AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಹೀರೋ ಜೊತೆ ತೆಲುಗು ಸಿನಿಮಾ ಘೋಷಿಸಿದ ಸಪ್ತಮಿ ಗೌಡ

ಸಪ್ತಮಿ ಗೌಡ ಅವರು ತೆಲುಗು ಚಿತ್ರರಂಗಕ್ಕೆ 'ತಮ್ಮುಡು' ಚಿತ್ರದ ಮೂಲಕ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ 'ಕಾಂತಾರ'ದ ಲೀಲಾ ಪಾತ್ರವನ್ನು ನೆನಪಿಸುತ್ತದೆ. ದಿಲ್ ರಾಜು ನಿರ್ಮಿಸುತ್ತಿರುವ ಈ ಚಿತ್ರ ಜುಲೈ 4ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಯಶಸ್ಸು ಸಪ್ತಮಿ ಅವರ ತೆಲುಗು ಚಿತ್ರರಂಗದ ಭವಿಷ್ಯವನ್ನು ನಿರ್ಧರಿಸಲಿದೆ.

ರಶ್ಮಿಕಾ ಮಂದಣ್ಣ ಹೀರೋ ಜೊತೆ ತೆಲುಗು ಸಿನಿಮಾ ಘೋಷಿಸಿದ ಸಪ್ತಮಿ ಗೌಡ
ರಶ್ಮಿಕಾ-ಸಪ್ತಮಿ
ರಾಜೇಶ್ ದುಗ್ಗುಮನೆ
|

Updated on:May 14, 2025 | 6:59 AM

Share

ನಟಿ ಸಪ್ತಮಿ ಗೌಡ (Sapthami Gowda) ಅವರು ‘ಕಾಂತಾರ’ ಬಳಿಕ ದೊಡ್ಡ ಮಟ್ಟದ ಹಿಟ್ ಪಡೆದರು. ಆದರೆ, ಆ ಬಳಿಕ ಅವರು ಬಂದ ಆಫರ್​ಗಳೆಲ್ಲವನ್ನೂ ಒಪ್ಪಿಲ್ಲ. ಬದಲಿಗೆ ತಾಳ್ಮೆ ತೆಗೆದುಕೊಂಡು ತಮಗೆ ಸರಿ ಹೊಂದುವ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ನಟಿಸಲು ಆರಂಭಿಸಿದರು. ಅವರು ಅಭಿನಯಿಸಿದ್ದು ಕಡಿಮೆ ಸಿನಿಮಾಗಳಾದರೂ ಭಿನ್ನ ಪಾತ್ರಗಳನ್ನು ಮಾಡಿದ್ದಾರೆ. ಈಗ ಅವರು ತೆಲುಗಿಗೆ ಹಾರಲು ರೆಡಿ ಆಗಿದ್ದಾರೆ. ಈ ಸಿನಿಮಾದ ಪಾತ್ರವರ್ಗ ಪರಿಚಯಿಸೋ ಟೀಸರ್ ಕೂಡ ಗಮನ ಸೆಳೆದಿದೆ. ರಶ್ಮಿಕಾ ಮಂದಣ್ಣ ಹೀರೋ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಈ ಮೊದಲು ಟಾಲಿವುಡ್ ಹೀರೋ ನಿತೀನ್ ಜೊತೆ ‘ಭೀಷ್ಮ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದರು. ಈ ಚಿತ್ರ ಹಿಟ್ ಆಗಿತ್ತು. ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈಗ ನಿತೀನ್ ಅವರು ‘ತಮ್ಮುಡು’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಪ್ತಮಿ ನಾಯಕಿ ಅನ್ನೋದು ವಿಶೇಷ. ಈ ಚಿತ್ರವನ್ನು ‘ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್’ ಅಡಿಯಲ್ಲಿ ದಿಲ್ ರಾಜು ಅವರು ನಿರ್ಮಾಣ ಮಾಡುತ್ತಿದ್ದಾರೆ. ವೇಣು ಶ್ರೀರಾಮ್ ನಿರ್ದೇಶನ ಮಾಡುತ್ತಿದ್ದಾರೆ. ‘ಮೂಡ್ ಆಫ್ ತಮ್ಮುಡು’ ಹೆಸರಿನ ವಿಡಿಯೋ ರಿಲೀಸ್ ಆಗಿದ್ದು, ವಿವಿಧ ಪಾತ್ರಗಳ ಪರಿಚಯ ಆಗಿದೆ.

ಇದನ್ನೂ ಓದಿ
Image
ರಾಜ್​ಕುಮಾರ್ ಸದಾ ಬಿಳಿ ಪಂಚೆ, ಶರ್ಟ್​ನಲ್ಲೇ ಇರುತ್ತಿದ್ದರೇಕೆ?
Image
ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?
Image
‘ಕೂಲಿ’ ಸಿನಿಮಾದ ಬಹುತೇಕ ಶೂಟ್​ನ ಬಾಡಿ ಡಬಲ್​ ಮೂಲಕವೇ ಮುಗಿಸಿದ ನಿರ್ದೇಶಕ
Image
ಕಲರ್ಸ್​​ ಧಾರಾವಾಹಿಯಲ್ಲಿ ಗೌತಮಿ ಜಾಧವ್; ಪ್ರೋಮೋ ಮೂಲಕ ಬಿಗ್ ಸರ್​ಪ್ರೈಸ್

ಈ ಚಿತ್ರದಲ್ಲಿ ನಿತೀನ್, ಲಯಾ, ಸಪ್ತಮಿ ಗೌಡ, ಶ್ವಾಸಿಕ್ ವಿಜಯ್, ಸೌರಭ್ ಸಚ್​ದೇವ್, ವರ್ಷಾ ಬೊಲ್ಲಮ್ಮ ಮೊದಲಾದವರು ನಟಿಸುತ್ತಿದ್ದಾರೆ. ಈ ಚಿತ್ರದ ಗ್ಲಿಂಪ್ಸ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಹಿರಿಯ ನಟಿ ಲಯಾ ಅವರು ನಿತೀನ್ ಸಹೋದರಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರವನ್ನು ದಿಲ್ ರಾಜು ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ

ಸಪ್ತಮಿ ಗೌಡ ಅವರು ‘ಕಾಂತಾರ’ ಚಿತ್ರದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ಸೀರೆ ಉಟ್ಟು ಗಮನ ಸೆಳೆದಿದ್ದರು. ಈಗ ಅವರಿಗೆ ಸಿಕ್ಕಿರೋ ಪಾತ್ರವು ಮತ್ತೆ ‘ಕಾಂತಾರ’ ಚಿತ್ರದಲ್ಲಿ ಅವರು ಮಾಡಿದ್ದ ಲೀಲಾ ಹೆಸರಿನ ಪಾತ್ರವನ್ನು ನೆನಪಿಸುತ್ತದೆ. ಈ ಚಿತ್ರಕ್ಕೆ ಕನ್ನಡದ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ ಅನ್ನೋದು ವಿಶೇಷ. ಈ ಸಿನಿಮಾ ಜುಲೈ 4ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಹಿಟ್ ಆದರೆ, ಸಪ್ತಮಿ ಗೌಡ ಅವರಿಗೆ ಟಾಲಿವುಡ್​ನಲ್ಲಿ ಹೆಚ್ಚು ಆಫರ್​ಗಳು ಬರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Wed, 14 May 25

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ