AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ಬಿಡುಗಡೆ ದಿನಾಂಕ ಘೋಷಣೆ; ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ ರಿಲೀಸ್

SSE Movie Release Date: ರಕ್ಷಿತ್ ಶೆಟ್ಟಿ ಅವರು ಸಿನಿಮಾ ವಿಚಾರದಲ್ಲಿ ಎಂದಿಗೂ ಗಡಿಬಿಡಿ ಮಾಡಿದವರಲ್ಲ. ತುಂಬಾನೇ ಶ್ರದ್ಧೆಯಿಂದ ಅವರು ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಾಕಷ್ಟು ಸಮಯ ಹಿಡಿದಿದೆ.

‘ಸಪ್ತ ಸಾಗರದಾಚೆ ಎಲ್ಲೋ’ ಬಿಡುಗಡೆ ದಿನಾಂಕ ಘೋಷಣೆ; ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ ರಿಲೀಸ್
ರಕ್ಷಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Jun 15, 2023 | 11:51 AM

Share

ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಎಂದರೆ ಒಂದು ಹೊಸತನ ಇರುತ್ತದೆ. ಅವರ ಮುಂದಿನ ಸಿನಿಮಾ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ರಿಲೀಸ್ ದಿನಾಂಕ ಶೀಘ್ರದಲ್ಲೇ ಘೋಷಣೆ ಆಗಲಿದೆ ಎಂದು ರಕ್ಷಿತ್ ಶೆಟ್ಟಿ ಬರ್ತ್​ಡೇ ದಿನ ಘೋಷಣೆ ಮಾಡಲಾಗಿತ್ತು. ಈಗ ಆ ಅನೌನ್ಸ್​ಮೆಂಟ್ ಆಗಿದೆ. ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ (SSE Movie) ಬಿಡುಗಡೆ ದಿನಾಂಕ ತಿಳಿಸಿದ್ದಾರೆ. ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ಗಳು ರಿಲೀಸ್ ಆಗಲಿವೆ.

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡರು. ಸಿನಿಮಾ ಕೆಲಸಗಳ ವಿಚಾರದಲ್ಲಿ ರಕ್ಷಿತ್ ಶೆಟ್ಟಿ ಅವರು ಎಂದಿಗೂ ಗಡಿಬಿಡಿ ಮಾಡಿದವರಲ್ಲ. ತುಂಬಾನೇ ಶ್ರದ್ಧೆಯಿಂದ ಅವರು ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಾಕಷ್ಟು ಸಮಯ ಹಿಡಿದಿದೆ. ಈಗ ಈ ಸಿನಿಮಾ ಎರಡು ಭಾಗದಲ್ಲಿ ಬರುತ್ತಿದೆ. ಮೊದಲ ಭಾಗ ಸೆಪ್ಟೆಂಬರ್ 1ಕ್ಕೆ ರಿಲೀಸ್ ಆದರೆ, ಎರಡನೇ ಭಾಗ ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.

‘ನಾನು ಈ ಸಿನಿಮಾ ಕಥೆಯನ್ನು 20 ವರ್ಷದ ಹಿಂದೆಯೇ ಬರೆದಿದ್ದೆ. ಇದು ನನ್ನ ಹೃದಯಕ್ಕೆ ಹತ್ತಿರವಾದ ಕಥೆ. ಸಮಯಕ್ಕೆ ತಕ್ಕಂತೆ ಈ ಕಥೆಯಲ್ಲಿ ವಿಕಸನ ಆಗಿದೆ. ಈ ಕಥೆಯನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಸೈಡ್ ಎ ಸೆಪ್ಟೆಂಬರ್ 1, ಸೈಡ್ ಬಿ ಅಕ್ಟೋಬರ್ 20ರಂದು ರಿಲೀಸ್ ಆಗಲಿದೆ. ಶೀಘ್ರದಲ್ಲೇ ಸಿಗೋಣ’ ಎಂದು ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ಪಾರ್ಟ್​​ನಲ್ಲಿ ಮುಗಿಯಲ್ಲ ‘ಸಪ್ತ ಸಾಗರದಾಚೆ ಎಲ್ಲೋ’; ರಕ್ಷಿತ್ ಬರ್ತ್​​​ಡೇಗೆ ಬಿಗ್ ಅನೌನ್ಸ್​ಮೆಂಟ್

ಈ ಸಿನಿಮಾದ ಮೂಲಕ ಒಂದು ಗಂಭೀರವಾದ ಪ್ರೇಮಕತೆಯನ್ನು ನಿರ್ದೇಶಕ ಹೇಮಂತ್​ ರಾವ್​ ಹೇಳಲಿದ್ದಾರೆ. ರಕ್ಷಿತ್​ಗೆ ಜೊತೆಯಾಗಿ ರುಕ್ಮಿಣಿ ವಸಂತ್​ ನಟಿಸಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಇದೆ. ಈ ಮೊದಲು ರಿಲೀಸ್ ಆದ ರಕ್ಷಿತ್-ಹೇಮಂತ್ ಕಾಂಬಿನೇಷನ್​ನ ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರ ಕೂಡ ಗಂಭೀರ ಕಥೆಯನ್ನೇ ಹೊಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ