AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ಬಿಡುಗಡೆ ದಿನಾಂಕ ಘೋಷಣೆ; ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ ರಿಲೀಸ್

SSE Movie Release Date: ರಕ್ಷಿತ್ ಶೆಟ್ಟಿ ಅವರು ಸಿನಿಮಾ ವಿಚಾರದಲ್ಲಿ ಎಂದಿಗೂ ಗಡಿಬಿಡಿ ಮಾಡಿದವರಲ್ಲ. ತುಂಬಾನೇ ಶ್ರದ್ಧೆಯಿಂದ ಅವರು ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಾಕಷ್ಟು ಸಮಯ ಹಿಡಿದಿದೆ.

‘ಸಪ್ತ ಸಾಗರದಾಚೆ ಎಲ್ಲೋ’ ಬಿಡುಗಡೆ ದಿನಾಂಕ ಘೋಷಣೆ; ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ ರಿಲೀಸ್
ರಕ್ಷಿತ್ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on: Jun 15, 2023 | 11:51 AM

ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಎಂದರೆ ಒಂದು ಹೊಸತನ ಇರುತ್ತದೆ. ಅವರ ಮುಂದಿನ ಸಿನಿಮಾ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ರಿಲೀಸ್ ದಿನಾಂಕ ಶೀಘ್ರದಲ್ಲೇ ಘೋಷಣೆ ಆಗಲಿದೆ ಎಂದು ರಕ್ಷಿತ್ ಶೆಟ್ಟಿ ಬರ್ತ್​ಡೇ ದಿನ ಘೋಷಣೆ ಮಾಡಲಾಗಿತ್ತು. ಈಗ ಆ ಅನೌನ್ಸ್​ಮೆಂಟ್ ಆಗಿದೆ. ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ (SSE Movie) ಬಿಡುಗಡೆ ದಿನಾಂಕ ತಿಳಿಸಿದ್ದಾರೆ. ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ಗಳು ರಿಲೀಸ್ ಆಗಲಿವೆ.

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡರು. ಸಿನಿಮಾ ಕೆಲಸಗಳ ವಿಚಾರದಲ್ಲಿ ರಕ್ಷಿತ್ ಶೆಟ್ಟಿ ಅವರು ಎಂದಿಗೂ ಗಡಿಬಿಡಿ ಮಾಡಿದವರಲ್ಲ. ತುಂಬಾನೇ ಶ್ರದ್ಧೆಯಿಂದ ಅವರು ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಾಕಷ್ಟು ಸಮಯ ಹಿಡಿದಿದೆ. ಈಗ ಈ ಸಿನಿಮಾ ಎರಡು ಭಾಗದಲ್ಲಿ ಬರುತ್ತಿದೆ. ಮೊದಲ ಭಾಗ ಸೆಪ್ಟೆಂಬರ್ 1ಕ್ಕೆ ರಿಲೀಸ್ ಆದರೆ, ಎರಡನೇ ಭಾಗ ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.

‘ನಾನು ಈ ಸಿನಿಮಾ ಕಥೆಯನ್ನು 20 ವರ್ಷದ ಹಿಂದೆಯೇ ಬರೆದಿದ್ದೆ. ಇದು ನನ್ನ ಹೃದಯಕ್ಕೆ ಹತ್ತಿರವಾದ ಕಥೆ. ಸಮಯಕ್ಕೆ ತಕ್ಕಂತೆ ಈ ಕಥೆಯಲ್ಲಿ ವಿಕಸನ ಆಗಿದೆ. ಈ ಕಥೆಯನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಸೈಡ್ ಎ ಸೆಪ್ಟೆಂಬರ್ 1, ಸೈಡ್ ಬಿ ಅಕ್ಟೋಬರ್ 20ರಂದು ರಿಲೀಸ್ ಆಗಲಿದೆ. ಶೀಘ್ರದಲ್ಲೇ ಸಿಗೋಣ’ ಎಂದು ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ಪಾರ್ಟ್​​ನಲ್ಲಿ ಮುಗಿಯಲ್ಲ ‘ಸಪ್ತ ಸಾಗರದಾಚೆ ಎಲ್ಲೋ’; ರಕ್ಷಿತ್ ಬರ್ತ್​​​ಡೇಗೆ ಬಿಗ್ ಅನೌನ್ಸ್​ಮೆಂಟ್

ಈ ಸಿನಿಮಾದ ಮೂಲಕ ಒಂದು ಗಂಭೀರವಾದ ಪ್ರೇಮಕತೆಯನ್ನು ನಿರ್ದೇಶಕ ಹೇಮಂತ್​ ರಾವ್​ ಹೇಳಲಿದ್ದಾರೆ. ರಕ್ಷಿತ್​ಗೆ ಜೊತೆಯಾಗಿ ರುಕ್ಮಿಣಿ ವಸಂತ್​ ನಟಿಸಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಇದೆ. ಈ ಮೊದಲು ರಿಲೀಸ್ ಆದ ರಕ್ಷಿತ್-ಹೇಮಂತ್ ಕಾಂಬಿನೇಷನ್​ನ ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರ ಕೂಡ ಗಂಭೀರ ಕಥೆಯನ್ನೇ ಹೊಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ