ಪ್ರೇಮಿಗಳ ದಿನಾಚರಣೆ ಮರು ಬಿಡುಗಡೆ ಆಗುತ್ತಿದೆ ಸೈಡ್-ಎ, ಸೈಡ್-ಬಿ

Sapta Sagaradaache Ello: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುವ ಅವಕಾಶ ಮಿಸ್ ಮಾಡಿಕೊಂಡಿದ್ದಿರಾ? ಈಗ ಮತ್ತೊಮ್ಮ ಅವಕಾಶ ಅರಸಿ ಬಂದಿದೆ.

ಪ್ರೇಮಿಗಳ ದಿನಾಚರಣೆ ಮರು ಬಿಡುಗಡೆ ಆಗುತ್ತಿದೆ ಸೈಡ್-ಎ, ಸೈಡ್-ಬಿ
Follow us
|

Updated on: Feb 13, 2024 | 8:10 PM

ಇನ್ನೇನಿದ್ದರೂ ಮಾಸ್, ಕಮರ್ಶಿಯಲ್, ಥ್ರಿಲ್ಲರ್ ಜಾನರ್​ನ ಸಿನಿಮಾಗಳದ್ದಷ್ಟೆ ಜಮಾನ, ಪ್ರೇಮಕಥೆಗಳ ಜಮಾನ ಮುಗಿಯಿತು ಎಂದು ಸಿನಿಮಾ ಪ್ರೇಮಿಗಳು ಗೊಣಗುತ್ತಿರುವಾಗಲೆ ಬಿಡುಗಡೆ ಆದ ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಮಾಸ್ ಪ್ರೇಕ್ಷನ ಕಣ್ಣಲ್ಲೂ ನೀರು ತರಿಸಿತು. ಸಿನಿಮಾದ ಎರಡೂ ಭಾಗಗಳು ಪ್ರೇಕ್ಷರ ಜೊತೆಗೆ ವಿಮರ್ಶಕರಿಗೂ ಬಹಳ ಇಷ್ಟವಾಗಿದೆ. ಸೈಡ್ ಎ ಹಾಗೂ ಸೈಡ್ ಬಿ ಎರಡೂ ಸಿನಿಮಾಗಳು ಈಗಾಗಲೇ ಒಟಿಟಿಯಲ್ಲಿ ಬಿಡುಗಡೆ ಆಗಿವೆ. ಹಾಗಿದ್ದರೂ ಈ ಎರಡೂ ಸಿನಿಮಾಗಳು ಮತ್ತೆ ಚಿತ್ರಮಂದಿರಕ್ಕೆ ಬರುತ್ತಿವೆ.

ಎರಡೂ ಸಿನಿಮಾಗಳು ಒಟಿಟಿಗೆ ಬಂದ ಬಳಿಕವಂತೂ ಹೆಚ್ಚು ಜನರಿಗೆ ತಲುಪಿದ್ದು ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುವ ಅನುಭವವನ್ನು ಮಿಸ್ ಮಾಡಿಕೊಂಡಿದ್ದಾಗಿ ಹೇಳಿಕೊಂಡಿದ್ದರು. ಇದೀಗ ಆ ಅವಕಾಶ ಈಗ ಮತ್ತೆ ಬಂದಿದೆ. ಪ್ರೇಮಿಗಳ ದಿನಾಚರಣೆ ಪ್ರಯುಕ್ತ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ವಿಶೇಷವೆಂದರೆ ಸಿನಿಮಾದ ಸೈಡ್ ಎ ಹಾಗೂ ಸೈಡ್ ಬಿ ಒಟ್ಟಿಗೆ ಬಿಡುಗಡೆ ಆಗುತ್ತಿದ್ದು, ಒಂದರ ಹಿಂದೆ ಒಂದು ಸಿನಿಮಾ ವೀಕ್ಷಿಸಬಹುದಾಗಿದೆ.

ಪ್ರೇಮಿಗಳ ದಿನಾಚರಣೆ ಪ್ರಯುಕ್ತವಾಗಿ ಪಿವಿಆರ್-ಐನಾಕ್ಸ್ ಮಲ್ಟಿಪ್ಲೆಕ್ಸ್​ಗಳಲ್ಲಿ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಆಸಕ್ತರು ಸಿನಿಮಾವನ್ನು ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ನೋಡಿ ಆನಂದಿಸಬಹುದಾಗಿದೆ. ತಮ್ಮ ಸಿನಿಮಾ ಮರು ಬಿಡುಗಡೆ ಆಗುತ್ತಿರುವ ಖುಷಿಯ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ನಿಗದಿತ ಪಿವಿಆರ್-ಐನಾಕ್ಸ್​ಗಳಲ್ಲಿ ಮಾತ್ರವೇ ಈ ಸಿನಿಮಾ ಮರು ಬಿಡುಗಡೆ ಆಗಲಿದೆ.

ಇದನ್ನೂ ಓದಿ:ದೈವ ಕೋಲದಲ್ಲಿ ಭಾಗವಹಿಸಿ ಆಶೀರ್ವಾದ ಪಡೆದ ರಕ್ಷಿತ್ ಶೆಟ್ಟಿ

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್ ಮಾಡಿಕೊಂಡಿದ್ದೀರ? ಇಗೋ ನಿಮಗೆ ಮತ್ತೊಂದು ಅವಕಾಶ, ಮನು, ಪ್ರಿಯಾ, ಸುರಭಿ ಹಾಗೂ ಸೋಮನ ಕತೆಯನ್ನು ಮತ್ತೊಮ್ಮೆ ಚಿತ್ರಮಂದಿರದಲ್ಲಿ ಕಣ್ತುಂಬಿಕೊಳ್ಳುವ ಅವಕಾಶ ಒದಗಿ ಬಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ ನಟಿ ರುಕ್ಮಿಣಿ ವಸಂತ್.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ಹೇಮಂತ್ ರಾವ್ ನಿರ್ದೇಶನ ಮಾಡಿದ್ದು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಗೋಪಾಲ್ ರಾವ್ ದೇಶಪಾಂಡೆ, ಅಚ್ಯುತ್ ಕುಮಾರ್ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಧನಾತ್ಮಕ ಪ್ರತಿಕ್ರಿಯೆಗಳು ಸಿನಿಮಾ ಪ್ರೇಮಿಗಳಿಂದ ವ್ಯಕ್ತವಾಗಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!