AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ಬಿಡುಗಡೆ ದಿನಾಂಕ ಘೋಷಣೆ; ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ ರಿಲೀಸ್

SSE Movie Release Date: ರಕ್ಷಿತ್ ಶೆಟ್ಟಿ ಅವರು ಸಿನಿಮಾ ವಿಚಾರದಲ್ಲಿ ಎಂದಿಗೂ ಗಡಿಬಿಡಿ ಮಾಡಿದವರಲ್ಲ. ತುಂಬಾನೇ ಶ್ರದ್ಧೆಯಿಂದ ಅವರು ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಾಕಷ್ಟು ಸಮಯ ಹಿಡಿದಿದೆ.

‘ಸಪ್ತ ಸಾಗರದಾಚೆ ಎಲ್ಲೋ’ ಬಿಡುಗಡೆ ದಿನಾಂಕ ಘೋಷಣೆ; ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ ರಿಲೀಸ್
ರಕ್ಷಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Jun 15, 2023 | 11:51 AM

Share

ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಎಂದರೆ ಒಂದು ಹೊಸತನ ಇರುತ್ತದೆ. ಅವರ ಮುಂದಿನ ಸಿನಿಮಾ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ರಿಲೀಸ್ ದಿನಾಂಕ ಶೀಘ್ರದಲ್ಲೇ ಘೋಷಣೆ ಆಗಲಿದೆ ಎಂದು ರಕ್ಷಿತ್ ಶೆಟ್ಟಿ ಬರ್ತ್​ಡೇ ದಿನ ಘೋಷಣೆ ಮಾಡಲಾಗಿತ್ತು. ಈಗ ಆ ಅನೌನ್ಸ್​ಮೆಂಟ್ ಆಗಿದೆ. ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ (SSE Movie) ಬಿಡುಗಡೆ ದಿನಾಂಕ ತಿಳಿಸಿದ್ದಾರೆ. ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ಗಳು ರಿಲೀಸ್ ಆಗಲಿವೆ.

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡರು. ಸಿನಿಮಾ ಕೆಲಸಗಳ ವಿಚಾರದಲ್ಲಿ ರಕ್ಷಿತ್ ಶೆಟ್ಟಿ ಅವರು ಎಂದಿಗೂ ಗಡಿಬಿಡಿ ಮಾಡಿದವರಲ್ಲ. ತುಂಬಾನೇ ಶ್ರದ್ಧೆಯಿಂದ ಅವರು ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಾಕಷ್ಟು ಸಮಯ ಹಿಡಿದಿದೆ. ಈಗ ಈ ಸಿನಿಮಾ ಎರಡು ಭಾಗದಲ್ಲಿ ಬರುತ್ತಿದೆ. ಮೊದಲ ಭಾಗ ಸೆಪ್ಟೆಂಬರ್ 1ಕ್ಕೆ ರಿಲೀಸ್ ಆದರೆ, ಎರಡನೇ ಭಾಗ ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.

‘ನಾನು ಈ ಸಿನಿಮಾ ಕಥೆಯನ್ನು 20 ವರ್ಷದ ಹಿಂದೆಯೇ ಬರೆದಿದ್ದೆ. ಇದು ನನ್ನ ಹೃದಯಕ್ಕೆ ಹತ್ತಿರವಾದ ಕಥೆ. ಸಮಯಕ್ಕೆ ತಕ್ಕಂತೆ ಈ ಕಥೆಯಲ್ಲಿ ವಿಕಸನ ಆಗಿದೆ. ಈ ಕಥೆಯನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಸೈಡ್ ಎ ಸೆಪ್ಟೆಂಬರ್ 1, ಸೈಡ್ ಬಿ ಅಕ್ಟೋಬರ್ 20ರಂದು ರಿಲೀಸ್ ಆಗಲಿದೆ. ಶೀಘ್ರದಲ್ಲೇ ಸಿಗೋಣ’ ಎಂದು ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ಪಾರ್ಟ್​​ನಲ್ಲಿ ಮುಗಿಯಲ್ಲ ‘ಸಪ್ತ ಸಾಗರದಾಚೆ ಎಲ್ಲೋ’; ರಕ್ಷಿತ್ ಬರ್ತ್​​​ಡೇಗೆ ಬಿಗ್ ಅನೌನ್ಸ್​ಮೆಂಟ್

ಈ ಸಿನಿಮಾದ ಮೂಲಕ ಒಂದು ಗಂಭೀರವಾದ ಪ್ರೇಮಕತೆಯನ್ನು ನಿರ್ದೇಶಕ ಹೇಮಂತ್​ ರಾವ್​ ಹೇಳಲಿದ್ದಾರೆ. ರಕ್ಷಿತ್​ಗೆ ಜೊತೆಯಾಗಿ ರುಕ್ಮಿಣಿ ವಸಂತ್​ ನಟಿಸಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಇದೆ. ಈ ಮೊದಲು ರಿಲೀಸ್ ಆದ ರಕ್ಷಿತ್-ಹೇಮಂತ್ ಕಾಂಬಿನೇಷನ್​ನ ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರ ಕೂಡ ಗಂಭೀರ ಕಥೆಯನ್ನೇ ಹೊಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ