆಗೆದುಕೊಂಡ ನಿರ್ಧಾರ ನಮ್ಮ ಘಾಸಿ ಮಾಡಲು ಅಲ್ಲವೇ ಅಲ್ಲ’ ಎಂದಿದ್ದಾರೆ ರಾಜ್ ಬಿ. ಶೆಟ್ಟಿ.

‘ನನ್ನ ಸಿನಿಮಾ ಪೋಸ್ಟರ್​ನ ರಕ್ಷಿತ್ ಶೆಟ್ಟಿ ಶೇರ್ ಮಾಡಿಕೊಳ್ತಾರೆ. ಸಪ್ತಸಾಗರದಾಚೆ ಎಲ್ಲೋ ಚಿತ್ರದ ನಿರ್ದೇಕ ಹೇಮಂತ್ ರಾವ್ ನಮ್ಮನ್ನು ಬೆಂಬಲಿಸುತ್ತಾರೆ. ಹೀಗೇಕೆ? ಇದು ಸಪೋರ್ಟಿಂಗ್ ಸಿಸ್ಟಮ್’ ಎಂದಿದ್ದಾರೆ ರಾಜ್ ಬಿ. ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ