AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿಯಲ್ಲಿ ಪ್ರಸಾರ ಕಾಣಲಿದೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ; ಇಲ್ಲಿದೆ ವಿವರ

‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಸಿನಿಮಾ 2023ರ ಸೆಪ್ಟೆಂಬರ್ 1ರಂದು ರಿಲೀಸ್ ಆಯಿತು. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ರಾವ್ ಮತ್ತೊಮ್ಮೆ ಒಂದಾದರು. ಈ ಚಿತ್ರ ತೆಲುಗಿಗೂ ಡಬ್ ಆಗಿ ರಿಲೀಸ್ ಆಗಿದೆ. ಅಲ್ಲಿಯವರೂ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

ಟಿವಿಯಲ್ಲಿ ಪ್ರಸಾರ ಕಾಣಲಿದೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ; ಇಲ್ಲಿದೆ ವಿವರ
ರಕ್ಷಿತ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Mar 09, 2024 | 10:48 AM

Share

ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ಸೂಪರ್ ಹಿಟ್ ಚಿತ್ರ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಥಿಯೇಟರ್ ಹಾಗೂ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ, ಹೇಮಂತ್ ಬಿ ರಾವ್ ನಿರ್ದೇಶನದ ಈ ಚಿತ್ರ ಜೀ ಕನ್ನಡದಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಭಾನುವಾರ (ಸೆಪ್ಟೆಂಬರ್ 10) ರಾತ್ರಿ 7:30ಕ್ಕೆ ಸಿನಿಮಾ ಪ್ರಸಾರ ಕಾಣಲಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಮಾಹಿತಿ ಹಂಚಿಕೊಂಡಿದೆ.

ರಕ್ಷಿತ್ ಶೆಟ್ಟಿ ಅವರು ಮನು ಆಗಿ ಕಾಣಿಸಿಕೊಂಡರು. ಆಳ ಪ್ರೇಮ ಕಥೆ ಹಾಗೂ ಆ ಪ್ರೀತಿ ಉಳಿಸಿಕೊಳ್ಳಲು ಕಥಾ ನಾಯಕ ಮಾಡುವ ಪ್ರಯತ್ನ ಮತ್ತು ಆ ಪ್ರೀತಿ ಕೊನೆಗೊಂಡಾಗ ಆಗೋ ನೋವಿನ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಚಿತ್ರದಲ್ಲಿ ತೋರಿಸಲಾಗಿದೆ. ಈ ಸಿನಿಮಾನ ಥಿಯೇಟರ್ ಹಾಗೂ ಒಟಿಟಿಯಲ್ಲಿ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ವೀಕ್ಷಿಸಬಹುದು.

ಜೀ ಕನ್ನಡ ವಾಹಿನಿ ಪೋಸ್ಟ್

View this post on Instagram

A post shared by Zee Kannada (@zeekannada)

‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಸಿನಿಮಾ 2023ರ ಸೆಪ್ಟೆಂಬರ್ 1ರಂದು ರಿಲೀಸ್ ಆಯಿತು. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ರಾವ್ ಮತ್ತೊಮ್ಮೆ ಒಂದಾದರು. ಈ ಚಿತ್ರ ತೆಲುಗಿಗೂ ಡಬ್ ಆಗಿ ರಿಲೀಸ್ ಆಗಿದೆ. ಅಲ್ಲಿಯವರೂ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ರುಕ್ಮಿಣಿ ವಸಂತ್ ಪ್ರಿಯಾ ಆಗಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್-ಬಿನಲ್ಲಿ ಈ ದೃಶ್ಯಗಳ ಗಮನಿಸಿದಿರಾ?

ಇತ್ತೀಚೆಗೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಒಟಿಟಿಯಲ್ಲಿ ರಿಲೀಸ್ ಆಗಿದೆ. ಇದು ಮುಂದಿನ ದಿನಗಳಲ್ಲಿ ಟಿವಿಯಲ್ಲಿ ಪ್ರಸಾರ ಕಾಣಲಿದೆ. ‘ಸಪ್ತ ಸಾಗಾರದಾಚೆ ಎಲ್ಲೋ’ ಎಷ್ಟು ಟಿಆರ್​ಪಿ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?