AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ಬಿಡುಗಡೆ ದಿನಾಂಕ ಘೋಷಣೆ; ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ ರಿಲೀಸ್

SSE Movie Release Date: ರಕ್ಷಿತ್ ಶೆಟ್ಟಿ ಅವರು ಸಿನಿಮಾ ವಿಚಾರದಲ್ಲಿ ಎಂದಿಗೂ ಗಡಿಬಿಡಿ ಮಾಡಿದವರಲ್ಲ. ತುಂಬಾನೇ ಶ್ರದ್ಧೆಯಿಂದ ಅವರು ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಾಕಷ್ಟು ಸಮಯ ಹಿಡಿದಿದೆ.

‘ಸಪ್ತ ಸಾಗರದಾಚೆ ಎಲ್ಲೋ’ ಬಿಡುಗಡೆ ದಿನಾಂಕ ಘೋಷಣೆ; ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ ರಿಲೀಸ್
ರಕ್ಷಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Jun 15, 2023 | 11:51 AM

Share

ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಎಂದರೆ ಒಂದು ಹೊಸತನ ಇರುತ್ತದೆ. ಅವರ ಮುಂದಿನ ಸಿನಿಮಾ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ರಿಲೀಸ್ ದಿನಾಂಕ ಶೀಘ್ರದಲ್ಲೇ ಘೋಷಣೆ ಆಗಲಿದೆ ಎಂದು ರಕ್ಷಿತ್ ಶೆಟ್ಟಿ ಬರ್ತ್​ಡೇ ದಿನ ಘೋಷಣೆ ಮಾಡಲಾಗಿತ್ತು. ಈಗ ಆ ಅನೌನ್ಸ್​ಮೆಂಟ್ ಆಗಿದೆ. ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ (SSE Movie) ಬಿಡುಗಡೆ ದಿನಾಂಕ ತಿಳಿಸಿದ್ದಾರೆ. ಎರಡೇ ತಿಂಗಳಲ್ಲಿ ಎರಡೂ ಪಾರ್ಟ್​ಗಳು ರಿಲೀಸ್ ಆಗಲಿವೆ.

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡರು. ಸಿನಿಮಾ ಕೆಲಸಗಳ ವಿಚಾರದಲ್ಲಿ ರಕ್ಷಿತ್ ಶೆಟ್ಟಿ ಅವರು ಎಂದಿಗೂ ಗಡಿಬಿಡಿ ಮಾಡಿದವರಲ್ಲ. ತುಂಬಾನೇ ಶ್ರದ್ಧೆಯಿಂದ ಅವರು ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಾಕಷ್ಟು ಸಮಯ ಹಿಡಿದಿದೆ. ಈಗ ಈ ಸಿನಿಮಾ ಎರಡು ಭಾಗದಲ್ಲಿ ಬರುತ್ತಿದೆ. ಮೊದಲ ಭಾಗ ಸೆಪ್ಟೆಂಬರ್ 1ಕ್ಕೆ ರಿಲೀಸ್ ಆದರೆ, ಎರಡನೇ ಭಾಗ ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.

‘ನಾನು ಈ ಸಿನಿಮಾ ಕಥೆಯನ್ನು 20 ವರ್ಷದ ಹಿಂದೆಯೇ ಬರೆದಿದ್ದೆ. ಇದು ನನ್ನ ಹೃದಯಕ್ಕೆ ಹತ್ತಿರವಾದ ಕಥೆ. ಸಮಯಕ್ಕೆ ತಕ್ಕಂತೆ ಈ ಕಥೆಯಲ್ಲಿ ವಿಕಸನ ಆಗಿದೆ. ಈ ಕಥೆಯನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಸೈಡ್ ಎ ಸೆಪ್ಟೆಂಬರ್ 1, ಸೈಡ್ ಬಿ ಅಕ್ಟೋಬರ್ 20ರಂದು ರಿಲೀಸ್ ಆಗಲಿದೆ. ಶೀಘ್ರದಲ್ಲೇ ಸಿಗೋಣ’ ಎಂದು ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ಪಾರ್ಟ್​​ನಲ್ಲಿ ಮುಗಿಯಲ್ಲ ‘ಸಪ್ತ ಸಾಗರದಾಚೆ ಎಲ್ಲೋ’; ರಕ್ಷಿತ್ ಬರ್ತ್​​​ಡೇಗೆ ಬಿಗ್ ಅನೌನ್ಸ್​ಮೆಂಟ್

ಈ ಸಿನಿಮಾದ ಮೂಲಕ ಒಂದು ಗಂಭೀರವಾದ ಪ್ರೇಮಕತೆಯನ್ನು ನಿರ್ದೇಶಕ ಹೇಮಂತ್​ ರಾವ್​ ಹೇಳಲಿದ್ದಾರೆ. ರಕ್ಷಿತ್​ಗೆ ಜೊತೆಯಾಗಿ ರುಕ್ಮಿಣಿ ವಸಂತ್​ ನಟಿಸಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಇದೆ. ಈ ಮೊದಲು ರಿಲೀಸ್ ಆದ ರಕ್ಷಿತ್-ಹೇಮಂತ್ ಕಾಂಬಿನೇಷನ್​ನ ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರ ಕೂಡ ಗಂಭೀರ ಕಥೆಯನ್ನೇ ಹೊಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More